Homeಕರ್ನಾಟಕಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಬಿಜೆಪಿ ವಿರುದ್ಧ ಮತ ಚಲಾಯಿಸುವ ಅಲ್ಪಸಂಖ್ಯಾತ, ದಲಿತ ಮತ್ತು ಹಿಂದುಳಿದ ಸಮುದಾಯಗಳ ಹೆಚ್ಚಿನ ಸಂಖ್ಯೆಯ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಬಿಜೆಪಿ ಸರ್ಕಾರ ಕೈಬಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಚುನಾವಣೆಯಲ್ಲಿ ಮೇಲುಗೈ ಸಾಧಿಸಲು ಈ ರೀತಿ ಮಾಡಲಾಗಿದೆ. ಹೀಗೆ ಡಿಲೀಟ್ ಮಾಡಲಾದ ಮತದಾರರ ಸಂಖ್ಯೆ ಲಕ್ಷದಷ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

“ನಾವು ಮುಂದಿನ ದಿನಗಳಲ್ಲಿ (ಡಿಲೀಟ್ ಮಾಡಲಾದ ಮತದಾರರ) ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ನಮ್ಮ ಬಳಿ ಅಧಿಕೃತ ಪಟ್ಟಿ ಇದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನೇಕ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ಮೌಲ್ಯಮಾಪನ ಮಾಡಲು ಮತ್ತು ತೆಗೆದುಹಾಕಲಾದ ಹೆಸರುಗಳನ್ನು ಗುರುತಿಸಲು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದಿದ್ದಾರೆ.

ರಾಜ್ಯಾದ್ಯಂತ ಮತ್ತು ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ವಿಶೇಷವಾಗಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಅನೇಕ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಬಿಎಂಪಿ ವಾರ್ಡ್‌ಗಳ ಮೀಸಲಾತಿ ಪಟ್ಟಿಯನ್ನು ಕಾಂಗ್ರೆಸ್‌ಗೆ ಹಿನ್ನಡೆಯಾಗುವಂತೆ ಸಿದ್ಧಪಡಿಸಲಾಗಿದೆ. ಕರಡು ಮೀಸಲಾತಿ ಪಟ್ಟಿಯ ವಿರುದ್ಧ ಸಲ್ಲಿಸಲಾದ 3,000 ಆಕ್ಷೇಪಣೆಗಳಲ್ಲಿ ಯಾವುದನ್ನೂ ಪರಿಗಣಿಸಲಾಗಿಲ್ಲ ಎಂದು ದೂರಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ವಾರ್ಡ್‌ಗಳಲ್ಲಿ 9, ಜಯನಗರದ ಒಂಬತ್ತರಲ್ಲಿ 8, ಬಿಟಿಎಂ ಲೇಔಟ್‌ನ ಎಲ್ಲಾ 8 ಮತ್ತು ಗಾಂಧಿನಗರದ 7 ವಾರ್ಡ್‌ಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಕಾಂಗ್ರೆಸ್ ಪ್ರತಿನಿಧಿಸುವ ಕ್ಷೇತ್ರಗಳ 93 ವಾರ್ಡ್‌ಗಳಲ್ಲಿ 76 ಮಹಿಳೆಯರಿಗೆ ಮೀಸಲಿಡಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

“ಮಹಿಳೆಯರಿಗೆ ನೀಡುವ ಮೀಸಲಾತಿಯನ್ನು ನಾವು ವಿರೋಧಿಸುವುದಿಲ್ಲ. ಅವರನ್ನು ರಾಜಕೀಯವಾಗಿ ಸಬಲೀಕರಣಗೊಳಿಸಲು ಬದ್ಧರಾಗಿದ್ದೇವೆ. ಆದರೆ ಮಹಿಳೆಯರಿಗೆ ನೀಡುವ ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕು. ನಿರ್ದಿಷ್ಟ ಕ್ಷೇತ್ರಗಳಲ್ಲಿ ಮಾತ್ರ ಕೇಂದ್ರೀಕರಿಸುವುದು ಅನ್ಯಾಯ” ಎಂದು ಸ್ಪಷ್ಟಪಡಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಜ್ಯ ಕಾಂಗ್ರೆಸ್ ಯೋಜಿಸಿರುವ ‘ಸ್ವಾತಂತ್ರ್ಯ ಮೆರವಣಿಗೆ’ಯಲ್ಲಿ ಭಾಗವಹಿಸಲು 29,000 ಜನರು ನೋಂದಾಯಿಸಿಕೊಂಡಿದ್ದಾರೆ ಎಂದಿರುವ ಅವರು, ಭಾಗವಹಿಸುವವರು ಸಾರ್ವಜನಿಕ ಸಾರಿಗೆಯಲ್ಲಿ ಬರಬೇಕೆಂದು ಕೋರಿದ್ದಾರೆ

ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಮೆಟ್ರೋ ರೈಲು ಬಳಕೆದಾರರಿಗೆ 50% ರಿಯಾಯತಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...