Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...