Homeಮುಖಪುಟರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ABVP ಧ್ವಜ ಹಾರಾಟ: ಸಚಿವ ನಾಗೇಶ್ ವಿರುದ್ಧ ದೂರು

ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ABVP ಧ್ವಜ ಹಾರಾಟ: ಸಚಿವ ನಾಗೇಶ್ ವಿರುದ್ಧ ದೂರು

- Advertisement -
- Advertisement -

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ರವರ ನೇತೃತ್ವದಲ್ಲಿ ಎಬಿವಿಪಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಿಸಿದ್ದಾರೆ ಎಂದು ಆರೋಪಿಸಿ ಸಿಂಧನೂರಿನಲ್ಲಿ ಸಚಿವ ನಾಗೇಶ್‌ರವರ ವಿರುದ್ಧ ದೂರು ದಾಖಲಾಗಿದೆ.

ಸಿಂಧನೂರಿನ ಸಾಮಾಜಿಕ ಕಾರ್ಯಕರ್ತರಾದ ಎಂ.ಗಂಗಾಧರ ಎಂಬುವವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, “ಆಗಸ್ಟ್ 10 ರಂದು ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ ಅವರು ತಿಪಟೂರಿನಲ್ಲಿ ಶಾಲಾ ಸಿಬ್ಬಂದಿವರ್ಗ ಹಾಗೂ ಮಕ್ಕಳನ್ನು ಬಳಸಿಕೊಂಡು ತ್ರಿವರ್ಣಧ್ವಜ ಅಂದರೆ, ರಾಷ್ಟ್ರಧ್ವಜದ ಮೇಲೆ ಎಬಿವಿಪಿ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುತ್ತಾರೆ. ಇದು ರಾಷ್ಟ್ರದ್ರೋಹಕ್ಕೆ ಸಮನಾದ ಅಪರಾಧವಾಗಿರುತ್ತದೆ, ಹಾಗಾಗಿ ಅವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದ್ದಾರೆ.

ಶಾಲಾ ಮಕ್ಕಳನ್ನು ಇಂತಹ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದುರ್ದೈವದ ಸಂಗತಿಯಾಗಿದೆ. ಇದು ಒಬ್ಬ ಶಿಕ್ಷಣ ಸಚಿವರು ಭಾಗವಹಿಸುತ್ತಾರೆ ಎನ್ನುವುದಕ್ಕೆ ಎಬಿವಿಪಿ ಸಂಘಟನೆಯೊಂದಿಗೆ ಶಾಲಾ ಕಾಲೇಜಿನ ಉಪನ್ಯಾಸಕರುಗಳು ರಸ್ತೆಗೆ ಇಳಿದಿರುವುದು ದೇಶದ್ರೋಹವಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಧ್ವಜ ಸಂಹಿತೆ ಮತ್ತು ರಾಷ್ಟ್ರದ್ರೋಹದ ಅಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರುದಾರರು ಮನವಿ ಮಾಡಿದ್ದಾರೆ.

ನಡೆದಿದ್ದೇನು?

‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಎಬಿವಿಪಿ ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಸಚಿವ ನಾಗೇಶ್ ಭಾಗವಹಿಸಿದ್ದರು. ಭಾಗಶಃ ವಿದ್ಯಾರ್ಥಿನಿಯರೇ ಭಾಗವಹಿಸಿದ್ದ ಈ ಮೆರವಣಿಗೆಯಲ್ಲಿ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಹೆಜ್ಜೆ ಹಾಕಿದ್ದರು. ಆದರೆ ಅದಕ್ಕಿಂತಲೂ ಎತ್ತರದಲ್ಲಿ ಎಬಿವಿಪಿ ಧ್ವಜವನ್ನು ಹಿಡಿಯಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ದಾಖಲಾಗಿತ್ತು.

ಧ್ವಜ ಸಂಹಿತೆ ಏನು ಹೇಳುತ್ತದೆ?

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, “ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು” ಎಂದು ಹೇಳುತ್ತದೆ. ಆದರೆ ಸಚಿವ ನಾಗೇಶ್‌ ಅವರು ಭಾಗವಹಿಸಿದ್ದ ಮೆರವಣಿಗೆಯು ಧ್ವಜ ಸಂಹಿತೆಯ ಈ ನಿಯಮವನ್ನು ಉಲ್ಲಂಘಿಸಲಾಗಿದೆ.

ಧ್ವಜ ಸಂಹಿತೆಯ ನಿಯಮ ( ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು.
ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು.
ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು.

ಸಾಂವಿಧಾನಿಕ ಹುದ್ದೆಯಲ್ಲಿ ಇರುವ ಜನಪ್ರತಿನಿಧಿಯೊಬ್ಬ ಕಾನೂನು ಉಲ್ಲಂಘಿಸಿದ್ದು ರಾಜ್ಯದಾದ್ಯಂತ ಆಕ್ರೊಶ ಹುಟ್ಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಜಿಎನ್ ನಾಗರಾಜ್, “ಹರ್ ಘರ್ ಮೇ ತಿರಂಗಾ ಎಂದು ವದರುತ್ತಿರುವವರಿಗೆ‌ ದೇಶಪ್ರಜ್ಞೆ ಇದ್ದರೆ ಸಂಪುಟದಿಂದ‌ ವಜಾ ಮಾಡಿ. ತಕ್ಷಣ ಈ ಅಪರಾಧ ಮಾಡಿದವರಿಗೆ ತಕ್ಕ ಕಾನೂನಿನ ಶಿಕ್ಷೆ ನೀಡಿ” ಎಂದು ಕಿಡಿ ಕಾರಿದ್ದಾರೆ.

ವಿಧಾನ ಪರಿಷತ್‌‌ನಲ್ಲಿ ವಿಪಕ್ಷದ ನಾಯಕರಾಗಿರುವ ಹರಿಪ್ರಸಾದ್‌ ಅವರು, ತ್ರಿವರ್ಣ ಧ್ವಜದ ಮೇಲೆ ಯಾವ ಧ್ವಜವನ್ನೇ ಹಾರಿಸುವುದು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. “ಶಿಕ್ಷಣ ಸಚಿವರಿಗೆ ಕನಿಷ್ಟ ಕಾನೂನಿನ ತಿಳುವಳಿಕೆ ಇಲ್ಲದೆ, ಭಾಗವಧ್ವಜವನ್ನ ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡು ಅಪರಾಧ ಮಾಡಿದ್ದಲ್ಲದೇ RSS ಮನಸ್ಥಿತಿಯನ್ನ ತೋರಿಸಿದ್ದಾರೆ. ಕೂಡಲೇ ಬಿಸಿ ನಾಗೇಶ್‌ ಮೇಲೆ ದ್ವಜಸಂಹಿತೆಯಡಿ ಕೇಸ್ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...