Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...