Homeಕರ್ನಾಟಕಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

ಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿದ್ದು, ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದಾರೆ. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾಗಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವಾರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಗ್ರಾಮದಲ್ಲಿ ಪೊಲೀಸ್ ಪಹರೆ ನಿಂತಿದ್ದು ಆಗಸ್ಟ್ 20ರ ವರೆಗೂ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಹೇರಲಾಗಿದೆ ಎಂದು ಕೊಪ್ಪಳ ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲ್ಲಶೆಟ್ಟಿ ತಿಳಿಸಿದ್ದಾರೆ.

ಯಲ್ಲಾಲಿಂಗ ಕೊಲೆ ಪ್ರಕರಣ

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಆ ಹೋರಾಟದಲ್ಲಿ ದಲಿತ ಮುಖಂಡ ಸಣ್ಣ ಹನುಮಂತರವರು ಹೋರಾಟದ ನೇತೃತ್ವ ವಹಿಸಿದ್ದರು. ಇದು ಆರೋಪಿ ಹನುಮೇಶ್ ನಾಯಕ್‌ಗೆ ಸೇಡು ಮೂಡುವಂತೆ ಮಾಡಿತ್ತು. ಹಾಗಾಗಿ ಆತ ತನ್ನ ಸಮುದಾಯದವರನ್ನು ಎತ್ತುಕಟ್ಟಿ ಸಣ್ಣ ಹನುಮಂತ ಮೇಲೆ ಹಲ್ಲೆಗೆ ಪ್ರಚೋದನೆ ನೀಡುತ್ತಿದ್ದ. ಅದರ ಭಾಗವಾಗಿ ಈ ಗಲಾಟೆ ನಡೆದಿದೆ. ಆದರೆ ಸಣ್ಣ ಹನುಮಂತುರವರು ತಪ್ಪಿಸಿಕೊಂಡಿದ್ದು, ಇಬ್ಬರು ಬಲಿಯಾಗಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...