Homeಮುಖಪುಟಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಆರ್‌ಎಸ್‌ಎಸ್‌ ತನ್ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತ್ರಿವರ್ಣ ಧ್ವಜದ ಚಿತ್ರವನ್ನು ಅಪ್‌ಲೋಡ್ ಮಾಡಿಕೊಂಡಿದೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಸೇರಿದಂತೆ ಆರ್‌ಎಸ್‌ಎಸ್‌ನ ಅಧಿಕೃತ ಖಾತೆಗಳಲ್ಲಿ ಭಾವುಟವನ್ನು ಹಾಕಿಕೊಳ್ಳಲಾಗಿದೆ.

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿದ್ದವು. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿದ್ದವು.

ಟ್ವಿಟರ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಫೇಸ್‌ಬುಕ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಅವರ ಟ್ವಿಟರ್‌ ಖಾತೆ

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದರು.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿತ್ತು.

ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದರು.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದರು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದರು.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....