Homeಮುಖಪುಟಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

- Advertisement -
- Advertisement -

ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.

ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.

“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...