Homeಮುಖಪುಟನಾಯಿ ಕೂಡಾ ತಿನ್ನದ ಆಹಾರವನ್ನು ನಮಗೆ ನೀಡಲಾಗುತ್ತಿದೆ: ಯುಪಿ ಪೊಲೀಸ್ ಸಿಬ್ಬಂದಿ ಪ್ರತಿಭಟನೆ

ನಾಯಿ ಕೂಡಾ ತಿನ್ನದ ಆಹಾರವನ್ನು ನಮಗೆ ನೀಡಲಾಗುತ್ತಿದೆ: ಯುಪಿ ಪೊಲೀಸ್ ಸಿಬ್ಬಂದಿ ಪ್ರತಿಭಟನೆ

- Advertisement -
- Advertisement -

ಉತ್ತರ ಪ್ರದೇಶ ಪೊಲೀಸ್ ಪೇದೆಯೊಬ್ಬರು ಫಿರೋಜಾಬಾದ್‌ನ ಪೊಲೀಸ್ ಲೈನ್ಸ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದಾಗಿ ಪ್ರತಿಭಟಿಸಿದ್ದು ಸಾರ್ವಜನಿಕವಾಗಿ ಅಳಲು ತೋಡಿಕೊಂಡಿದ್ದಾರೆ. ಕಣ್ಣೀರು ಹಾಕುತ್ತಲೆ ಮಾತನಾಡಿರುವ ಕಾನ್‌ಸ್ಟೆಬಲ್ ಮನೋಜ್ ಕುಮಾರ್ ಅವರು ಪೊಲೀಸ್ ಸಿಬ್ಬಂದಿಗೆ ಮೆಸ್‌ನಲ್ಲಿ ನೀರು ನೀರಾಗಿರುವ ಬೇಳೆ ಮತ್ತು ಬೇಯಿಸದ ರೊಟ್ಟಿಗಳನ್ನು ನೀಡಲಾಗುತ್ತದೆ ಎಂದು ಆರೋಪಿಸಿದ್ದು, ಈ ಬಗ್ಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಕೈಯಲ್ಲಿ ರೊಟ್ಟಿ, ಅನ್ನ ಮತ್ತು ದಾಲ್‌ನ ಬಟ್ಟಲಿನೊಂದಿಗೆ ಪ್ರತಿಭಟನೆ ನಡೆಸಿದ ಕಾನ್‌ಸ್ಟೆಬಲ್ ಮನೋಜ್ ಕುಮಾರ್‌, “ಪೊಲೀಸರು 12 ಗಂಟೆಗಳ ಕರ್ತವ್ಯ ನಿರ್ವಹಿಸಿದ ನಂತರ ಈ ಆಹಾರವನ್ನು ತಿನ್ನುತ್ತಿದ್ದಾರೆ. ನಾಯಿ ಕೂಡ ಇದನ್ನು ತಿನ್ನುವುದಿಲ್ಲ. ನಾವು ಈ ಆಹಾರವನ್ನು ತಿನ್ನಲು ಸಾಧ್ಯವಿಲ್ಲ. ನಮ್ಮ ಹೊಟ್ಟೆಗೆ ಏನೂ ಇಲ್ಲದಿದ್ದರೆ ನಾವು ನಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸುವುದು?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಲಿಸ್ ಸಿಬ್ಬಂದಿಗೆ ಪೌಷ್ಠಿಕಾಂಶದ ಆಹಾರ ನೀಡುವುದನ್ನು ಖಚಿತಪಡಿಸಿಕೊಳ್ಳಲು ಅವರಿಗೆ ನೀಡಲಾಗುವ ಭತ್ಯೆಯನ್ನು ಹೆಚ್ಚಿಸಲಾಗುವುದು ಎಂದು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಭರವಸೆ ನೀಡಿದ್ದರೂ, ಅವರಿಗೆ ಇನ್ನೂ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಇದೆಲ್ಲವೂ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಡಿಸಿಪಿಯವರ ಹಗರಣ. ಈ ಜನರ ಮೂಲಕ ಪೊಲೀಸ್ ಸಿಬ್ಬಂದಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಫಿರೋಜಾಬಾದ್‌ನಲ್ಲಿ ನಿಯೋಜನೆಗೊಂಡಿರುವ ಅಲಿಗಢ ನಿವಾಸಿ ಮನೋಜ್‌ ಕುಮಾರ್, ತನಗೆ ಮತ್ತು ಇತರ ಕೆಳ ದರ್ಜೆಯ ಸಿಬ್ಬಂದಿಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಹೇಳಿಕೊಂಡಿದ್ದಕ್ಕೆ ಮೆಸ್ ಮ್ಯಾನೇಜರ್ ತನ್ನನ್ನು ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಆಹಾರದೊಂದಿಗೆ ಅವರ ಪ್ರತಿಭಟನೆಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲು ನಿರ್ಧರಿಸಿದ್ದಾರೆ.

“ಈ ಇಲಾಖೆಯಲ್ಲಿ (ಪೊಲೀಸ್) ಕೇಳುವವರು ಯಾರೂ ಇಲ್ಲ. ಕ್ಯಾಪ್ಟನ್ ಸರ್ ನನ್ನ ಸಮಸ್ಯೆಗಳನ್ನು ಕೇಳುತ್ತಿಲ್ಲ, ಅದಕ್ಕಾಗಿಯೇ ನಾನು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ನಿಮ್ಮ ಸಿಬ್ಬಂದಿ ಯಾವ ರೀತಿಯ ಆಹಾರವನ್ನು ತಿನ್ನುತ್ತಾರೆ ಎಂದು ತಿಳಿಯಲು ನೀವು ಈ ತಟ್ಟೆಯಲ್ಲಿರುವ ರೊಟ್ಟಿಗಳನ್ನು ತಿನ್ನಬೇಕು ಎಂದು ಕ್ಯಾಪ್ಟನ್ ಸರ್ ಇಲ್ಲಿಂದ ಹಾದುಹೋದಾಗ ಈ ಬಗ್ಗೆ ನಾನು ಅವರಿಗೆ ಹೇಳಿದ್ದೇನೆ. ಅವರ ಮಕ್ಕಳು ಅಂತಹ ಆಹಾರವನ್ನು ತಿನ್ನಲು ಸಾಧ್ಯವೆ? ಇದನ್ನು ನಾನು ಅವರಿಗೆ ಕೇಳಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಪರಾಧಿ ಎಂದು ತೀರ್ಪು ಬರುತ್ತಿದ್ದಂತೆ ಕೋರ್ಟ್‌ನಿಂದ ಯುಪಿ ಸಚಿವ ಪರಾರಿ: 35 ವರ್ಷಗಳ ಹಿಂದೆ ರೈಲ್ವೆ ಸಲಕರಣೆ ಕಳ್ಳತನ ಮಾಡಿದ್ದ ಸಚಿವ

ಅಂತಿಮವಾಗಿ ಕಾನ್ಸ್ಟೇಬಲ್ ಮನೋಜ್ ಕುಮಾರ್ ಅವರನ್ನು ಇತರ ಪೊಲೀಸ್ ಸಿಬ್ಬಂದಿ ಅವರನ್ನು ಪ್ರತಿಭಟನೆಯ ಸ್ಥಳದಿಂದ ಕರೆದೊಯ್ದಿದ್ದಾರೆ. ಮೆಸ್‌ನಲ್ಲಿ ಗುಣಮಟ್ಟವಿಲ್ಲದ ಆಹಾರದ ಬಗ್ಗೆ ದೂರು ನೀಡಿದ ಅವರ ವೀಡಿಯೊ ಹೊರಬಂದ ನಂತರ, ಫಿರೋಜಾಬಾದ್ ಪೊಲೀಸರು ಈ ವಿಷಯವನ್ನು ಪರಿಶೀಲಿಸುವಂತೆ ಸಿಒ ಸಿಟಿಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...