Homeಕರ್ನಾಟಕಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, ‘ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು’ ಎಂದು ಹೇಳುತ್ತದೆ.

- Advertisement -
- Advertisement -

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಹ ಸಂಘಟನೆ ಎಬಿವಿಪಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನಿಸಿರುವ ಘಟನೆ ಬುಧವಾರ ನಡೆದಿದೆ. ಮೆರವಣಿಗೆಯ ಉದ್ದಕ್ಕೂ ಎಬಿವಿಪಿಯ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಾಡಿಸಲಾಗಿದ್ದು ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಎಬಿವಿಪಿ ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಸಚಿವ ನಾಗೇಶ್ ಭಾಗವಹಿಸಿದ್ದರು. ಭಾಗಶಃ ವಿದ್ಯಾರ್ಥಿನಿಯರೇ ಭಾಗವಹಿಸಿದ್ದ ಈ ಮೆರವಣಿಗೆಯಲ್ಲಿ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಹೆಜ್ಜೆ ಹಾಕಿದ್ದರು. ಅಲ್ಲದೆ ಮೆರವಣಿಗೆಯಲ್ಲಿ ಭಾಗವಹಿಸಿರುವುದರ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಾಕಿದ್ದಾರೆ.

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, “ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು” ಎಂದು ಹೇಳುತ್ತದೆ. ಆದರೆ ಸಚಿವ ನಾಗೇಶ್‌ ಅವರು ಭಾಗವಹಿಸಿದ್ದ ಮೆರವಣಿಗೆಯು ಧ್ವಜ ಸಂಹಿತೆಯ ಈ ನಿಯಮವನ್ನು ಉಲ್ಲಂಘಿಸಲಾಗಿದೆ.

ಧ್ವಜ ಸಂಹಿತೆಯ ನಿಯಮ ( ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ರಾಷ್ಟ್ರಧ್ವಜದ ‘ಧ್ವಜ ಸಂಹಿತೆ’ ಹೇಳುವುದು ಏನು?

  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು.

ಸಾಂವಿಧಾನಿಕ ಹುದ್ದೆಯಲ್ಲಿ ಇರುವ ಜನಪ್ರತಿನಿಧಿಯೊಬ್ಬ ಕಾನೂನು ಉಲ್ಲಂಘಿಸಿದ್ದು ರಾಜ್ಯದಾದ್ಯಂತ ಆಕ್ರೊಶ ಹುಟ್ಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಜಿಎನ್ ನಾಗರಾಜ್, “ಹರ್ ಘರ್ ಮೇ ತಿರಂಗಾ ಎಂದು ಒದರುತ್ತಿರುವವರಿಗೆ‌ ದೇಶಪ್ರಜ್ಞೆ ಇದ್ದರೆ ಸಂಪುಟದಿಂದ‌ ವಜಾ ಮಾಡಿ. ತಕ್ಷಣ ಈ ಅಪರಾಧ ಮಾಡಿದವರಿಗೆ ತಕ್ಕ ಕಾನೂನಿನ ಶಿಕ್ಷೆ ನೀಡಿ” ಎಂದು ಕಿಡಿ ಕಾರಿದ್ದಾರೆ.

ವಿಧಾನ ಪರಿಷತ್‌‌ನಲ್ಲಿ ವಿಪಕ್ಷದ ನಾಯಕರಾಗಿರುವ ಹರಿಪ್ರಸಾದ್‌ ಅವರು, ತ್ರಿವರ್ಣ ಧ್ವಜದ ಮೇಲೆ ಯಾವ ಧ್ವಜವನ್ನೇ ಹಾರಿಸುವುದು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. “ಶಿಕ್ಷಣ ಸಚಿವರಿಗೆ ಕನಿಷ್ಟ ಕಾನೂನಿನ ತಿಳುವಳಿಕೆ ಇಲ್ಲದೆ, ಭಾಗವಧ್ವಜವನ್ನ ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡು ಅಪರಾಧ ಮಾಡಿದ್ದಲ್ಲದೇ RSS ಮನಸ್ಥಿತಿಯನ್ನ ತೋರಿಸಿದ್ದಾರೆ. ಕೂಡಲೇ ಬಿಸಿ ನಾಗೇಶ್‌ ಮೇಲೆ ದ್ವಜಸಂಹಿತೆಯಡಿ ಕೇಸ್ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಉಹ್…ಹೂ .. ತುಂಬಾ ದುಃಖ.. ಅದರಿಂದಾಗಿ ಆಕಾಶ ಕುಸಿಯುತ್ತಿದೆ 😥😜
    ನಿಖರವಾಗಿ ಎಷ್ಟು ಮಿಲಿಮೀಟರ್ಗಳಷ್ಟು ಎತ್ತರಕ್ಕೆ ಹಾರಿತು?

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...