Homeಮುಖಪುಟನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

- Advertisement -
- Advertisement -

ಬಿಜೆಪಿ ಮತ್ತು ಜೆಡಿಯು ನಡುವಿನ ಮೈತ್ರಿಯಲ್ಲಿ ಬಿರುಕುಬಿಟ್ಟಿದ್ದು ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಅವರು ಮತ್ತೊಮ್ಮೆ ಮಗ್ಗಲು ಬದಲಿಸುತ್ತಾರೆಯೇ? ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ನಿತೀಶ್ ಕುಮಾರ್ ಅವರು ದುಡುಕಿನ ರಾಜಕಾರಣಿಯೇನೂ ಅಲ್ಲ. ಹೀಗಾಗಿ ಅವರ ಮುಂದಿರುವ ಆಯ್ಕೆಗಳನ್ನು ಅವರು ಅವಲಂಬಿಸಬಹುದು. ವಿಶೇಷವಾಗಿ ಬಿಜೆಪಿ, ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ನಿತೀಶ್‌ ಅವರನ್ನು ಹೇಗೆ ನೋಡುತ್ತವೆ ಎಂಬುದು ನಿತೀಶ್ ಅವರ ಮುಂದಿನ ನಡೆಯನ್ನು ನಿರ್ಧರಿಸಬಹುದು.

ನಿತೀಶ್ ಅವರ ಮುಂದಿರುವ ಮೂರು ಆಯ್ಕೆಗಳ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವಿಸ್ತೃತವಾಗಿ ವಿಶ್ಲೇಷಣೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯ್ಕೆ 1: ಎನ್‌ಡಿಎ ತೊರೆದು ಮಹಾಘಟಬಂಧನ್‌ಗೆ ಹಿಂತಿರುಗಿ ಸಿಎಂ ಆಗಬಹುದು

ಇದರರ್ಥ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಜೊತೆಗಿನ 2015-2017ರ ವ್ಯವಸ್ಥೆಗೆ ಹಿಂತಿರುಗುವುದಾಗಿದೆ. ಎಡಪಕ್ಷಗಳಾದ ಸಿಪಿಐ-ಎಂಎಲ್, ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಕೂಡ ಈ ಮೈತ್ರಿಕೂಟದ ಭಾಗವಾಗಿವೆ.

ಆದಾಗ್ಯೂ, 2015-17 ಅವಧಿಗಿಂತ ಈಗ ಸಾಕಷ್ಟು ಬದಲಾವಣೆಗಳು ಆಗಿರುವುದರಿಂದ ನಿತೀಶ್ ಕುಮಾರ್ ಅವರು ಮಹಾಘಟಬಂಧನ್‌ಗೆ ಹಿಂತಿರುಗುವುದು ಅಷ್ಟು ಸುಲಭವಲ್ಲ. ನಿತೀಶ್ ಅವರೇ ಈ ಸಮಸ್ಯೆಯನ್ನು ಸೃಷ್ಟಿಸಿಕೊಂಡಿದ್ದಾರೆ.

2017ರಲ್ಲಿ ಅವರು ಎನ್‌ಡಿಎಗೆ ನಿಷ್ಠೆ ತೋರಿದ ರೀತಿಯನ್ನು ಗಮನಿಸಿದರೆ, ಮಹಾಘಟಬಂಧನ್ ಘಟಕಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ಹೆಚ್ಚಿನ ನಂಬಿಕೆಯೂ ಇಲ್ಲ.

ಇದನ್ನೂ ಓದಿರಿ: ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು ಮಹಿಳೆಯರು; ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು!

ಜೆಡಿಯು 2017ರಲ್ಲಿದ್ದ ಸ್ಥಿತಿಗಿಂತ ಈಗ ಹೆಚ್ಚು ದುರ್ಬಲವಾಗಿ ಕಾಣುತ್ತಿದೆ. ಆಗ 71 ಸ್ಥಾನಗಳನ್ನು ಹೊಂದಿತ್ತು, ಈಗ ಕೇವಲ 45 ಸ್ಥಾನಗಳನ್ನು ಹೊಂದಿದೆ. ಮತ್ತೊಂದೆಡೆ, ಆರ್‌ಜೆಡಿ ಬಲಶಾಲಿಯಾಗಿದೆ. ಈಗ 80 ಸ್ಥಾನಗಳನ್ನು ಹೊಂದಿದೆ.

ನಿತೀಶ್ ಕುಮಾರ್ ವಿರುದ್ಧದ ಆಡಳಿತ ವಿರೋಧಿ ನಿಲುವು ಈಗ ಹೆಚ್ಚಾಗಿ ಕಾಣುತ್ತಿದೆ. ಈ ಹಿಂದೆ ಇಷ್ಟು ಪ್ರಮಾಣದ ವಿರೋಧ ಇರಲಿಲ್ಲ. ಆದ್ದರಿಂದ, ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಆರ್‌ಜೆಡಿ ಬೆಂಬಲಿಸಿದರೆ ಆರ್‌ಜೆಡಿಗೆ ತೊಂದರೆಯಾಗಬಹುದು. ಏಕೆಂದರೆ ಆಡಳಿತ ವಿರೋಧಿ ಹೊರೆಯನ್ನು ಆರ್‌ಜೆಡಿಯೂ ಹೊರಬೇಕಾದೀತು.

ಆಯ್ಕೆ 2: ಕೆಲವು ರಿಯಾಯಿತಿಗಳಿಗಾಗಿ ಬಿಜೆಪಿಯೊಂದಿಗೆ ಉಳಿಯುವುದು

ಬಿಜೆಪಿಯು ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸಲು ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ರಾಜ್ಯದ ಉಳಿದ ಭಾಗಗಳಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಿರುವ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜೆಡಿಯು ಪಕ್ಷವನ್ನು ಸೋಲಿಸಲು ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ರೀತಿ ಕಾಣುತ್ತಿದೆ. ಇದು ಬಿಜೆಪಿಯ ಯೋಜನೆಯಂತೆ ಸ್ಪಷ್ಟವಾಗಿ ಕಾಣುತ್ತಿದೆ.

ಜೆಡಿಯು ಪಕ್ಷವನ್ನು ಸ್ವಾಧೀನಪಡಿಸಿಕೊಳ್ಳಲು ಬಿಜೆಪಿಯು ‘ಏಕನಾಥ್ ಶಿಂಧೆ’ ರೀತಿಯ ಮುಖವನ್ನು ಹುಡುಕುತ್ತಿದೆ ಎಂದು ಜೆಡಿಯು ಒಳಗಿನವರು ಆರೋಪಿಸುತ್ತಾರೆ. ಆದರೆ ಜೆಡಿಯುವಿನಲ್ಲಿದ್ದು ಬಿಜೆಪಿಯ ಪರವಿದ್ದ ಆರ್‌ಸಿಪಿ ಸಿಂಗ್ ವಿರುದ್ಧ ನಿತೀಶ್ ಕುಮಾರ್ ಸಮಯೋಚಿತ ಕ್ರಮ ಜರುಗಿಸಿ, ತಂತ್ರಗಾರಿಕೆಯನ್ನು ವಿಫಲಗೊಳಿಸಿದರು.

“ಶಿವಸೇನೆ ನಮಗೆ ಪಾಠ ಕಲಿಸುವ ಅಗತ್ಯವಿಲ್ಲ. ಜೆಡಿಯು ಅನ್ನು ನಾಶಪಡಿಸುವುದು ಅವರ ಅಂತಿಮ ಯೋಜನೆ ಎಂದು ನಮಗೆ ಯಾವಾಗಲೂ ತಿಳಿದಿತ್ತು. ಆದರೆ ಅವರು ನಿತೀಶ್ ಕುಮಾರ್ ಅವರನ್ನು ಸರಿಯಾಗಿ ಗ್ರಹಿಸಿಲ್ಲ. ನಿತೀಶ್‌ ಕುಮಾರ್‌ ಉದ್ಧವ್ ಠಾಕ್ರೆಯಂತಲ್ಲ” ಎಂದು ಜೆಡಿಯು ಹಿರಿಯ ನಾಯಕರೊಬ್ಬರು ಎಂದು ‘ದಿ ಕ್ವಿಂಟ್‌’ಗೆ ತಿಳಿಸಿದ್ದಾರೆ.

ಆದರೆ, 2024ರ ಲೋಕಸಭೆ ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರನ್ನು ಚುನಾವಣಾ ಕಣಕ್ಕಿಳಿಸುವುದು ಬಿಜೆಪಿಗೆ ತೊಂದರೆಯೂ ಆಗಬಹುದು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎಗೆ ಭಾರಿ ಜಯ ದೊರೆತ್ತಿತ್ತು. ಮೈತ್ರಿಕೂಟವು 40 ರಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು.

ಆರ್‌ಜೆಡಿಯ ಮುಸ್ಲಿಂ-ಯಾದವ್ ಓಟ್‌ಬ್ಯಾಂಕ್‌, ಜೆಡಿಯುಗೆ ಮಹಾದಲಿತ್‌, ಎಂಬಿಸಿಗಳು, ಕುರ್ಮಿಗಳ ಬೆಂಬಲ, ಕಾಂಗ್ರೆಸ್‌, ಸಿಪಿಐ-ಎಂಎಲ್‌ ಪ್ರಭಾವ ಮಹಾಘಟಬಂಧನ್‌ ಮೈತ್ರಿಯನ್ನು ಗಟ್ಟಿಗೊಳಿಸುತ್ತದೆ. ಇದು ಎನ್‌ಡಿಎಗೆ ನಷ್ಟ ಉಂಟು ಮಾಡಬಹುದು. ಹೀಗಾಗಿ ಈ ಮೈತ್ರಿಯಾಗದಂತೆ ಬಯಸುವ ಬಿಜೆಪಿಯ ಮೇಲೆ 2024ರವರೆಗೆ ನಿತೀಶ್ ಹಿಡಿತ ಸಾಧಿಸಲೂಬಹುದು. 2024ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಬಿಹಾರದಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಬಯಸಬಹುದು. 2025ರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್, ಆಡಳಿತ ವಿರೋಧಿ ಆಡಳಿತಕ್ಕೆ ಸಿಲುಕಿಕೊಳ್ಳಬಾರದು. ಈಗಲೇ ಬಿಜೆಪಿಯೊಂದಿಗೆ ಸಮಾಧಾನ ಮಾಡಿಕೊಂಡರೆ ನಿತೀಶ್ ಕುಮಾರ್ ಅವರು ಇನ್ನೂ ಎರಡು ವರ್ಷ ಸಿಎಂ ಆಗಬಹುದು.

ಆಯ್ಕೆ 3: ಬಿಹಾರವನ್ನು ತೇಜಸ್ವಿ ಯಾದವ್‌ಗೆ ನೀಡಿ, ರಾಷ್ಟ್ರೀಯ ರಾಜಕೀಯಕ್ಕೆ ತೆರಳುವುದು

ಈ ಚಿಂತನೆಗೆ ಸ್ವಲ್ಪ ಧೈರ್ಯವೂ ಬೇಕಾಗುತ್ತದೆ. ಆದರೆ ಈ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ನಿತೀಶ್ ಕುಮಾರ್ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ತ್ಯಜಿಸಿ, ಬಿಹಾರದ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಅವರನ್ನು ಬೆಂಬಲಿಸಿ, ಎನ್‌ಡಿಎಯೇತರ ಪಕ್ಷಗಳ ಪ್ರಮುಖ ನಾಯಕರಾಗಿ ರಾಷ್ಟ್ರೀಯ ರಾಜಕೀಯಕ್ಕೆ ನಿತೀಶ್ ಕಾಲಿಡಬಹುದು.

ಒಂದು ರೀತಿಯಲ್ಲಿ ಇದು ನಿತೀಶ್ ಕುಮಾರ್‌ ಅವರಿಗೆ ಆಸಕ್ತಿದಾಯಕ ಆಯ್ಕೆಯಾಗಿದೆ. ಬಿಜೆಪಿ, ಆರ್‌ಜೆಡಿ ಪ್ರಾಬಲ್ಯಕ್ಕೆ ಹೋಲಿಸಿದರೆ ನಿತಿಶ್‌ಕುಮಾರ್‌ ಅವರ ಹಿಡಿತ ದುರ್ಬಲಗೊಂಡಿದೆ. ಮತ್ತೊಂದೆಡೆ ಬಿಜೆಪಿ ಮತ್ತು ಆರ್‌ಜೆಡಿ ಬಲಗೊಂಡಿವೆ.

ಇದನ್ನೂ ಓದಿರಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

2025ರ ವಿಧಾನಸಭಾ ಚುನಾವಣೆಯ ವೇಳೆಗೆ, ನಿತೀಶ್ ಕುಮಾರ್ ಅವರು 75ನೇ ವರ್ಷಕ್ಕೆ ಕಾಲಿಡುತ್ತಾರೆ. ಐದನೇ ಅವಧಿಗೆ ಅಧಿಕಾರಕ್ಕಾಗಿ ಹೋರಾಡುವುದು ಅವರಿಗೆ ಹೆಚ್ಚು ಆಕರ್ಷಕವಾದ ನಿರೀಕ್ಷೆಯಲ್ಲ. ಹಾಗಾಗಿ ರಾಷ್ಟ್ರ ರಾಜಕಾರಣ ಅವರಿಗೆ ಗೌರವವನ್ನು ತಂದುಕೊಡಬಹುದು.

ಪ್ರಸ್ತುತ, ನಿತೀಶ್ ಕುಮಾರ್ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಗೌರವಾನ್ವಿತ ಉತ್ತೇಜನ ನೀಡಬಲ್ಲ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್. 2017ರ ಸಮಯದಲ್ಲಿ ಕೆಲವು ಮಾತುಗಳು ಕೇಳಿಬಂದಿದ್ದವು. ನಿತೀಶ್ ಕುಮಾರ್ ಅವರು ಜೆಡಿ(ಯು) ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ, ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್‌ಗೆ ನೀಡಿ ಅಂತಿಮವಾಗಿ ಕಾಂಗ್ರೆಸ್ ನಾಯಕರಾಗಿ ಹೊಮ್ಮಿ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎಂಬ ಮಾತುಗಳು ಹರಿದಾಡಿದ್ದವು. ಅಂತಿಮ ಹಂತದಲ್ಲಿ ಮಾತುಕತೆಗಳು ಮುರಿದುಬಿದ್ದಿದ್ದವು. ಆದರೆ ಈ ಹಾದಿ ಮತ್ತೆ ತೆರೆದುಕೊಂಡರೆ ಆಶ್ಚರ್ಯಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕ್ವಿಂಟ್ ನ್ನ ರಾಘವ ಬೆಹ್ಲ್ ಅದಾನಿ ಗುಂಪಿಗೆ ಮೂರು ತಿಂಗಳ ಹಿಂದೆ ಮಾರಿದ್ದಾರೆ ಆದ್ದರಿಂದ ಅದು ತನ್ನ ದನಿಯನ್ನ ಬದಲಿಸಿ ಮೋದಿ ರಾಗ ಹಾಡುತ್ತಿದೆ ಅಂತ ಕೆಲವರು ಹೇಳುತ್ತಿದ್ದಾರೆ.ನನಗೂ ಅನುಮಾನ ಶುರುವಾಗಿದೆ.
    ನಿಜ ಏನು ಎಂಬುದನ್ನ ತಿಳಿಸಬಲ್ಲಿರಾ?

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...