Homeಮುಖಪುಟಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

- Advertisement -
- Advertisement -

ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.

ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.

“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...