Homeಮುಖಪುಟಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದು, ಅವರು ಇಂದು ಸಂಜೆ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿಗೆ ಬಿಜೆಪಿ ಜೊತೆಗಿನ ಮೈತ್ರಿ ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಸಭೆಯ ಮೊದಲು ಎನ್‌ಡಿಟಿವಿಗೆ ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದು, “ಈ ಮೈತ್ರಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿರುವುದು ಇಂದಿನ ಬೆಳವಣಿಗೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ನಾಯಕ ಆರ್‌ಸಿಪಿ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತ್ ಶಾ ಅವರ ಪರವಾಗಿ ಆರ್‌ಸಿಪಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಂತರದಲ್ಲಿ ಪಕ್ಷವನ್ನು ಸಿಂಗ್‌ ತೊರೆದಿದ್ದಾರೆ.

ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೂಡ ಬಿಹಾರ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. ತೇಜಸ್ವಿ ಯಾದವ್ ಪಕ್ಷದ ನೇತೃತ್ವ ವಹಿಸಿದ್ದಾರೆ. ನಿತೀಶ್ ಕುಮಾರ್‌ಗೆ ತನ್ನ ಬೆಂಬಲವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಲು, ಐದು ಅಂಶಗಳು ಕಾರಣವಾದವು ಎಂದು ಕುರಿತು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿರಲಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದರು ಎಂಬ ಆರೋಪಗಳು ಬಂದವು.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...