Homeಕರ್ನಾಟಕಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

- Advertisement -
- Advertisement -

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಇಂದು ಮೀರತ್‌ನಲ್ಲಿ ಬಂಧಿಸಿದ್ದಾರೆ.

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ ನಂತರ ಬಂಧನವಾಗಿದೆ.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿದೆ. ನಿನ್ನೆ ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿದ್ದು, ತ್ಯಾಗಿ ಅವರ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದೆ. ಅವರ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ಕಳೆದ ವಾರ ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು. ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆಕೆಯ ಪತಿಯನ್ನು ಅವಾಚ್ಯವಾಗಿ ತ್ಯಾಗಿ ನಿಂದಿಸಿದ್ದರು.

ಇದನ್ನೂ ಓದಿರಿ: ಬಿಜೆಪಿ ನಾಯಕನ ಮನೆ ಉರುಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ: ಕಾರಣವೇನು?

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು.

ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿದೆ. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ತ್ಯಾಗಿಗೆ ಸೇರಿದ ಹಲವು ವಾಹನಗಳೂ ಪೊಲೀಸರಿಗೆ ಸಿಕ್ಕಿವೆ. ಒಂದು ಕಾರಿನ ಮೇಲೆ ಬಿಜೆಪಿ ಯುವ ಮೋರ್ಚಾ ಎಂದು ಬರೆಯಲಾಗಿದೆ. ತ್ಯಾಗಿ ಅವರ ಕುಟುಂಬವು ನೋಯ್ಡಾದಲ್ಲಿ ಸುಮಾರು 50 ಅಂಗಡಿಗಳನ್ನು ಹೊಂದಿದೆ ಮತ್ತು ಲಕ್ಷಾಂತರ ರೂಪಾಯಿಗಳನ್ನು ಬಾಡಿಗೆಯಿಂದ ಪಡೆಯುತ್ತಿದೆ ಎಂದು ಅಧಿಕಾರಿಗಳು ಗಮನಿಸಿದ್ದಾರೆ. ಕಂಡುಹಿಡಿದಿದೆ. ಇದರಲ್ಲಿ ಅಕ್ರಮ ನಡೆದಿದೆಯೇ ಎಂಬುದನ್ನು ತಿಳಿಯಲು ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...