Homeಮುಖಪುಟರಾಷ್ಟ್ರಧ್ವಜ ಹಾರಿಸದ ಮನೆಗಳ ಫೋಟೋ ತೆಗೆದುಕೊಳ್ಳಿ: ಉತ್ತರಾಖಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ

ರಾಷ್ಟ್ರಧ್ವಜ ಹಾರಿಸದ ಮನೆಗಳ ಫೋಟೋ ತೆಗೆದುಕೊಳ್ಳಿ: ಉತ್ತರಾಖಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ

- Advertisement -
- Advertisement -

“75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾರ ಮನೆಯ ಮೇಲೆ ತಿರಂಗ ಧ್ವಜಗಳಿರುವುದಿಲ್ಲವೋ ಆ ಮನೆಯ ಫೋಟೋಗಳನ್ನು ತೆಗೆದುಕೊಳ್ಳಿ” ಎಂದು ಉತ್ತರಾಖಂಡ ಬಿಜೆಪಿ ಘಟಕದ ಮುಖ್ಯಸ್ಥ ತನ್ನ ಬೆಂಬಲಿಗರಿಗೆ ಸೂಚನೆ ನೀಡಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಆಗಸ್ಟ್ 13ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ “ಹರ್ ಘರ್ ತಿರಂಗ” ಅಭಿಯಾನಕ್ಕೆ ಕರೆ ನೀಡಿದ್ದಾರೆ. ಭಾರತದಾದ್ಯಂತ 20 ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಸಾಮೂಹಿಕವಾಗಿ ಪ್ರದರ್ಶನ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಲ್ದ್ವಾನಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಉತ್ತರಾಖಂಡ್ ಮುಖ್ಯಸ್ಥ ಮಹೇಂದ್ರ ಭಟ್, “ರಾಷ್ಟ್ರಧ್ವಜವನ್ನು ಹಾರಿಸದವರನ್ನು ಭಾರತ ನಂಬಲು ಸಾಧ್ಯವಿಲ್ಲ” ಎಂದಿದ್ದಾರೆ.

“ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವುದರಿಂದ ಯಾರಿಗೆ ತಾನೇ ಏನು ಸಮಸ್ಯೆಯಾಗಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾರು ರಾಷ್ಟ್ರೀಯವಾದಿ ಮತ್ತು ಯಾರು ರಾಷ್ಟ್ರೀಯವಾದಿ ಅಲ್ಲ ಎಂಬುದನ್ನು ಸುತ್ತಮುತ್ತಲ ನಿವಾಸಿಗಳು ನೋಡಲು ಬಯಸುತ್ತಾರೆ” ಎಂದಿದ್ದಾರೆ.

ಉತ್ತರಾಖಂಡದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಗಣೇಶ್ ಗೋಡಿಯಾಲ್ ಅವರು ಪ್ರತಿಕ್ರಿಯೆ ನೀಡಿದ್ದು, “ರಾಷ್ಟ್ರೀಯ ಪಕ್ಷವೊಂದರ ರಾಜ್ಯಾಧ್ಯಕ್ಷರಾಗಿರುವುದರಿಂದ ಮಹೇಂದ್ರ ಭಟ್ ಅವರು ಕ್ಷುಲ್ಲಕ ಟೀಕೆಗಳನ್ನು ಮಾಡುವ ಮೊದಲು ಎರಡು ಬಾರಿ ಯೋಚಿಸಬೇಕು” ಎಂದು ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರಸ್ತುತ ಬೆಟ್ಟಗಳ ಶ್ರೇಣಿಯ ಭಾಗದಲ್ಲಿ ಪ್ರಸಾಸ ಮಾಡುತ್ತಿದ್ದೇನೆ. ತ್ರಿವರ್ಣ ಧ್ವಜವನ್ನು ಹಾರಿಸದ ಅನೇಕ ಮನೆಗಳನ್ನು ಇಲ್ಲಿ ನೋಡಬಹುದು. ಬಹುಶಃ ಬಿಜೆಪಿ ಆಡಳಿತದಿಂದಾಗಿ ಇವರು ಆರ್ಥಿಕ ಸಮಸ್ಯೆ ಎದುರಿಸುತ್ತಿರಬಹುದು” ಎಂದಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ತಳಹದಿಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಹಲವು ವರ್ಷಗಳಿಂದ ರಾಷ್ಟ್ರಧ್ವಜವನ್ನು ಹಾರಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಎಸ್.ಆರ್‌.ಹಿರೇಮಠ ಸಂದರ್ಶನ| ಎಸಿಬಿ ರದ್ದಾಗಿದ್ದು ಐತಿಹಾಸಿಕ ಗೆಲುವು, ಆದರೆ…,

“ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಒಪ್ಪುವುದಾದರೆ, ಆರೆಸ್ಸೆಸ್ ಅನ್ನು ಯಾರೂ ನಂಬಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಟೀಕೆಗಳು ಬಂದ ಬಳಿಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರ ಭಟ್‌, “ನನ್ನ ಹೇಳಿಕೆಯನ್ನು ಕಾಂಗ್ರೆಸ್ ತಪ್ಪಾಗಿ ಅರ್ಥೈಸಿಕೊಂಡಿದೆ. ಸರ್ಕಾರವು ವಿವಿಧ ಮಾಧ್ಯಮಗಳ ಮೂಲಕ ತ್ರಿವರ್ಣ ಧ್ವಜವನ್ನು ವಿತರಿಸುತ್ತಿದೆ. ಬಿಜೆಪಿ ಕೂಡ ಅದಕ್ಕೆ ಸಹಾಯ ಮಾಡುತ್ತಿದೆ. ಸ್ವಾತಂತ್ರ್ಯ ದಿನದಂದು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಸಮಸ್ಯೆಯಾದರೂ ಏನು ಎಂದು ಕೇಳಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಧ್ವಜಾರೋಹಣ ಮಾಡದವರನ್ನು ಈ ದೇಶದ ಜನರು ನಂಬುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...