Homeಮುಖಪುಟಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ದ್ವೇಷ ಭಾಷಣಗಳಿಂದ ಕುಖ್ಯಾತಿ ಪಡೆದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಗಾನಂದ ಹಿಂದೂಗಳಿಗೆ ತಿಳಿಸಿದ್ದಾರೆ.

ದ್ವೇಷ ಭಾಷಣಗಳಿಗೆ ಕುಖ್ಯಾತಿ ಪಡೆದಿರುವ, ಭಾರತದ ಸಂವಿಧಾನದ ಬಗ್ಗೆ ಅಗೌರವವನ್ನು ಹೊಂದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ತಮ್ಮ ಪ್ರವೃತ್ತಿಯನ್ನು ಮುಂದುವರಿಸಿದ್ದು, “ಹರ್‌ ಘರ್‌ ತಿರಂಗ ಅಭಿಯಾನದಿಂದ ಮುಸ್ಲಿಂ ಒಡೆತನದ ಸಂಸ್ಥೆಗೆ ಲಾಭವಾಗುತ್ತಿದೆ. ತಿರಂಗ ಧ್ವಜ ಹಾರಿಸುವ ಬದಲು ಹಿಂದೂಗಳು ತಮ್ಮ ಮನೆಯ ಮೇಲೆ ಭಗವಾ ಧ್ವಜ (ಕೇಸರಿ ಧ್ವಜ) ಹಾರಿಸಬೇಕು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಅಭಿಯಾನಕ್ಕಾಗಿ [ಧ್ವಜಗಳನ್ನು ಸಂಗ್ರಹಿಸುವ] ಅತಿದೊಡ್ಡ ಆದೇಶವನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ. ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು [ಹಿಂದೂಗಳು] ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ” ಎಂದು ನರಸಿಂಗಾನಂದ ನಾಲಿಗೆ ಹರಿಬಿಟ್ಟಿದ್ದಾರೆ.

ಆಗಸ್ಟ್ 13 ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ “ಹರ್ ಘರ್ ತಿರಂಗ” ಅಭಿಯಾನದಲ್ಲಿ ಪಾಲ್ಗೊಳ್ಳವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

“ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ” ಎಂದು ನರಸಿಂಹಾನಂದ ಆರೋಪಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಈ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ ಎಂದಿರುವ ನರಸಿಂಗಾನಂದ, “ರಾಜಕಾರಣಿಗಳು ನಿಮ್ಮ [ಹಿಂದೂಗಳ] ಹಣವನ್ನು ಮುಸ್ಲಿಮರನ್ನು ಶ್ರೀಮಂತರನ್ನಾಗಿ ಮಾಡಲು ಬಳಸಬಾರದು. ನಿಮ್ಮ ಮಕ್ಕಳನ್ನು ಕೊಲ್ಲಲು ವ್ಯವಸ್ಥೆ ಮಾಡಬಾರು. ಇವರ ಬಲೆಗೆ ಬೀಳಬೇಡಿ” ಎಂದಿದ್ದಾರೆ.

“ಹಿಂದೂಗಳು ರಾಷ್ಟ್ರಧ್ವಜವನ್ನು ಹಾರಿಸಬಾರದು. ಅದು ಹಿಂದೂಗಳಿಗೆ ಹಾನಿಯುಂಟುಮಾಡುತ್ತದೆ. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಬಣ್ಣದ ಧ್ವಜವನ್ನು ಹಾರಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ನಂತರ ಜನವರಿ 15ರಂದು ನರಸಿಂಗಾನಂದ ಬಂಧನಕ್ಕೊಳಗಾಗಿದ್ದರು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7ರಂದು ಅವರಿಗೆ ಜಾಮೀನು ನೀಡಲಾಗಿದೆ.

ಆದಾಗ್ಯೂ, ಏಪ್ರಿಲ್ 17 ರಂದು, ಅವರು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ಪ್ರಚೋದನಾತ್ಮಕ ಭಾಷಣವನ್ನು ನರಸಿಂಗಾನಂದ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ತಡೆಯಲು ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಹೇಳಿಕೆ ನೀಡಿದ್ದರು.

ಕಳೆದ ಜೂನ್‌ನಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದ ಯತಿ ನರಸಿಂಗಾನಂದ, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಹಿಂದೂ ಮಹಾಪಂಚಾಯತ್‌ ಆಯೋಜಕನ ವಿಕೃತಿ ಅನಾವರಣ; ಸರಣಿ ಅತ್ಯಾಚಾರದಿಂದ ನೊಂದ ಪತ್ನಿಯಿಂದ ಪ್ರಕರಣ ದಾಖಲು

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು.

ಹೀಗೆ ದ್ವೇಷ ಭಾಷಣಗಳ ಬಹುದೊಡ್ಡ ಇತಿಹಾಸ ಹೊಂದಿರುವ ಯತಿ ನರಸಿಂಗಾನಂದ ಮತ್ತೆ ಮತ್ತೆ ಜಾಮೀನು ಪಡೆದು ಹೊರಬಂದು ದ್ವೇಷ ಭಾಷಣಗಳನ್ನು ಮಾಡುತ್ತಾ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನರಸಿಂಗಾನಂದನ ವಿರುದ್ಧ ಈ ಕೂಡಲೇ ಕಾನೂನು ಕ್ರಮವನ್ನು ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...