Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...