Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ: ಆರ್‌ಜೆಡಿ

ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ: ಆರ್‌ಜೆಡಿ

ಜೆಡಿಯು ಆರ್‌ಜೆಡಿ ಸೇರಿದರೆ 125 ಸ್ಥಾನಗಳೊಂದಿಗೆ ಸುಲಭವಾಗಿ ಬಹುಮತ ಸಾಧಿಸಬಹುದಾಗಿದೆ

- Advertisement -
- Advertisement -

ಬಿಹಾರದಲ್ಲಿ ಉಂಟಾಗಿರುವ ಬಿಜೆಪಿ-ಜೆಡಿಯು ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯದ ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಆರ್‌ಜೆಡಿಯು, ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ ಎಂದಿದೆ.

ಆರ್‌ಜೆಡಿ ಪಕ್ಷದ ಹಿರಿಯ ಮುಖಂಡರು “ಜೆಡಿಯು ಜೊತೆಗೂಡಿ ಸರ್ಕಾರ ರಚಿಸಿಲು ತೇಜಸ್ವಿ ಯಾದವ್ ಸಿದ್ದವಿದ್ದಾರೆ. ಆದರೆ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡು ಹೊರಬರಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ. ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ಇಂದು ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಎಂ ನಿತೀಶ್ ಕುಮಾರ್ ಬಿಜೆಪಿಯ ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ರನ್ನು ಭೇಟಿಯಾಗಲಿದ್ದಾರೆ.

ಬಿಜೆಪಿ ವರ್ಸಸ್ ಜೆಡಿಯು – ದಶಕಗಳ ಭಿನ್ನಮತ

2013ರವರೆಗೆ ಬಿಜೆಪಿ ಜೊತೆಗಿದ್ದ ಜೆಡಿಯು ಆ ಸಂಬಂಧಕ್ಕೆ ತಿಲಾಂಜಲಿ ಆಡಿ ಮಹಾಘಟಬಂಧನ್ ಜೊತೆಗೂಡಿ 2015ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಿತ್ತು. ಆರ್‌ಜೆಡಿ ಮತ್ತು ಕಾಂಗ್ರೆಸ್‌ ಜೊತೆಗೂಡಿ ಅಧಿಕಾರ ಹಿಡಿದಿದ್ದ ಅದು 2017ರಲ್ಲಿ ಮೈತ್ರಿ ತೊರೆದು ಬಿಜೆಪಿ ಪಾಳಯ ಸೇರಿತ್ತು. 2020ರಲ್ಲಿ ಕೇವಲ 45 ಸೀಟು ಗೆದ್ದರೂ ಸಹ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಈಗ ಮತ್ತು ಬಿಜೆಪಿ ತೊರೆದು ಮಹಾ ಘಟಬಂಧನ್‌ ಕಡೆ ಮುಖ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...