Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...