Homeಮುಖಪುಟನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

ನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

- Advertisement -
- Advertisement -

ಇಂದು ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಲಕ್ಷಾಂತರ ಜನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದಿದ್ದಾರೆ. ಅದವರಲ್ಲಿ ಸುಭಾಷ್ ಚಂದ್ರಬೋಸ್‌ರವರು ಅಗ್ರಗಣ್ಯರು. ನನಗೆ ರಕ್ತ ಕೊಡಿ ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಯುವಜನರಿಗೆ ಕರೆನೀಡಿದ್ದ ಆ ಮಹಾನ್ ಚೇತನವನ್ನು ಭಾರತೀಯರ್ಯಾರು ಮರೆಯುವುದಿಲ್ಲ. ಇದೀಗ ಅವರ ಅವಶೇಷಗಳನ್ನು ಭಾರತಕ್ಕೆ ತರುವಂತೆ ಅವರ ಮಗಳು ಅನಿತಾ ಬೋಸ್ ಫಾಫ್ ಆಗ್ರಹಿಸಿದ್ದಾರೆ.

ನೇತಾಜಿಯವರು 1945ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದರು ಎಂದು ವ್ಯಾಪಕವಾಗಿ ನಂಬಲಾಗಿದೆ. ಆದರೆ ಅವರ ಸಾವಿನ ಬಗ್ಗೆ ಇಂದಿಗೂ ಚರ್ಚೆಗಳು ನಡೆಯುತ್ತಲೆ ಇವೆ. ಭಾರತೀಯ ಸರ್ಕಾರದ ಎರಡು ತನಿಖಾ ಆಯೋಗಗಳು ಅವರು ಸಾವನಪ್ಪಿದ್ದಾರೆ ಎಂದು ವರದಿ ನೀಡಿದರೆ ಅವುಗಳಿಗೆ ವಿರುದ್ಧವಾಗಿ ಎಂ. ಕೆ. ಮುಖರ್ಜಿ ನೇತೃತ್ವದ ಮೂರನೇ ಆಯೋಗವು ಬೋಸ್ ಜೀವಂತವಾಗಿದ್ದಾರೆಂಬ ಸಂಶಯಾಸ್ಪದ ಹೇಳಿಕೆಯನ್ನು ನೀಡಿತು. ಹಾಗಾಗಿ ನೇತಾಜಿಯವರ ಸಾವು ನಿಗೂಢವಾಗಿಯೇ ಉಳಿದಿದೆ.

ಈ ಕುರಿತು ಹೇಳಿಕೆ ನೀಡಿದ ನೇತಾಜಿಯವರ ಪುತ್ರಿ ಅನಿತಾ ಫಾಫ್‌ “ನನ್ನ ತಂದೆಯ ಅವಶೇಷಗಳನ್ನು ಭಾರತಕ್ಕೆ ತರುವ ಸಮಯ ಬಂದಿದೆ. ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಅವಶೇಷಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸುವುದು ಅವರ ಸಾವಿನ ಕುರಿತು ಅನುಮಾನಿಸುವವರಿಗೆ ಉತ್ತರವಾಗಲಿದೆ. ಇದಕ್ಕೆ ಜಪಾನ್ ಸರ್ಕಾರ ಒಪ್ಪಿಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಆಸ್ಟ್ರೀಯಾದಲ್ಲಿ ಜನಿಸಿರುವ, ಸದ್ಯ ಜರ್ಮನಿಯಲ್ಲಿ ಅರ್ಥಶಾಸ್ತ್ರಜ್ಞೆಯಾಗಿರುವ ನೇತಾಜಿಯವರ ಏಕೈಕ ಪುತ್ರಿಯಾದ ಅನಿತಾ ಬೋಸ್, “ನೇತಾಜಿಯವರ ಜೀವನದಲ್ಲಿ ಸ್ವಾತಂತ್ರ್ಯಕ್ಕಿಂತ ಮುಖ್ಯವಾದದ್ದು ಬೇರಾವುದು ಇರಲಿಲ್ಲ. ಅವರಿಗೆ ಬ್ರಿಟೀಷ್ ಆಳ್ವಿಕೆಯಿಂದ ಮುಕ್ತವಾದ ಭಾರತದಲ್ಲಿ ಬದುಕುವ ಹಂಬಲವಿತ್ತು. ಸ್ವಾತಂತ್ರ್ಯದ ಸಂಭ್ರಮವನ್ನು ಅನುಭವಿಸಲು ಅವರಿಲ್ಲದ ಈ ಸಂದರ್ಭದಲ್ಲಿ ಅವರ ಅವಶೇಷಗಳಾದರೂ ಭಾರತೀಯ ನೆಲಕ್ಕೆ ಮರಳುವ ಸಮಯ ಇದಾಗಿದೆ” ಎಂದಿದ್ದಾರೆ.

ಆಧುನಿಕ ತಂತ್ರಜ್ಞಾನ ಸತ್ಯವನ್ನು ತಿಳಿಸಲು ಶಸಕ್ತವಾಗಿದೆ. ಅವಶೇಷಗಳಿಂದ ಡಿಎನ್‌ಎ ತೆಗೆಯುವುದು ಸಾಧ್ಯವಿದೆ. ರೆಂಕೋಜಿ ದೇವಸ್ಥಾನದ ಅರ್ಚಕರು ಮತ್ತು ಜಪಾನ್ ಸರ್ಕಾರ ಡಿಎನ್‌ಎ ಪರೀಕ್ಷೆಗೆ ಒಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಳತು ವಿವೇಕ; ನೆಹರೂ ಆತ್ಮಕತೆಯಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...