Homeಮುಖಪುಟಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ - ಕಾರಣ?

ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?

ಸದ್ಯಕ್ಕೆ ಮಹಾಘಟಬಂಧನ್ ಸರ್ಕಾರಕ್ಕೆ 164 ಶಾಸಕರ ಬೆಂಬಲವಿದೆ. 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಶಾಸಕರ ಅಗತ್ಯವಿದೆ.

- Advertisement -
- Advertisement -

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಅಂತ್ಯಗೊಳಿಸಿ ಆರ್‌ಜೆಡಿ ಮತ್ತು ಇತರ ಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿರುವ ನಿತೀಶ್‌ ಕುಮಾರ್‌ರವರು ಆಗಸ್ಟ್ 24ರ ನಂತರ ಬಹುಮತ ಸಾಬೀತುಪಡಿಸುವುದಾಗಿ ಸಮಯ ಕೇಳಿದ್ದಾರೆ.

ಆಗಸ್ಟ್ 24ರಿಂದ ವಿಧಾನಸಭಾ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಅವರು 160ಕ್ಕೂ ಹೆಚ್ಚು ಶಾಸಕರ ಬೆಂಬಲವಿದ್ದರೂ ಸಹ ಬಹುಮತ ಸಾಬೀತಪಡಿಸಲು ಎರಡು ವಾರಗಳ ಸಮಯ ಕೇಳಿದ್ದಾರೆ.

ವಿಧಾನಸಭೆಯ ಸ್ಪೀಕರ್ ಈಗಲೂ ಬಿಜೆಪಿಯವರೆ ಆಗಿರುವುದರಿಂದ ಬಹುಮತ ಇದ್ದರೂ ಸಹ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ನಿತೀಶ್ ಕುಮಾರ್ ಸದ್ಯಕ್ಕೆ ವಿಶ್ವಾಸಮತ ಯಾಚಿಸಲು ಮುಂದಾಗುತ್ತಿಲ್ಲ ಎನ್ನಲಾಗುತ್ತಿದೆ. ಸ್ಪೀಕರ್ ಬದಲಾವಣೆ ನಂತರವಷ್ಟೆ ಅವರು ವಿಶ್ವಾಸಮತ ಯಾಚಿಸಲು ನಿರ್ಧರಿಸಿದ್ದಾರೆ.

ಬಿಜೆಪಿಯ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಮಹಾಘಟಬಂಧನ್‌ 55 ಶಾಸಕರು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಾರೆ. ನಿಯಮಗಳ ಪ್ರಕಾರ ಗೊತ್ತುವಳಿ ಮಂಡಿಸಿದ ಎರಡು ವಾರಗಳ ನಂತರವಷ್ಟೇ ಸ್ಪೀಕರ್‌ ಅನ್ನು ಬದಲಾಯಿಸಬಹುದಾಗಿದೆ. ಹಾಗಾಗಿ ಆಗಸ್ಟ್ 24ರವರೆಗೆ ಕಾಯಲು ಸರ್ಕಾರ ಸಿದ್ದವಾಗಿದೆ.

ಸದ್ಯಕ್ಕೆ ಮಹಾಘಟಬಂಧನ್ ಸರ್ಕಾರಕ್ಕೆ 164 ಶಾಸಕರ ಬೆಂಬಲವಿದೆ. 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಶಾಸಕರ ಅಗತ್ಯವಿದೆ. ಆದರೂ ವಿಧಾನಸಭಾ ಅಧಿವೇಶನದ ಮೊದಲ ದಿನ ಸ್ಪೀಕರ್‌ ಅನ್ನು ಕೆಳಗಿಳಿಸಿ ಒಪ್ಪಂದದಂತೆ ಆರ್‌ಜೆಡಿ ಪಕ್ಷದ ನೂತನ ಸ್ಪೀಕರ್ ಆಯ್ಕೆಯಾದ ನಂತರ ನಿತೀಶ್ ಕುಮಾರ್ ವಿಶ್ವಾಸಮತ ಯಾಚಿಸಲಿದ್ದಾರೆ.

ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳಲು ಹಾಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಕೂಡ ಕಾರಣರಾಗಿದ್ದರು. ಅವರು ನಿತೀಶ್ ಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದು ನಿತೀಶ್ ಕುಮಾರ್‌ರವರಿಗೆ ಸಿಟ್ಟು ತರಿಸಿತ್ತು. ಹಾಗಾಗಿ ಅವರಿಬ್ಬರ ನಡುವೆ ವೈಮನಸ್ಸು ಬೆಳೆದಿತ್ತು. ಈ ಹಿಂದೆ ಜೆಡಿಯು ಪಕ್ಷವು ಅಧಿವೇಶನವನ್ನು ಬಾಯ್ಕಾಟ್ ಮಾಡಿತ್ತು. ಅದೇ ಸಂದರ್ಭದಲ್ಲಿ ಅಗ್ನಿಪಥ್ ಯೋಜನೆ ಕುರಿತು ಚರ್ಚೆಗೆ ಅವಕಾಶ ನೀಡದಿರುವುದನ್ನು ವಿರೋಧಿಸಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ಕೂಡ ಅಧಿವೇಶನ ಬಹಿಷ್ಕರಿಸಿದ್ದವು.

ಸ್ಪೀಕರ್ ಸಿನ್ಹಾ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದಾಗಿದೆ. ಏಕೆಂದರೆ ಬಿಜೆಪಿ ಬಹುಮತ ಕಳೆದುಕೊಂಡಿದೆ ಎಂಬುದು ಅವರ ಅರಿವಿಗೆ ಬಂದಿದೆ. ಆದರೂ ಅವರು ಬಿಜೆಪಿ ನಾಯಕತ್ವ ಏನು ಹೇಳುತ್ತದೆ ಎಂದು ಎದುರು ನೋಡುತ್ತಿದ್ದಾರೆ. ಒಂದು ವೇಳೆ ಅವರು ರಾಜೀನಾಮೆ ನೀಡಿದರೆ ಹೊಸ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ; 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...