Homeಮುಖಪುಟತಿರಂಗ ಖರೀದಿಸದಿದ್ದರೆ ಪಡಿತರ ನೀಡುವುದಿಲ್ಲ: ಬಡವರ ಮೇಲಿನ ಒತ್ತಾಯಕ್ಕೆ ವರುಣ್ ಗಾಂಧಿ ಖಂಡನೆ

ತಿರಂಗ ಖರೀದಿಸದಿದ್ದರೆ ಪಡಿತರ ನೀಡುವುದಿಲ್ಲ: ಬಡವರ ಮೇಲಿನ ಒತ್ತಾಯಕ್ಕೆ ವರುಣ್ ಗಾಂಧಿ ಖಂಡನೆ

- Advertisement -
- Advertisement -

20 ರೂಪಾಯಿಯ ಧ್ವಜವನ್ನು ಖರೀದಿಸಿದರೆ ನಿಮಗೆ ಪಡಿತರ ಸಿಗುತ್ತದೆ ಇಲ್ಲದಿದ್ದರೆ ನಿಮಗೆ ಪಡಿತರ ನೀಡುವುದಿಲ್ಲ ಎಂದು ಬಡವರಿಗೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಹರಿಯಾಣದಲ್ಲಿ ಜರುಗಿದೆ.

ಕರ್ನಾಲ್ ಜಿಲ್ಲೆಯ ಹೆಮ್ಡ ಪ್ರದೇಶದ ನ್ಯಾಯಬೆಲೆ ಅಂಗಡಿಯ ಮಾಲೀಕನೊಬ್ಬ ಪ್ರತಿಯೊಬ್ಬ ಪಡಿತರ ಚೀಟಿದಾರರು ಸಹ 20 ರೂ ಕೊಟ್ಟು ರಾಷ್ಟ್ರಧ್ವಜ ಖರೀದಿಸಬೇಕು ಎಂದು ಧಮಕಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ರೀತಿಯಾಗಿ ತಿರಂಗ ಕೊಳ್ಳುವಂತೆ ಬಡವರ ಮೇಲೆ ಒತ್ತಡ ಹೇರುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಡವರ ಮೇಲೆ ಬಲವಂತದ ದೇಶಪ್ರೇಮ ಹೇರುವುದು ಸರಿಯಲ್ಲ ಎಂಬ ಟೀಕೆಗಳು ಕೇಳಿ ಬಂದಿವೆ.

“ಪಡಿತರ ಚೀಟಿದಾರರನ್ನು ತ್ರಿವರ್ಣ ಧ್ವಜವನ್ನು ಖರೀದಿಸುವಂತೆ ಒತ್ತಾಯಿಸಲಾಗುತ್ತಿದೆ. ಒಂದು ವೇಳೆ ಖರೀದಿಸದಿದ್ದರೆ ಅವರ ಪಡಿತರ ನೀಡುವುದಿಲ್ಲ ಎಂದು ಬೆದರಿಸಲಾಗುತ್ತಿದೆ. ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಸಂಭ್ರಮವು ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ” ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿರುವ ತ್ರಿವರ್ಣ ಧ್ವಜದ ಬೆಲೆಯು ಬಡವರ ತುತ್ತನ್ನು ಕಸಿದುಕೊಳ್ಳುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

ವಿಷಯ ವೈರಲ್ ಆದ ನಂತರ ತಿರಂಗ ಕೊಳ್ಳುವಂತೆ ಒತ್ತಡ ಹೇರಿದ್ದ ಡಿಪೋ ಮಾಲೀಕನನ್ನು ಅಮಾನತ್ತು ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹೆಮ್ಡಾ ಗ್ರಾಮದ ಪಡಿತರ ಡಿಪೋದಾರರೊಬ್ಬರು 20 ರೂಪಾಯಿ ದರದಲ್ಲಿ ತಿರಂಗವನ್ನು ಖರೀದಿಸದಿದ್ದಲ್ಲಿ ಅವರಿಗೆ ಪಡಿತರ ಸಾಮಾಗ್ರಿ ನೀಡುವುದಿಲ್ಲ ಎಂದು ಧ್ವಜಗಳನ್ನು ಮಾರುತ್ತಿದ್ದರು. ಈ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದ ಕೂಡಲೇ ಅವರ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಕರ್ನಾಲ್ ಜಿಲ್ಲಾಧಿಕಾರಿ ಅನೀಶ್ ಯಾದವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನರಿಗೆ ಸುಲಭವಾಗಿ ತ್ರಿವರ್ಣ ಧ್ವಜಗಳು ಸಿಗುವಂತಾಗಲಿ ಎಂದು ಜಿಲ್ಲಾಡಳಿತದ ವತಿಯಿಂದ 88,400 ಧ್ವಜಗಳನ್ನು ರೇಷನ್ ಡಿಪೋಗಳಿಗೆ ನೀಡಿದ್ದೆವು. ಜನರು ಇಷ್ಟಪಟ್ಟು ಖರೀದಿಸಲಿ ಎಂಬುದು ನಮ್ಮ ಬಯಕೆಯಾಗಿತ್ತು. ಆದರೆ ಡಿಪೋ ಮಾಲೀಕರು ಕಡ್ಡಾಯ ಮಾಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತ್ರಿವರ್ಣ ಧ್ವಜ ಕೊಳ್ಳುವಂತೆ ಒತ್ತಡ ಹೇರಿದ್ದು ನಿಜ ಎಂದು ಡಿಪೋ ಮಾಲೀಕ ಒಪ್ಪಿಕೊಂಡಿದ್ದಾನೆ. ಧ್ವಜಗಳನ್ನು ಮಾರುವಂತೆ ನಮಗೆ ಆದೇಶವಿದೆ. ಧ್ವಜಗಳನ್ನು ಈ ಮೊದಲೇ ನಾವು ಹಣ ಪಾವತಿಸಿ ತಂದಿದ್ದೇವೆ. ಹಾಗಾಗಿ 20 ರೂ ಪಾವತಿಸಿ ಧ್ವಜ ಕೊಳ್ಳದವರಿಗೆ ನಾನು ಪಡಿತರವನ್ನು ನೀಡುತ್ತಿಲ್ಲ. ಪಡಿತರ ಪಡೆಯುವವರಿಗೆ ಧ್ವಜ ಕೊಳ್ಳುವುದನ್ನು ಕಡ್ಡಾಯ ಮಾಡಿ ಎಂದು ಇಲಾಖೆಯ ಇನ್ಸ್‌‌ಪೆಕ್ಟರ್ ಆದೇಶ ನೀಡಿದ್ದಾರೆ. ಅವರ ಆದೇಶಗಳನ್ನು ಪಾಲಿಸುವುದು ನಮ್ಮ ಕರ್ತವ್ಯ” ಎಂದು ಮಾಧ್ಯಮದವರ ಬಳಿ ಮಾತನಾಡಿದ್ದಾನೆ.

ಇದನ್ನೂ ಓದಿ; ತಿರಂಗ ಯಾತ್ರೆ ವೇಳೆ ಹೊಡೆದಾಡಿಕೊಂಡ ಬಿಜೆಪಿ ಕಾರ್ಯಕರ್ತರು: ದಂಗೆಯಾತ್ರೆ ಮಾಡಬೇಡಿ ಎಂದ ಅಖಿಲೇಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...