Homeಮುಖಪುಟಯುಪಿ: ತಲೆಮರೆಸಿಕೊಂಡ ಬಿಜೆಪಿ ನಾಯಕ; ಹಿಡಿದುಕೊಟ್ಟವರಿಗೆ 25,000 ರೂ. ಬಹುಮಾನ ಘೋಷಣೆ

ಯುಪಿ: ತಲೆಮರೆಸಿಕೊಂಡ ಬಿಜೆಪಿ ನಾಯಕ; ಹಿಡಿದುಕೊಟ್ಟವರಿಗೆ 25,000 ರೂ. ಬಹುಮಾನ ಘೋಷಣೆ

- Advertisement -
- Advertisement -

ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಳಿಕ ಪರಾರಿಯಾಗಿರುವ ರಾಜಕಾರಣಿ ಶ್ರೀಕಾಂತ್ ತ್ಯಾಗಿ ಅವರನ್ನು ಹಿಡಿದುಕೊಟ್ಟವರಿಗೆ 25,000 ರೂಪಾಯಿ ಬಹುಮಾನವನ್ನು ನೋಯ್ಡಾ ಪೊಲೀಸರು ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನೋಯ್ಡಾದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ, ಬಿಜೆಪಿ ನಾಯಕ ಎಂದು ಹೇಳಿಕೊಳ್ಳುವ ಶ್ರೀಕಾಂತ್ ತ್ಯಾಗಿ ಅವರ ಮನೆಯ ಒಂದು ಭಾಗವನ್ನು ಯೋಗಿ ಸರ್ಕಾರದ ಬುಲ್ಡೋಜರ್‌ಗಳು ಕೆಡವಿವೆ. ಈ ಬೆನ್ನಲ್ಲೇ ತ್ಯಾಗಿ ಬಂಧನಕ್ಕೆ ಆಗ್ರಹಗಳು ಕೇಳಿಬರುತ್ತಿವೆ.

ಗ್ರೀನ್‌ ಬೆಲ್ಟ್‌ಅನ್ನು ಅತಿಕ್ರಮಿಸಿದ ಆರೋಪದ ಮೇಲೆ ತ್ಯಾಗಿ ವಿರುದ್ಧ ನೋಯ್ಡಾ ಪ್ರಾಧಿಕಾರ ಮತ್ತು ಗೌತಮ್ ಬುದ್ಧ ನಗರ ಪೊಲೀಸರಿಗೆ 2019ರಲ್ಲಿ ಹೌಸಿಂಗ್ ಸೊಸೈಟಿಯ ನಿವಾಸಿಗಳು ದೂರು ನೀಡಿದ್ದರು.

ಅಕ್ಟೋಬರ್ 16, 2019ರಂದು, ನೋಯ್ಡಾ ಪ್ರಾಧಿಕಾರವು 15 ದಿನಗಳಲ್ಲಿ ಅತಿಕ್ರಮಣವನ್ನು ತೆರವು ಮಾಡುವಂತೆ ತ್ಯಾಗಿಗೆ ನೋಟಿಸ್ ನೀಡಿತ್ತು. ಆದಾಗ್ಯೂ ನೋಯ್ಡಾ ಪ್ರಾಧಿಕಾರವು ಕಳೆದ ವರ್ಷ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ತ್ಯಾಗಿ ಹೇಳಿಕೊಂಡಿದ್ದರು.

ಸೋಮವಾರ ಬುಲ್ಡೋಜರ್‌ಗಳು ನೋಯ್ಡಾದ ಸೆಕ್ಟರ್ 93 ಬಿನಲ್ಲಿರುವ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿರುವ ತ್ಯಾಗಿ ಅವರ ಮನೆಯ ಎರಡು ಗಾಜಿನ ಛಾವಣಿಗಳನ್ನು ಒಡೆದು ಹಾಕಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು.

ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಶ್ರೀಕಾಂತ್‌ ತ್ಯಾಗಿ ಅವರನ್ನು ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶನಿವಾರ ಹೇಳಿದೆ. ಆದರೆ ಆರೋಪಿಯು ಪರಾರಿಯಾಗಿದ್ದು, ಆತನ ಪತ್ತೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಅವರು ಉತ್ತರ ಪ್ರದೇಶ ಡಿಜಿಪಿಗೆ ಪತ್ರ ಬರೆದು ಘಟನೆಯ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ್ದು, ದುಷ್ಕರ್ಮಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಅವನನ್ನು ಬಂಧಿಸುವಂತೆ ಕೋರಿದ್ದಾರೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ತ್ಯಾಗಿ ಬಿಜೆಪಿಯ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಆಡಳಿತ ಪಕ್ಷದ ಯುವ ಕಿಸಾನ್ ಸಮಿತಿಯ ರಾಷ್ಟ್ರೀಯ ಸಹ-ಸಂಯೋಜಕ ಎಂದು ಗುರುತಿಸಿಕೊಂಡಿದ್ದಾನೆ. ಆದರೆ, ಬಿಜೆಪಿ ನೋಯ್ಡಾ ಮಹಾನಗರ ಮುಖ್ಯಸ್ಥ ಮನೋಜ್ ಗುಪ್ತಾ ಅವರು ತ್ಯಾಗಿ ಆಡಳಿತ ಪಕ್ಷದ ಸದಸ್ಯನಲ್ಲ ಎಂದು ಹೇಳಿಕೊಂಡಿದ್ದಾರೆ.

ಇದರ ನಡುವೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಏಳು ಜನರು ಗಲಾಟೆ ಮಾಡಿದ ನಂತರ ನೋಯ್ಡಾ ಎರಡನೇ ಹಂತದ ಪೊಲೀಸ್ ಠಾಣೆಯ ಉಸ್ತುವಾರಿ ಸುಜಿತ್ ಉಪಾಧ್ಯಾಯ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ನೋಯ್ಡಾ ಪೊಲೀಸ್ ಕಮಿಷನರ್ ಅಲೋಕ್ ಸಿಂಗ್ ಹೇಳಿದ್ದಾರೆ. ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...