Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...