Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...