Homeಅಂತರಾಷ್ಟ್ರೀಯತೈವಾನ್ ಬಿಕ್ಕಟ್ಟು: ದೇಶಗಳ ನಡುವೆ ಒಂದು ಅಘೋಷಿತ ತಿಳಿವಳಿಕೆ

ತೈವಾನ್ ಬಿಕ್ಕಟ್ಟು: ದೇಶಗಳ ನಡುವೆ ಒಂದು ಅಘೋಷಿತ ತಿಳಿವಳಿಕೆ

- Advertisement -
- Advertisement -

ಆಗಸ್ಟ್ 2, 2022ರಂದು ಯುಎಸ್‌ಎಯ ಕಾಂಗ್ರೆಸಿನ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನಿನಲ್ಲಿ ಬಂದಿಳಿದರು. ಅಲ್ಲಿನ ಸದನದ ಸ್ಪೀಕರ್ ಎಂಬುದು ಯುಎಸ್‌ಎಯ ಶಾಸಕಾಂಗದಲ್ಲಿಯೇ ಅತ್ಯುನ್ನತ ಹುದ್ದೆ; ಅಂದರೆ, ಅದು ಪ್ರತಿನಿಧಿಗಳ ಸದನದಲ್ಲಿ ಪ್ರಧಾನಿಯ ಸ್ಥಾನಕ್ಕೆ ಬಹುತೇಕ ಹತ್ತಿರ ಎನ್ನಬಹುದು. 1997ರಲ್ಲಿ ಆಗಿನ ಸ್ಪೀಕರ್ ನ್ಯೂಟ್ ಗಿಂಗ್ರಿಚ್ ಭೇಟಿಯ ಬಳಿಕ ತೈವಾನಿಗೆ ಅತ್ಯುನ್ನತ ಮಟ್ಟದ ಯುಎಸ್‌ಎ ಅಧಿಕಾರಿಯ ಭೇಟಿ ಇದಾಗಿದೆ.

ಪೆಲೋಸಿ ಅವರ ಭೇಟಿಯನ್ನು ಪೀಪಲ್ಸ್ ರಿಪಬ್ಲಿಕ್ ಆಫ್ ಚೈನಾ (ಪಿಆರ್‌ಸಿ) ಖಂಡಿಸಿತು. ಭೇಟಿಯ ಬೆನ್ನಲ್ಲೇ ತೈವಾನಿನ ಸುತ್ತಲೂ ಮಿಲಿಟರಿ ಕಸರತ್ತು ಮತ್ತು ಕ್ಷಿಪಣಿಗಳ ಪರೀಕ್ಷೆ ನಡೆಸುವುದಾಗಿ ಚೀನಾ ಘೋಷಿಸಿತು. ಈ ಮಿಲಿಟರಿ ಕಸರತ್ತು ಈ ಪ್ರದೇಶದಲ್ಲಿ ಹಿಂದೆಂದೂ ನಡೆಯದ ಪ್ರಮಾಣದ ಸೇನಾಬಲದ ಪ್ರದರ್ಶನವಾಗಿದೆ. ಈ ಭೇಟಿ ಮತ್ತು ಅದಕ್ಕೆ ಚೀನಾದ ಪ್ರತಿಕ್ರಿಯೆಯು- ವಿಶ್ವದ ಅತ್ಯಂತ ಪ್ರಬಲ ದೇಶಗಳೆರಡರ ನಡುವಿನ ಸಂಬಂಧ ತೀರಾ ಹದಗೆಟ್ಟಿರುವುದನ್ನು ಸೂಚಿಸುತ್ತದೆ ಎಂಬುದು ತಜ್ಞರ ಭಯ.

ತೈವಾನ್ ಸ್ವತಂತ್ರ ದೇಶವಲ್ಲವೆ?

ತೈವಾನ್ ಚೀನಾದಿಂದ ವಾಸ್ತವ ರೂಪದಲ್ಲಿ ಪ್ರತ್ಯೇಕವಾದ ನಂತರ, ಅದರ ಕಾನೂನು ಸ್ಥಾನಮಾನ ಅಸ್ಪಷ್ಟವಾಗಿದೆ. ಯುಎಸ್‌ಎ ಸೇರಿದಂತೆ ಪ್ರಪಂಚದ ಬಹುತೇಕ ದೇಶಗಳು ತೈವಾನಿಗೆ ಅಧಿಕೃತ ರಾಷ್ಟ್ರದ ಮಾನ್ಯತೆ ನೀಡಿಲ್ಲ. ಆದರೆ, ಹೆಚ್ಚಿನ ದೇಶಗಳು ತೈವಾನ್ ಸರಕಾರದ ಜೊತೆ ನಿರ್ದಿಷ್ಟವಾದ ವ್ಯಾವಹಾರಿಕ ತಿಳಿವಳಿಕೆಯನ್ನು ಹೊಂದಿವೆ. ಚೀನಾದ ಕ್ರಾಂತಿಯ ನಂತರದಿಂದ ತೈವಾನ್, ಪಾಶ್ಚಾತ್ಯ ಶಕ್ತಿಗಳಿಗೆ ಚೀನಾ ವಿರುದ್ಧ ಒಂದು ಕಾರ್ಯವ್ಯೂಹಾತ್ಮಕ ಪ್ರದೇಶವಾಗಿ ಮಹತ್ವದ ಸ್ಥಾನವನ್ನು ಹೊಂದಿದೆ. ತೈವಾನಿನ ವಿಷಯದಲ್ಲಿ ತನ್ನ ನಿಲುವಿನ ಬಗ್ಗೆ ಯುಎಸ್‌ಎಯು ಆಸ್ಪಷ್ಟತೆಯನ್ನು ತೋರಿಸುತ್ತಾಬಂದಿದೆ. ಅದು ಪಿಆರ್‌ಸಿಯ ’ಒಂದು ಚೀನಾ’ ಧೋರಣೆಯನ್ನು ಬಹಿರಂಗವಾಗಿ ಬೆಂಬಲಿಸುವುದೂ ಇಲ್ಲ; ತೈವಾನಿನ ಸ್ವಾತಂತ್ರ್ಯವನ್ನು ಒಪ್ಪುವುದೂ ಇಲ್ಲ.

ನ್ಯಾನ್ಸಿ ಪೆಲೋಸಿ

ಐತಿಹಾಸಿಕವಾಗಿ ಫೋರ್ಮೋಸ (ತೈವಾನ್) ಚೀನಾದ ಪೂರ್ವ ತೀರದಾಚೆ ಇರುವ ದ್ವೀಪವಾಗಿರುವುದರಿಂದ, ವ್ಯೂಹಾತ್ಮಕವಾಗಿ ವಸಾಹತುಶಾಹಿ ಶಕ್ತಿಗಳ ನಡುವೆ ಸ್ಪರ್ಧೆಗೆ ಕಾರಣವಾಗಿತ್ತು. ಚೀನಾದ ಸಾಮ್ರಾಜ್ಯಗಳು ಶತಮಾನಗಳಿಂದ ಬ್ರಿಟಿಷರು, ಡಚ್ಚರು, ಫ್ರೆಂಚರು ಮುಂತಾದ ವಸಾಹತುಶಾಹಿ ಶಕ್ತಿಗಳನ್ನು ದೂರ ಇಡಲು ಕಾದಾಡುತ್ತಲೇ ಇರಬೇಕಾಗಿತ್ತು. 1894ರಲ್ಲಿ ಜಪಾನ್ ತೈವಾನನ್ನು ಆಕ್ರಮಿಸಿತು. ಜಪಾನಿನ ಆಡಳಿತ ಅಲ್ಲಿ ಎರಡನೇ ಮಹಾಯುದ್ಧ ಮುಗಿಯುವ ತನಕವೂ ಮುಂದುವರಿದಿತ್ತು. ನಂತರ ಜಪಾನ್- ಎರಡನೇ ವಿಶ್ವ ಯುದ್ಧದಲ್ಲಿ ಗೆದ್ದ ಮಿತ್ರಪಕ್ಷಗಳ ಜೊತೆಗೆ ಕಾದಾಡಿದ್ದ ಚೀನಾಕ್ಕೆ ಅದನ್ನು ಬಿಟ್ಟು ಕೊಡಬೇಕಾಯಿತು. ಇದು 1927ರಿಂದ 1949ರ ತನಕ ನಡೆದ ಚೀನಾದ ಅಂತರ್ಯುದ್ಧದ ಕೊನೆಯ ವರ್ಷಗಳಲ್ಲಿ ಆಗಿತ್ತು. ಈ ಯುದ್ಧವು ಕ್ವಿಂಗ್ ರಾಜಮನೆತನದಿಂದ ಅಧಿಕಾರ ಕಿತ್ತುಕೊಂಡ ರಾಷ್ಟ್ರೀಯವಾದಿಗಳು (ನ್ಯಾಷನಲಿಸ್ಟ್ಸ್) ಮತ್ತು ಅವರ ವಿರುದ್ಧ ಬಂಡೆದ್ದಿದ್ದ ಕಮ್ಯುನಿಸ್ಟರ ನಡುವೆ ನಡೆದಿತ್ತು. ತೈವಾನಿನ ನಿಯಂತ್ರಣವು ಚೀನಾದ ಕೈಗೆ ಬಂದಾಗ, ರಾಷ್ಟ್ರೀಯವಾದಿಗಳು ಅಲ್ಲಿ ಅಧಿಕಾರದಲ್ಲಿ ಇದ್ದರು. ಅಂತರ್ಯುದ್ಧದಲ್ಲಿ ರಾಷ್ಟ್ರೀಯವಾದಿಗಳು ಕಮ್ಯುನಿಸ್ಟರ ಎದುರು ಸೋತುಹೋದರು. ಚೀನಾದ ಕಮ್ಯುನಿಸ್ಟ್ ಪಕ್ಷವು ತಾನೇ ಚೀನಾದ ಅಧಿಕೃತ ಆಡಳಿತಗಾರ ಎಂದು ಘೋಷಿಸಿ, 1951ರ ವೇಳೆಗೆ ಚೀನಾದ ಇಡೀ ಮುಖ್ಯಭೂಮಿಯ ಮೇಲೆ ನಿಯಂತ್ರಣ ಸಾಧಿಸಿತು. ರಾಷ್ಟ್ರೀಯವಾದಿ ಸರಕಾರವು ತೈವಾನಿಗೆ ಓಡಿಹೋಗಿ, ತೈಪೆಯಲ್ಲಿ ರಾಜಧಾನಿಯನ್ನು ಸ್ಥಾಪಿಸಿ, ತಾನೇ ಚೀನಾದ ಅಧಿಕೃತ ಆಡಳಿತಗಾರ ಎಂದು ಘೋಷಿಸಿತು. ಅದು ರಿಪಬ್ಲಿಕ್ ಆಫ್ ಚೈನಾ (ಆರ್‌ಓಸಿ) ಎಂಬ ಹೆಸರಿನಲ್ಲಿ ಇಡೀ ಚೀನಾವನ್ನು ಅಂತಾರಾಷ್ಟ್ರೀಯವಾಗಿ ಪ್ರತಿನಿಧಿಸತೊಡಗಿತು.

ಎರಡು ಚೀನಾಗಳು

1954ರಲ್ಲಿ, ಪಿಆರ್‌ಸಿ ಏನಾದರೂ ಈ ದ್ವೀಪದ ಮೇಲೆ ಆಕ್ರಮಣ ಮಾಡಿದರೆ ಆರ್‌ಓಸಿಯನ್ನು ರಕ್ಷಿಸುವ ಭರವಸೆ ನೀಡುವಂತಹ ಒಪ್ಪಂದಕ್ಕೆ ಯುಎಸ್‌ಎ ಸಹಿ ಹಾಕಿತು. ಇದು ತೈವಾನನ್ನು ಪಿಆರ್‌ಸಿ ಜೊತೆಗೆ ಸೇರಿಸಿಕೊಳ್ಳಲು ಚೀನಾ ಹಿಂದೇಟು ಹಾಕುವಂತೆ ಮಾಡಿತು. ಕೊರಿಯಾ, ಕಾಂಬೋಡಿಯಾ, ವಿಯೆಟ್ನಾಂ ಮತ್ತು ಲಾವೋಸ್‌ನಲ್ಲಿ ಯುದ್ಧದಲ್ಲಿ ತೊಡಗಿದ್ದ ಯುಎಸ್‌ಎ, ಪೂರ್ವ ಏಷ್ಯಾದಲ್ಲಿ ಪ್ರಬಲವಾದ ಸೇನಾ ಅಸ್ತಿತ್ವವನ್ನು ಕಾದುಕೊಂಡಿತ್ತು. ಒಂದು ವೇಳೆ ಪಿಆರ್‌ಸಿಯು ಆರ್‌ಓಸಿಯ ಮೇಲೆ ಆಕ್ರಮಣ ಮಾಡಿದರೆ, ಅದು ಇನ್ನೊಂದು ಘರ್ಷಣೆಗೆ ಕಾರಣವಾಗುತ್ತಿತ್ತು. ಆ ಹೊತ್ತಿಗೆ ಪಿಆರ್‌ಸಿ ಅದಕ್ಕೆ ಸಿದ್ಧವಾಗಿರಲಿಲ್ಲ. 1964ರಲ್ಲಿ ಚೀನಾವು ಪರಮಾಣು ಅಸ್ತ್ರಗಳ ಪರೀಕ್ಷೆ ಮತ್ತು ಅಭಿವೃದ್ಧಿ ಆರಂಭಿಸಿತು. ಇದುವೇ ಯುಎಸ್‌ಎಯು ಚೀನಾದ ಮೇಲೆ ಆಕ್ರಮಣ ಮಾಡದಿರಲು ಮುಖ್ಯ ಕಾರಣವಾಗಿರಬಹುದು.

ಪಿಆರ್‌ಸಿ ಮತ್ತು ಸೋವಿಯತ್ ಒಕ್ಕೂಟದ ನಡುವೆ ಬಿರುಕು ಉಂಟಾದ ನಂತರವಷ್ಟೇ- 1979ರಲ್ಲಿ ಯುಎಸ್‌ಎಯು ಪಿಆರ್‌ಸಿಗೆ ಏಕೈಕ ಕಾನೂನುಬದ್ಧ ಸರಕಾರ ಎಂಬ ಮಾನ್ಯತೆ ನೀಡಿತು. ಇದು ತೈವಾನಿನ ಸರಕಾರಕ್ಕೆ ಅದರ ಅಧಿಕೃತ ಮಾನ್ಯತೆಯನ್ನು ಕೊನೆಗೊಳಿಸಿತು. ಆಗಿನಿಂದ ಯುಎಸ್‌ಎಯ ನಿಲುವು, ’ಒಂದೇ ಚೀನಾ ಇರುವುದು ಮತ್ತು ತೈವಾನ್ ಚೀನಾದ ಭಾಗ’ ಎಂಬ ಚೀನೀ ನಿಲುವಿಗೆ ಮಾನ್ಯತೆ ನೀಡುತ್ತದೆ. ಆದರೆ, ಈ ನಿಲುವನ್ನು ಉದ್ದೇಶಪೂರ್ವಕ ಕಾರಣಕ್ಕಾಗಿಯೇ ಅಸ್ಪಷ್ಟವಾಗಿಯೇ ಇಟ್ಟುಕೊಳ್ಳಲಾಗಿದೆ. ಚೀನಾದ ಸರಕಾರವು ವ್ಯಾಖ್ಯಾನಿಸುವ ರೀತಿಯಲ್ಲಿ ಒಂದೇ ಚೀನಾ ಇರುವುದೆಂಬುದನ್ನಾಗಲೀ, ತೈವಾನ್ ಚೀನಾದ ಭಾಗ ಎಂಬುದನ್ನಾಗಲೀ ಯುಎಸ್‌ಎ ಒಪ್ಪುವುದಿಲ್ಲ ಮತ್ತು ಅದಕ್ಕೆ ಮಾನ್ಯತೆ ನೀಡುವುದಿಲ್ಲ. ಆದರೆ, ಅದು ಹಾಗೆ ಒಪ್ಪುತ್ತದೆ ಎಂದು ವ್ಯಾಖ್ಯಾನಿಸುವುದಕ್ಕೂ ಸಾಕಷ್ಟು ಅವಕಾಶಗಳು ಇವೆ. ಎರಡೂ ದೇಶಗಳ ಹಿತಾಸಕ್ತಿಗಳಿಗೆ ಇದು ತೃಪ್ತಿಕರವಾಗಿರುವುದರಿಂದ ಪಿಆರ್‌ಸಿಯಾಗಲಿ, ಯುಎಸ್‌ಎ ಆಗಲೀ, ಈ ಕುರಿತು ಸ್ಪಷ್ಟನೆ ನೀಡುವ ಗೋಜಿಗೇ ಹೋಗಿಲ್ಲ.

ಪ್ರಸ್ತುತ ಪರಿಸ್ಥಿತಿ ಏನು?

1990ರಿಂದ ಜಗತ್ತಿನಲ್ಲಿ ಚೀನಾದ ಸ್ಥಾನಮಾನ ಬೆಳೆದಿದೆ. 1980ರ ದಶಕದಲ್ಲಿ ಅದು ಚದರಿಹೋಗುತ್ತಿದೆ ಎಂಬಂತೆ ಕಾಣುತ್ತಿತ್ತು. ಆದರೆ, 1990 ಮತ್ತು 2000ದ ದಶಕಗಳಲ್ಲಿ ಚೀನಾವು ಉತ್ಪಾದನೆ, ಹಣಕಾಸು, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರೀ ಪ್ರಗತಿ ಸಾಧಿಸಿದೆ. ಈ ಅಭಿವೃದ್ಧಿಯು ಪಾಶ್ಚಾತ್ಯ ದೇಶಗಳಿಗೆ ಸಂಬಂಧಿಸಿ ಚೀನಾದ ಸ್ಥಾನವನ್ನು ಸರಿಸಮಾನಗೊಳಿಸಿದೆ. 2008ರ ಆರ್ಥಿಕ ಬಿಕ್ಕಟ್ಟು ಚೀನಾದ ಆರ್ಥಿಕ ಸ್ಥಾನಮಾನದಲ್ಲಿ ಭಾರೀ ಪಲ್ಲಟ ಉಂಟುಮಾಡಿತು. ಚೀನಾದ ಸುತ್ತ ಉಳಿದಿದ್ದ ತಮ್ಮ ಕೆಲವು ನೆಲೆಗಳು ಬೇಗನೇ ಮಾಯವಾಗಬಹುದು ಎಂದು ಪಾಶ್ಚಾತ್ಯ ಶಕ್ತಿಗಳು ಹೆದರಿದವು. ಚೀನಾವು ನಿಧಾನವಾಗಿ ಹಾಂಕಾಂಗ್‌ಅನ್ನು ಚೀನೀ ರಾಜಕೀಯ ವ್ಯವಸ್ಥೆಯೊಳಗೆ ಸೇರಿಸಿಕೊಳ್ಳಲು ಆರಂಭಿಸಿತು. ಚೀನಾವು ಜಗತ್ತಿನಾದ್ಯಂತ ತನ್ನ ಆರ್ಥಿಕ ಪ್ರಭಾವವನ್ನು ಬೆಳೆಸಿಕೊಳ್ಳುತ್ತಾ ಬಂದಿದೆ. ಚೀನಾವು ತೈವಾನಿನ ಮೇಲೆ ತನ್ನ ಅಧಿಕಾರ ಸ್ಥಾಪನೆಯನ್ನು ಇನ್ನಷ್ಟು ಬಲಗೊಳಿಸಬಹುದು ಎಂಬ ಭಯ ಪಾಶ್ಚಾತ್ಯ ಶಕ್ತಿಗಳಿಗೆ ಇದೆ.

ಅನುಕೂಲಕರ ಗೊಂದಲ

ಒಂದು ಸಾರ್ವಭೌಮ ರಾಷ್ಟ್ರವಾಗಿ ತೈವಾನಿನ ಸ್ಥಾನಮಾನ ಆಸ್ಪಷ್ಟವಾಗಿದೆ. ಪಾಶ್ಚಾತ್ಯ ಶಕ್ತಿಗಳು, ಪಿಆರ್‌ಸಿ ಮತ್ತು ತೈವಾನಿನ ಸರಕಾರ ಕೂಡಾ ತಮ್ಮತಮ್ಮ ಅನುಕೂಲಕ್ಕಾಗಿ ಈ ಆಸ್ಪಷ್ಟತೆಯನ್ನು ಮುಂದುವರಿಯಲು ಬಿಟ್ಟಿವೆ. ಈ ಆಸ್ಪಷ್ಟತೆಯನ್ನು ಭೇದಿಸಲು ಹೊರಟರೆ ಅದು ಸಂಘರ್ಷಕ್ಕೆ ಕಾರಣವಾಗುವ ಪರಿಸ್ಥಿತಿಯನ್ನು ಉಂಟುಮಾಡಬಹುದು. ಪೆಲೋಸಿಯವರ ಭೇಟಿಯು ಇಂತದ್ದಕ್ಕೆ ಒಂದು ಉದಾಹರಣೆ. ತೈವಾನಿನ ಸ್ವಾತಂತ್ರ್ಯಕ್ಕೆ ಬಹಿರಂಗ ಬೆಂಬಲ ನೀಡುವುದಕ್ಕೆ ಯಾವುದೇ ಪ್ರಮುಖ ಶಕ್ತಿಗಳು ಮುಂದಾಗಿಲ್ಲ. ಈಗಲೂ ತೈವಾನಿನ ಮೇಲೆ ಚೀನಾದ ಹಕ್ಕು ಸ್ಥಾಪನೆ ಕೂಡಾ ಕೇವಲ ನಾಮಮಾತ್ರದ್ದಾಗಿದೆ. ತೈವಾನ್ ಚೀನಾದೊಂದಿಗೆ ಉತ್ತಮವಾದ ವ್ಯಾಪಾರ ಸಂಬಂಧಗಳನ್ನು ಹೊಂದಿದೆ. ತೈವಾನಿನ ಜನರ ನಡುವೆ ನಡೆಸಿದ ಮತಗಣನೆಯು – ಹೆಚ್ಚಿನವರು ಯಥಾಸ್ಥಿತಿಯ ಮುಂದುವರಿಕೆಯನ್ನು ಬೆಂಬಲಿಸುತ್ತಾರೆ ಎಂದು ಸೂಚಿಸುತ್ತದೆ.

ಚೀನಿ ರಾಷ್ಟ್ರೀಯ ಅಸ್ಮಿತೆ ಅಥವಾ ಗುರುತು ಎಂಬುದು – ನಿರ್ದಿಷ್ಟವಾದ ವಸಾಹತುಶಾಹಿ ಅನುಭವದೊಂದಿಗೆ ತಳುಕು ಹಾಕಿಕೊಂಡಿದೆ. ಪಾಶ್ಚಾತ್ಯ ರಾಷ್ಟ್ರಗಳು ಚೀನಾದ ಮೇಲೆ ಆಕ್ರಮಣ ಮಾಡಿದರು; ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ – ಆಫೀಮನ್ನು ಹರಡಿದರು; ಆರ್ಥಿಕ ದಾಸ್ಯಕ್ಕೆ ಗುರಿಪಡಿಸಿದರು; ಸಾಮಾಜಿಕ ಹಾಗೂ ರಾಜಕೀಯ ಸಂಘರ್ಷವನ್ನು ಪ್ರಚೋದಿಸಿ, ಪ್ರೋತ್ಸಾಹಿಸಿದರು. ಚೀನಾದ ಕ್ರಾಂತಿಯ ನಂತರದಿಂದ, ವಿಶೇಷವಾಗಿ ಈಗ, ತೈವಾನ್ ತಮ್ಮ ದೇಶದ ಭಾಗ ಮತ್ತು ಪಾಶ್ಚಾತ್ಯ ದೇಶಗಳು ಅದನ್ನು ರಕ್ಷಿಸುತ್ತಿರುವುದು ಚೀನೀ ರಾಷ್ಟ್ರಕ್ಕೆ ಬೆದರಿಕೆ ಎಂಬಂತೆ ಹೆಚ್ಚಿನ ಚೀನೀಯರು ನೋಡುತ್ತಿದ್ದಾರೆ. ತೈವಾನ್ ಕುರಿತ ಯುಎಸ್‌ಎಯ ಆಸ್ಪಷ್ಟತೆಯನ್ನು ಚೀನಾದಲ್ಲಿರುವ ಹೆಚ್ಚಿನ ಜನರು, ಚೀನಾದ ’ಒಂದು ಚೀನಾ’ ಧೋರಣೆಯ ಅಂಗೀಕಾರ ಎಂಬಂತೆ ಕಾಣುತ್ತಿದ್ದಾರೆ.

ಪಾಶ್ಚಾತ್ಯ ಶಕ್ತಿಗಳು ಚೀನಾದ ಮಾನವ ಹಕ್ಕುಗಳ ಉಲ್ಲಂಘನೆಗಳ ವಿಷಯ ಮತ್ತು ಟಿಬೆಟ್ ಹಾಗೂ ಹಾಂಕಾಂಗ್‌ನ ಮೇಲೆ ಅದು ಹಕ್ಕು ಸ್ಥಾಪಿಸಿದ ಐತಿಹಾಸಿಕ ವಿಷಯವನ್ನು ಜೊತೆಗೂಡಿಸಿ ಚರ್ಚಿಸುತ್ತವೆ. ಇವೆರಡೂ ಮುಖ್ಯವಾದವು; ಆದರೆ, ಬೇರೆಬೇರೆ ವಿಷಯಗಳು. ಕೊನೆಗೂ ನೋಡಿದಲ್ಲಿ, ಈ ಅಸ್ಪಷ್ಟತೆಯನ್ನು ನಿವಾರಿಸಲು ಯಾವುದೇ ಕಡೆಯವರೂ ಬಯಸುತ್ತಿಲ್ಲ. ಅದು ಅವರೆಲ್ಲರಿಗೂ ಅನುಕೂಲಕರವಾಗಿಯೇ ಕೆಲಸಮಾಡಿದೆ.

ಚೀನಾ ಮತ್ತು ಯುಎಸ್‌ಎ ನಡುವಿನ ಉದ್ವಿಗ್ನತೆಯು ಜಾಗತಿಕ ಚಿಂತೆಯ ವಿಷಯ. ರಷ್ಯಾದಂತೆಯೇ, ಚೀನಾದ ಸುತ್ತಲೂ ಯುಎಸ್‌ಎಯ ಪ್ರಭಾವವು ಚೀನಾದ ಆಸ್ತಿತ್ವಕ್ಕೇ ಬೆದರಿಕೆ ಒಡ್ಡುತ್ತದೆ ಮತ್ತದು ಚೀನಾವು ದುಡುಕಿನ ಕ್ರಮ ಕೈಗೊಳ್ಳಲಾಗುವುದಕ್ಕೆ ಪ್ರಚೋದನೆಯಾಗಬಹುದು ಎಂಬಂತೆ ಕಾಣಲಾಗುತ್ತಿದೆ. ಚೀನಾ ಒಂದು ಪರಮಾಣು ಶಸ್ತ್ರಾಸ್ತ್ರ ಶಕ್ತ ರಾಷ್ಟ್ರ. ಆದುದರಿಂದ, ಯುದ್ಧದ ಸಾಧ್ಯತೆಯು ಇಡೀ ಭೂಮಿಗೇ ಅಪಾಯ. ಈ ಸಂಘರ್ಷವು ಪರಮಾಣು ಯುದ್ಧದ ತನಕ ಹೋಗದಿದ್ದರೂ, ಚೀನಾ ಮತ್ತು ಯುಎಸ್‌ಎ ಎರಡೂ ಜಾಗತಿಕ ಆರ್ಥಿಕತೆಯಲ್ಲಿ ನಿರ್ಣಾಯಕ ಪಾತ್ರಧಾರಿಗಳು. ಆದುದರಿಂದ ಈ ಎರಡೂ ದೇಶಗಳ ನಡುವಿನ ಶತ್ರುತ್ವವು ಪ್ರತಿಯೊಬ್ಬರ ಜೀವನದ ಹಲವಾರು ವಿಷಯಗಳ ಮೇಲೆ ಸುಲಭವಾಗಿ ದುಷ್ಪರಿಣಾಮ ಬೀರಬಹುದು.

ಕನ್ನಡಕ್ಕೆ: ನಿಖಿಲ್ ಕೋಲ್ಪೆ

ಕಿಶೋರ್ ಗೋವಿಂದ

ಕಿಶೋರ್ ಗೋವಿಂದ
ಬೆಂಗಳೂರಿನಲ್ಲಿ ನೆಲೆಸಿರುವ ಕಿಶೋರ್ ಅವರು ಗಣಿತಶಾಸ್ತ್ರಜ್ಞರು. ಜಾಗತಿಕ ರಾಜಕೀಯ ಆಗುಹೋಗುಗಳನ್ನು ನಿಕಟವಾಗಿ ಗಮನಿಸುವ ಅವರು ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಇಟಲಿಯ ಸಂಸತ್ತಿನ ವಿಸರ್ಜನೆಯ ಸುತ್ತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...