Homeಮುಖಪುಟಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದು, ಅವರು ಇಂದು ಸಂಜೆ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿಗೆ ಬಿಜೆಪಿ ಜೊತೆಗಿನ ಮೈತ್ರಿ ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಸಭೆಯ ಮೊದಲು ಎನ್‌ಡಿಟಿವಿಗೆ ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದು, “ಈ ಮೈತ್ರಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿರುವುದು ಇಂದಿನ ಬೆಳವಣಿಗೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ನಾಯಕ ಆರ್‌ಸಿಪಿ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತ್ ಶಾ ಅವರ ಪರವಾಗಿ ಆರ್‌ಸಿಪಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಂತರದಲ್ಲಿ ಪಕ್ಷವನ್ನು ಸಿಂಗ್‌ ತೊರೆದಿದ್ದಾರೆ.

ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೂಡ ಬಿಹಾರ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. ತೇಜಸ್ವಿ ಯಾದವ್ ಪಕ್ಷದ ನೇತೃತ್ವ ವಹಿಸಿದ್ದಾರೆ. ನಿತೀಶ್ ಕುಮಾರ್‌ಗೆ ತನ್ನ ಬೆಂಬಲವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಲು, ಐದು ಅಂಶಗಳು ಕಾರಣವಾದವು ಎಂದು ಕುರಿತು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿರಲಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದರು ಎಂಬ ಆರೋಪಗಳು ಬಂದವು.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...