Homeಮುಖಪುಟಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಈ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಧಿಕಾರಿಯ ಬದಲು ಬಿಜೆಪಿ ಮುಖಂಡನೊಬ್ಬ ಪ್ರಮಾಣವಚನ ಬೋಧಿಸಿರುವುದು ಟೀಕೆಗೆ ಗುರಿಯಾಗಿದೆ.

- Advertisement -
- Advertisement -

ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಸುಮಾರು ಹದಿನೈದು ಮಹಿಳೆಯರ ಬದಲಿಗೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿರುವ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿರುವ ಕುರಿತು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಧಾರ್ ಮತ್ತು ದಾಮೋಹ್ ಜಿಲ್ಲೆಗಳಲ್ಲಿ ಪಂಚ್ ಹಾಗೂ ಸರಪಂಚ್ ಆಗಿ ಆಯ್ಕೆಯಾಗಿದ್ದ ಕನಿಷ್ಠ ಹದಿನೈದು ಮಹಿಳೆಯರು ಸಭಿಕರ ಸ್ಥಾನದಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರೆ ಅವರ ಗಂಡಂದಿರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕೆ ಅಧಿಕಾರಿಗಳೇ ಅವಕಾಶ ನೀಡಿದ್ದಾರೆಂಬ ಆರೋಪಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಘಟನೆಯು ಚುನಾವಣಾ ರಾಜಕೀಯದಲ್ಲಿ ಮಹಿಳಾ ಮೀಸಲಾತಿಯನ್ನು ಅಪಹಾಸ್ಯ ಮಾಡುತ್ತಿವೆ. ಅದಕ್ಕಿಂತ ಹೆಚ್ಚಾಗಿ, ಧಾರ್‌ನಲ್ಲಿ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಪ್ರಮಾಣ ವಚನ ಬೋಧಿಸುತ್ತಿರುವಾಗ ನಿಯೋಜಿತ ಸರ್ಕಾರಿ ಅಧಿಕಾರಿ ಪಕ್ಕದಲ್ಲೇ ಇದ್ದದ್ದು ಟೀಕೆಗೆ ಗುರಿಯಾಗಿದೆ.

ಈ ಸುದ್ದಿ ಹೊರಬಿದ್ದ ಬಳಿಕ ದಾಮೋಹ್‌ನಲ್ಲಿ ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಯಿತು. ಧಾರ್ ಜಿಲ್ಲೆಯ ಸುಂದ್ರೇಲ್‌‌ ಗ್ರಾಮ ಪಂಚಾಯತ್ ಮತ್ತು ದಾಮೋಹ್‌ನ ಗೈಸಾಬಾದ್ ಪಂಚಾಯತ್‌ನಲ್ಲಿ ಘಟನೆಗಳು ನಡೆದಿವೆ.

ಗುರುವಾರ ಸುಂದ್ರೇಲ್‌ನಲ್ಲಿ, ಸ್ಥಳೀಯ ಬಿಜೆಪಿ ಮುಖಂಡ ರಾಧೇಶ್ಯಾಮ್ ಕಾಸರವಾಡಿಯ ಅವರು ವೇದಿಕೆಯ ಮೇಲೆ ಪ್ರಮಾಣ ವಚನ ಬೋಧಿಸುತ್ತಿರುವಾಗ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ರಾಧಾಬಾಯಿ, ಲಕ್ಷ್ಮೀಬಾಯಿ ಮತ್ತು ಕಿರಣ್ ಬಾಯಿ ಪ್ರೇಕ್ಷಕರಾಗಿ ಕುಳಿತುಕೊಂಡಿದ್ದರು. ಇವರ ಬದಲಿಗೆ ಲಖನ್, ದಿಲೀಪ್ ಮತ್ತು ಜೀವನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ವೇದಿಕೆಯ ದೂರದ ಮೂಲೆಯಲ್ಲಿ ನಿಂತು ಐವರು ಮಹಿಳೆಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೇಲಧಿಕಾರಿಗಳು ಇದನ್ನು ‘ಕಾರ್ಯವಿಧಾನದ ಲೋಪ’ ಎಂದು ಕರೆದಿದ್ದಾರೆ. “ಮಹಿಳೆಯರು ದೂರು ನೀಡಿದರೆ, ಅವರ ಹಕ್ಕುಗಳನ್ನು ಪ್ರತಿಪಾದಿಸಲಾಗುವುದು” ಎಂದಿದ್ದಾರೆ.

“ನಮಗೆ ವಿಷಯ ತಿಳಿಯಿತು. ಘಟನೆಯನ್ನು ಗಂಭೀರವಾಗಿ ತೆಗೆದಕೊಂಡಿದ್ದೇವೆ. ಇದು ಕಾರ್ಯವಿಧಾನದ ಲೋಪವಾಗಿದೆ” ಎಂದು ಧಾರ್ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಲ್.ಮೀನಾ ಅವರು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಸುಂದ್ರೇಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ಬಾದಮ್ ಸಿಂಗ್ ನಿಂಗ್ವಾಲ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಸ್ಥಳೀಯ ರಾಜಕಾರಣಿಯೊಬ್ಬರು ಹೇಗೆ ಪ್ರಮಾಣ ವಚನ ಬೋಧಿಸಿದರು ಎಂದು ನಾವು ಅವರನ್ನು ಕೇಳಿದ್ದೇವೆ ಎಂದು ಮೀನಾ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ಶೋಕಾಸ್ ನೋಟೀಸ್ ಕುರಿತು ಪ್ರತಿಕ್ರಿಯೆ ನೀಡಿರುವ ನಿಂಗ್ವಾಲ್‌, “ಸ್ಥಳೀಯ ನಾಯಕನೇ ಪ್ರಮಾಣ ವಚನ ಬೋಧಿಸಬೇಕೆಂದು ಪ್ರೇಕ್ಷಕರು ಒತ್ತಾಯಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಹಳ್ಳಿಯ ಗಂಡಸರೆಲ್ಲರೂ ಮಹಿಳೆಯರು ಪ್ರಮಾಣ ವಚನ ಸ್ವೀಕರಿಸುವುದನ್ನು ಒಪ್ಪಲು ಸಿದ್ಧರಿರಲಿಲ್ಲ. ಕೌಟುಂಬಿಕ ಪದ್ಧತಿಯನ್ನು ಮೀರಲು ಅವರು ಮುಂದಾಗಲಿಲ್ಲ” ಎಂದಿದ್ದಾರೆ.

“ಪಂಚಾಯತ್ ಚಟುವಟಿಕೆಗಳಲ್ಲಿ ಅವರ ಗಂಡಂದಿರು ಭಾಗವಹಿಸಲು ನಾವು ಅನುಮತಿಸುವುದಿಲ್ಲ ಎಂಬ ಭರವಸೆಯನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ” ಎಂದಿದ್ದಾರೆ.

“ಯಾವುದೇ ವಿಜೇತ ಅಭ್ಯರ್ಥಿಯು ಆಕ್ಷೇಪಣೆಯನ್ನು ಎತ್ತಿದರೆ ಅಥವಾ ಅವರ ಹಕ್ಕುಗಳ ಉಲ್ಲಂಘನೆಯ ಬಗ್ಗೆ ದೂರು ಸಲ್ಲಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಗೆದ್ದ ಅಭ್ಯರ್ಥಿಗಳಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ನಾವು ತರಬೇತಿಗಳನ್ನು ಆಯೋಜಿಸುತ್ತಿದ್ದೇವೆ” ಎಂದು ಅಧಿಕಾರಿ ಮೀನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...