Homeದಲಿತ್ ಫೈಲ್ಸ್ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಹುಟ್ಟುಹಬ್ಬದ ಆಚರಣೆಗೆ ಸೇರಿದ್ದ ಮಹಿಳೆಯ ಮೇಲೆ ಮತಾಂತರದ ಆರೋಪದ ಮಾಡಿರುವ ವಿಎಚ್‌ಪಿ, ದಲಿತ ಮಹಿಳೆಯರು ಜೈಲು ಸೇರಲು ಕಾರಣವಾಗಿದೆ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ ದೂರಿನ ಮೇರೆಗೆ, ಬಲವಂತದ ಮತಾಂತರ ಆರೋಪದ ಮೇಲೆ ಜುಲೈ 30ರಂದು ಉತ್ತರ ಪ್ರದೇಶದ ಅಜಂಗಢ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬಲವಂತದ ಮತಾಂತರವನ್ನು ಆರೋಪಿಸಿ ಹಿಂದುತ್ವವಾದಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದ್ರಕಲಾ, ಸುಭಾಗಿ ದೇವಿ, ಸಾಧನಾ, ಸವಿತಾ, ಅನಿತಾ ಮತ್ತು ಸುನೀತಾ ಎಂಬ ಮಹಿಳೆಯರನ್ನು ಕಲಾ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಬಂಧಿಸಲಾಗಿದೆ.

ವಿಎಚ್‌ಪಿಯ ಬ್ಲಾಕ್ ಅಧ್ಯಕ್ಷ ಅಶುತೋಷ್ ಸಿಂಗ್ ಅವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿದ ಅಶುತೋಷ್‌ ಸಿಂಗ್, “ಹುಟ್ಟುಹಬ್ಬದ ಸಮಾರಂಭದ ನೆಪದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ ಎಂದು ನಮಗೆ ತಿಳಿದುಬಂತು. ನಾವು ವಿಷಯವನ್ನು ಪೊಲೀಸರಿಗೆ ತಿಳಿಸಿದೆವು. ಅವರು ಮಹಿಳೆಯರನ್ನು ಬಂಧಿಸಿದ್ದಾರೆ” ಎಂದಿದ್ದಾರೆ.

“ಅಲ್ಲಿ ಮಹಿಳೆಯರು ಮಾತ್ರ ಇದ್ದರು. ಅವರು ಇತರರಿಗೆ ಹಣದ ಆಮಿಷವೊಡ್ಡುತ್ತಿದ್ದರು. ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವರು ಯೇಸುವಿನಂತೆ ಕೈಯನ್ನು ಮೇಲೆ ಎತ್ತಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹರಿಜನ ಮಹಿಳೆಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು” ಎಂದು ದೂರಿದ್ದಾರೆ.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರನ್ನು ಬಲವಂತವಾಗಿ ಮತಾಂತರಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದಾರೆ. ಸಮಾರಂಭವನ್ನು ತಡೆಯಲು ಮುಂದಾದಾಗ ಬೆದರಿಕೆ ಹಾಕಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 506 ಮತ್ತು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಬಂಧನದ ನಂತರ, ಮಹಿಳೆಯರನ್ನು ವಿಶೇಷ ಕೆಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಮಹಿಳೆಯರ ಜೊತೆಗಿದ್ದ ಕಾರ್ಯಕರ್ತ ದೀನಾನಾಥ್ ಜೈಸ್ವರ್, “ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರು ಜೈಲಿನಲ್ಲಿ ಕೊಳೆಯುತ್ತಲೇ ಇದ್ದಾರೆ. ಇದು ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಪರಿಚಿತರೆಲ್ಲ ಒಟ್ಟಿಗೆ ಸೇರಿದ್ದರು. ಅವರು ಯೇಸುವನ್ನು ನಂಬುತ್ತಾರೆ. ಹೀಗಾಗಿ ಕೇಕ್ ಕತ್ತರಿಸುವ ಮೊದಲು ಪ್ರಾರ್ಥನೆ ಮಾಡಲು ನಿರ್ಧರಿಸಿದರು. ಆದರೆ ಬಲವಂತದ ಮತಾಂತರ ಎಂದು ಆರೋಪಿಸಲಾಗಿದೆ. ಅಂದು ಭಾನುವಾರವಾದ್ದರಿಂದ ಮಹಿಳೆಯರನ್ನು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆದಾಗ್ಯೂ, ಮಹಿಳೆಯರಿಗೆ ಜಾಮೀನು ನಿರಾಕರಿಸಲಾಯಿತು. ಈಗ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರನ್ನು ಪ್ರತಿನಿಧಿಸುವ ವಕೀಲರು, ಆರೋಪಗಳನ್ನು ಆಧಾರರಹಿತವೆಂದು ಪ್ರತಿಪಾದಿಸಿದ್ದಾರೆ.

‘ದಿ ವೈರ್‌’ ಜೊತೆ ಮಾತನಾಡಿದ ವಕೀಲ ಮುನೀಶ್ ಚಂದ್ರ, “ವಾಸ್ತವ ಬೇರೆಯೇ ಇದೆ. ಬಲವಂತದ ಮತಾಂತರ ಆರೋಪದ ಅಡಿಯಲ್ಲಿ ಜನಪ್ರಿಯತೆಯನ್ನು ಗಳಿಸಲು, ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಸರ್ಕಾರದ ಬೆಂಬಲವಿರುವ ಬಲಪಂಥೀಯ ಮತಾಂಧ ಸಂಘಟನೆಗಳು ಜನರನ್ನು ಟಾರ್ಗೆಟ್ ಮಾಡುತ್ತಿವೆ” ಎಂದು ದೂರಿದ್ದಾರೆ.

“ಮಹಿಳೆಯರು ತಮ್ಮ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅವರು ಪ್ರಾರ್ಥನೆ ಮಾಡುವಾಗ, ವಿಎಚ್‌ಪಿ ಸದಸ್ಯರು ಮಹಿಳೆಯರ ವಿರುದ್ಧ ದೂರು ದಾಖಲಿಸಿದರು. ಅವರನ್ನು ಮಧ್ಯಾಹ್ನ 2 ಗಂಟೆಗೆ ಠಾಣೆಗೆ ಕರೆದೊಯ್ಯಲಾಯಿತು. ಆದರೆ ಪೊಲೀಸ್ ಡೈರಿಯಲ್ಲಿ, ಮಹಿಳೆಯರನ್ನು ಸಂಜೆ 6 ಗಂಟೆಗೆ ಕರೆದೊಯ್ಯಲಾಯಿತು ಎಂದು ಬರೆಯಲಾಗಿದೆ. ನಾವು ಅವರ ಜಾಮೀನಿಗಾಗಿ ಪ್ರಯತ್ನಿಸಿದ್ದೇವೆ. ಆದರೆ ಕೆಳ ನ್ಯಾಯಾಲಯವು ಮಹಿಳೆಯರಿಗೆ ಜಾಮೀನು ನೀಡುವ ಅಧಿಕಾರವನ್ನು ಹೊಂದಿಲ್ಲ. ರಾಜಕೀಯ ಒತ್ತಡದಿಂದ ಮಹಿಳೆಯರಿಗೆ ಜಾಮೀನು ನೀಡಲಾಗಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಇಂತಹ ಹಲವಾರು ಬಂಧನಗಳನ್ನು ‘ಮತಾಂತರ ವಿರೋಧಿ’ ಕಾನೂನಿನ ಅಡಿಯಲ್ಲಿ ಮಾಡಲಾಗಿದೆ.

2021 ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಇಂತಹ ಹೆಚ್ಚಿನ ದಾಳಿಗಳು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಕ್ರಿಶ್ಚಿಯನ್ನರ ಮೇಲೆ ನಡೆದಿವೆ ಎಂದು ಸತ್ಯಶೋಧನಾ ವರದಿಯು ಎತ್ತಿ ತೋರಿಸಿದೆ.

ಮಹಾರಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಅಧಿಕಾರಿ ಹಿರಿಯ ಸಬ್ ಇನ್ಸ್‌ಪೆಕ್ಟರ್ ಕಮಲ್ಕಾಂತ್ ವರ್ಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ‘ದಿ ವೈರ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...