Homeಮುಖಪುಟಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

ಕಾರ್ಯಕ್ರಮದ ವೇಳೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿತ

‘ದಿ ಸಟಾನಿಕ್ ವರ್ಸಸ್’ ಕೃತಿ ಬರೆದ ಬಳಿಕ ಜೀವ ಬೆದರಿಕೆಯನ್ನು ಎದುರಿಸಿದ ಸಲ್ಮಾನ್ ಅವರು ದಶಕ ಕಾಲ ತಲೆಮರೆಸಿಕೊಂಡು ಬದುಕಿದ್ದರು.

- Advertisement -
- Advertisement -

ಕೊಲೆ ಭೀತಿಯ ಬಳಿಕ ದಶಕಗಳ ಕಾಲ ತಲೆ ಮರೆಸಿಕೊಂಡಿದ್ದು, ಬಳಿಕ ಸಾರ್ವಜನಿಕ ಜೀವನಕ್ಕೆ ಮರಳಿದ್ದ ಭಾರತೀಯ ಮೂಲದ ಕಾದಂಬರಿಕಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್‌ನಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಶುಕ್ರವಾರ ರಾತ್ರಿ ನ್ಯೂಯಾರ್ಕ್‌‌ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿ ಚಾಕುವಿನಿಂದ ಹತ್ತರಿಂದ ಹದಿನೈದು ಬಾರಿ ಇರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ದಿ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ಬರಹಗಾರರು ಮತ್ತು ರಾಜಕಾರಣಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಇದೆಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ಕಲಾತ್ಮಕ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಲು 75 ವರ್ಷ ವಯಸ್ಸಿನ ರಶ್ದಿ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಯುವಕನೊಬ್ಬ ವೇದಿಕೆಗೆ ನುಗ್ಗಿದ್ದಾನೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸ್ ಪಡೆ ದಾಳಿಕೋರನನ್ನು ಬಂಧಿಸಿದೆ.

“ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ; ಅವರ ತೋಳಿನ ನರಗಳು ಕತ್ತರಿಸಲ್ಪಟ್ಟಿವೆ. ಅವರ ಲಿವರ್‌ಗೆ ಹಾನಿಯಾಗಿದೆ” ಎಂದು ರಶ್ದಿಯವರ ಪುಸ್ತಕ ಏಜೆಂಟ್ ಆಂಡ್ರ್ಯೂ ವೈಲಿ ಹೇಳಿದ್ದಾರೆ.

ಬಾಂಬೆಯಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ, ತಮ್ಮ ನಾಲ್ಕನೇ ಕಾದಂಬರಿ “ದಿ ಸೈಟಾನಿಕ್ ವರ್ಸಸ್”ನಿಂದಾಗಿ ಜೀವ ಬೆದರಿಕೆಗಳನ್ನು ಎದುರಿಸಿದರು. ಕೆಲವು ಮುಸ್ಲಿಮರು ಪುಸ್ತಕದಲ್ಲಿ ಧರ್ಮನಿಂದೆಯ ಭಾಗಗಳಿವೆ ಎಂದು ದೂರಿದರು. ಮುಸ್ಲಿಂ ಹೆಚ್ಚಿರುವ ಅನೇಕ ದೇಶಗಳಲ್ಲಿ ಈ ಕೃತಿಯನ್ನು ನಿಷೇಧಿಸಲಾಯಿತು. ನಿಷೇಧಿಸಲಾಯಿತು.

1981ರಲ್ಲಿ ರಶ್ದಿ ಅವರು ಬರೆದ ‘ಮಿಡ್‌ನೈಟ್ಸ್ ಚಿಲ್ಡ್ರನ್’ ಜನಮನ್ನಣೆ ಪಡೆಯಿತು. ಸ್ವಾತಂತ್ರ್ಯಾ ನಂತರದ ಭಾರತದ ಚಿತ್ರಣವನ್ನು ಕಟ್ಟಿಕೊಟ್ಟಿದ್ದ ಕೃತಿಯು, ಬ್ರಿಟನ್‌ನ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೂ ಭಾಜನವಾಗಿತ್ತು. ಆದರೆ 1988ರಲ್ಲಿ ಬಿಡುಗಡೆಯಾದ ‘ದಿ ಸಟಾನಿಕ್ ವರ್ಸಸ್’ ವಿವಾದಕ್ಕೆ ಈಡಾಯಿತು.

ಇರಾನ್ ಕ್ರಾಂತಿಕಾರಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಸಲ್ಮಾನ್ ರಶ್ದಿ ಅವರ ಹತ್ಯೆಗೆ ಕರೆ ನೀಡಿದ್ದರು. ಈ ಕೃತಿಯಲ್ಲಿ ಪ್ರವಾದಿ ಮಹಮ್ಮದ್‌ಗೆ ಅಗೌರವ ತೋರಲಾಗಿದೆ ಎಂದು ಹಲವು ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದರು.

ಧರ್ಮ ಆಚರಣೆ ಮಾಡದ ಭಾರತದ ಮುಸ್ಲಿಂ ದಂಪತಿಯ ಪುತ್ರನಾಗಿದ್ದ ರಶ್ದಿ, ನಾಸ್ತಿಕನಾಗಿದ್ದರು. ರಶ್ದಿಯವರನ್ನು ಕೊಂದವರಿಗೆ ಬಹುಮಾನ ನೀಡುವುದಾಗಿ ಫತ್ವಾ ಹೊರಡಿಸಿದ್ದರಿಂದ ಅವರು ತಲೆಮರೆಸಿಕೊಂಡು ಬದುಕಬೇಕಾಯಿತು.

ಇದನ್ನೂ ಓದಿರಿ: ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ರಶ್ದಿಯವರು ತಮ್ಮ ಕಾದಂಬರಿಯನ್ನು ‘ಸುಂದರ ಸೌಮ್ಯ’ ಎಂದು ಕರೆದಿದ್ದರು. ಕಾದಂಬರಿಯ ಜಪಾನೀ ಭಾಷಾಂತರಕಾರ ಹಿತೋಷಿ ಇಗರಾಶಿ 1991 ರಲ್ಲಿ ಕೊಲ್ಲಲ್ಪಟ್ಟಿದ್ದರು.

ಅವರ ಭಾಷಾಂತರಕಾರರು ಮತ್ತು ಪ್ರಕಾಶಕರ ಮೇಲೆ ಹತ್ಯೆಯ ಪ್ರಯತ್ನದ ನಂತರ ಅವರಿಗೆ ಬ್ರಿಟನ್‌ ಸರ್ಕಾರದಿಂದ ಪೊಲೀಸ್ ರಕ್ಷಣೆಯನ್ನು ನೀಡಲಾಗಿತ್ತು. ರಶ್ದಿ ಅವರು ಸುಮಾರು ಒಂದು ದಶಕ ಕಾಲ ತಲೆಮರೆಸಿಕೊಂಡೇ ಬದುಕಿದರು. ಪದೇ ಪದೇ ಮನೆಗಳನ್ನು ಬದಲಿಸುವುದು ಅನಿವಾರ್ಯವಾಗಿತ್ತು.

1998ರಲ್ಲಿ ಇರಾನ್ ಸರ್ಕಾರವು ರಶ್ದಿ ಹತ್ಯೆ ಆದೇಶವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ನಂತರ ಸಾರ್ವಜನಿಕ ಜೀವನಕ್ಕೆ ಅವರು ಮರಳಿದ್ದರು. ‘ಬ್ರಿಡ್ಜೆಟ್ ಜೋನ್ಸ್ ಡೈರಿ’ಸಿನಿಮಾ ಮತ್ತು ಅಮೆರಿಕದ ದೂರದರ್ಶನ ಕಾರ್ಯಕ್ರಮ ‘ಸೈನ್ಫೆಲ್ಡ್’ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರರಾಷ್ಟ್ರೀಯ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. ನಾಲ್ಕು ಬಾರಿ ಮದುವೆಯಾಗಿರುವ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...