Homeಮುಖಪುಟಅಪರಾಧಿ ಎಂದು ತೀರ್ಪು ಬರುತ್ತಿದ್ದಂತೆ ಕೋರ್ಟ್‌ನಿಂದ ಯುಪಿ ಸಚಿವ ಪರಾರಿ: 35 ವರ್ಷಗಳ ಹಿಂದೆ ರೈಲ್ವೆ...

ಅಪರಾಧಿ ಎಂದು ತೀರ್ಪು ಬರುತ್ತಿದ್ದಂತೆ ಕೋರ್ಟ್‌ನಿಂದ ಯುಪಿ ಸಚಿವ ಪರಾರಿ: 35 ವರ್ಷಗಳ ಹಿಂದೆ ರೈಲ್ವೆ ಸಲಕರಣೆ ಕಳ್ಳತನ ಮಾಡಿದ್ದ ಸಚಿವ?

- Advertisement -
- Advertisement -

ಬಿಜೆಪಿಯ ಆದಿತ್ಯನಾಥ್‌ ಅವರ ಉತ್ತರ ಪ್ರದೇಶ ಸರ್ಕಾರದ ಸಚಿವ ರಾಕೇಶ್ ಸಚನ್‌‌ 1991 ರ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಿದ ನಂತರ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವ ಮೊದಲು ಕಾನ್ಪುರದ ನ್ಯಾಯಾಲಯದಿಂದ ಪಲಾಯನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಗೆ ಮುನ್ನವೇ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ಸಚನ್, ಅಕ್ರಮ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಶನಿವಾರ ದೋಷಿ ಎಂದು ಸಾಬೀತಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿಪಕ್ಷ ನಾಯಕರು ಸಚನ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳುವ ಮತ್ತು ಶಿಕ್ಷೆಯ ಬಗ್ಗೆ ವಾದಗಳು ಪ್ರಾರಂಭವಾಗುವ ಮೊದಲು ನ್ಯಾಯಾಲಯದಿಂದ ಓಡಿಹೋದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶ ಸರ್ಕಾರದಲ್ಲಿ ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳು ಮತ್ತು ಖಾದಿ ಇಲಾಖೆಗಳ ಸಚಿವರಾಗಿರುವ ರಾಕೇಶ್ ಸಚನ್ ವಿರುದ್ಧ ನ್ಯಾಯಾಲಯದ ಅಧಿಕಾರಿಗಳಿಂದ ದೂರು ಸ್ವೀಕರಿಸಲಾಗಿದೆ ಎಂದು ಕಾನ್ಪುರ ಪೊಲೀಸರು ಶನಿವಾರ ತಡರಾತ್ರಿ ದೃಢಪಡಿಸಿದ್ದು, ಆದರೆ ದೂರಿನ ಮೇರೆಗೆ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆಯೆ ಎಂದು ಹೇಳಲಿಲ್ಲ.

ಇದನ್ನೂ ಓದಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

“ಪರಿಶೀಲಿಸಬೇಕಾದ ವಿಷಯ ಬಹಳಷ್ಟು ಇದೆ. ನಾವು ಎಲ್ಲರೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದು, ನಮ್ಮ ವಿಚಾರಣೆಯನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದೇವೆ. ವಿಚಾರಣೆ ಪೂರ್ಣಗೊಂಡ ನಂತರ ನಾವು ಕಾನೂನಿನ ಪ್ರಕಾರ ಮುಂದುವರಿಯುತ್ತೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಎಪಿ ತಿವಾರಿ ಹೇಳಿದ್ದಾರೆ.

ಈ ವಿವಾದದ ನಡುವೆ ಸಚನ್ ಸರ್ಕಾರಿ ಸಭೆಯಲ್ಲಿ ಭಾಗವಹಿಸಿದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.  ತಮ್ಮ ವಿರುದ್ಧದ ಆರೋಪಗಳು ಸುಳ್ಳು ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.

“ನಾನು ನನ್ನ ಜೀವನದಲ್ಲಿ ಎಂದಿಗೂ ಓಡಿಹೋಗಿಲ್ಲ, ಇವೆಲ್ಲವೂ ನನ್ನ ವಿರುದ್ಧದ ಆಧಾರರಹಿತ ಪ್ರಕರಣಗಳು. ನಾನು ಬೆಳಿಗ್ಗೆ 11 ಗಂಟೆಗೆ ಸ್ವಲ್ಪ ಮುಂಚಿತವಾಗಿ ನ್ಯಾಯಾಲಯವನ್ನು ತಲುಪಿದೆ ಮತ್ತು ನನಗೆ ಬೇರೆ ಕಾರ್ಯಕ್ರಮ ಇರುವುದರಿಂದ ಪ್ರಕರಣವನ್ನು ತ್ವರಿತಗೊಳಿಸುವಂತೆ ವಿನಂತಿಸಿದೆ. ವಿನಾಯತಿ ಅರ್ಜಿಯನ್ನು ಹಾಕುವಂತೆ ವಕೀಲರಲ್ಲಿ ವಿನಂತಿಸಿದೆ. ನಂತರ ನಾನು ಅಲ್ಲಿಂದ ಹೊರಟೆ. ನಾನು ನಾಲ್ಕು ಗಂಟೆಗಳ ಕಾಲ ಸಮಾರಂಭದಲ್ಲಿದ್ದೆ ಮತ್ತು ಇತರ ಕಾರ್ಯಕ್ರಮದಕಲ್ಲಿ ಭಾಗವಹಿಸಿದ್ದೆ. ಇದರ ನಂತರ ನನ್ನ ವಿರುದ್ಧ ಆರೋಪಗಳನ್ನು ಮಾಡಲು ಪ್ರಾರಂಭಿಸಲಾಗಿದೆ” ಎಂದು ಸಚನ್ ತಿಳಿಸಿದ್ದಾರೆ.

“ಬೇಕಿದ್ದರೆ ಕೋರ್ಟ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಿ. ನಾನು ನಾಳೆ ನ್ಯಾಯಾಲಯಕ್ಕೆ ಹೋಗುತ್ತೇನೆ, ನನ್ನ ವಕೀಲರ ಮೂಲಕ ನನ್ನ ಕಡೆಯ ವಾದವನ್ನು ಪ್ರಸ್ತುತಪಡಿಸುತ್ತೇನೆ” ಎಂದು ಸಚನ್ ಹೇಳಿದ್ದಾರೆ.

ಇದನ್ನೂ ಓದಿ: ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷ ರಾಕೇಶ್ ಸಚನ್ ಅವರಿಗೆ 35 ವರ್ಷಗಳ ಹಿಂದಿನ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಯನ್ನು ಕೇಳಿದ ಸಚಿವರು ನ್ಯಾಯಾಲಯದಿಂದ ತಪ್ಪಿಸಿಕೊಂಡರು. ಇದು ಬಿಜೆಪಿ ಜನರ ನಿಜವಾದ ಗುಣ ಎಂದು ಹೇಳಿದೆ.

ಸಚಿವ ರಾಕೇಶ್ ಸಚನ್ ವಿರುದ್ಧ ಐಪಿಸಿ ಸೆಕ್ಷನ್ 389 ಮತ್ತು 411 ರ ಅಡಿಯಲ್ಲಿ ರೈಲ್ವೆ ಗುತ್ತಿಗೆ ಪಡೆದಿದ್ದಾಗ ರೈಲ್ವೇ ಸಲಕರಣೆಯನ್ನು ಕಳ್ಳತನ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು ಎಂದು ಇಟಿವಿ ಹಿಂದಿ ವರದಿ ಮಾಡಿದೆ. ಕಳ್ಳತನ ಮಾಡಲಾಗಿದ್ದ ಬ್ಯಾಲೆಸ್ಟ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇತ್ತು. ಕಳೆದ ಶನಿವಾರ ನ್ಯಾಯಾಲಯವು ತೀರ್ಪಿನ ದಿನವನ್ನು ನಿಗದಿಪಡಿಸಿತು. ತಾನು ತಪ್ಪಿತಸ್ಥ ಎಂದು ತಿಳಿದ ನಂತರ ರಾಕೇಶ್ ಸಚನ್ ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಇಟಿವಿ ವರದಿ ಮಾಡಿದೆ.

“ಯುಪಿಯಲ್ಲಿ ಬಿಜೆಪಿ ಗಂಟಲಿನ ತನಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಯೋಗಿ ಸರ್ಕಾರದ ಕ್ಯಾಬಿನೆಟ್ ಸಚಿವ ರಾಕೇಶ್ ಸಚನ್ ಅವರಿಗೆ 35 ವರ್ಷಗಳ ಹಿಂದಿನ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಯನ್ನು ಕೇಳಿದ ಸಚಿವರು ನ್ಯಾಯಾಲಯದಿಂದ ತಪ್ಪಿಸಿಕೊಂಡರು. ಎಷ್ಟೊಂದು ಮುಜುಗರ! ಇದು ಬಿಜೆಪಿ ಜನರ ನಿಜವಾದ ಗುಣ. ಮುಖ್ಯಮಂತ್ರಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು” ಎಂದು ಸಮಾಜವಾದಿ ಪಕ್ಷ ಹೇಳಿದ್ದು, ಪತ್ರಿಕಾ ವರದಿಯನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...