Homeಮುಖಪುಟಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

ಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

- Advertisement -
- Advertisement -

ಬಿಜೆಪಿ ಮೈತ್ರಿಯಿಂದ ಹೊರ ಬಂದು ಆರ್‌ಜೆಡಿ ಜೊತೆಗೆ ಹೊಸದಾಗಿ ಸರ್ಕಾರ ರಚಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಗೆ ಅತಿ ಹೆಚ್ಚು ಸ್ಥಾನಗಳು ದೊರೆತಿದ್ದು, ನೂತನ ಸಚಿವರಿಗೆ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಬೋಧಿಸಿದ್ದಾರೆ.

ಬಿಹಾರ ರಾಜಕೀಯ ಬೆಳವಣಿಗೆಯ ಇಂದಿನ ಪ್ರಮುಖ ಅಂಶಗಳು ಇಲ್ಲಿವೆ.

  • ಇಂದು ಬಿಹಾರ ಸಂಪುಟಕ್ಕೆ ಒಟ್ಟು 31 ಸಚಿವರು ಸೇರ್ಪಡೆಗೊಂಡಿದ್ದಾರೆ. ತೇಜಸ್ವಿ ಯಾದವ್‌‌ ಅವರ ಆರ್‌ಜೆಡಿಗೆ 16 ಸಚಿವ ಸ್ಥಾನಗಳು ದೊರೆತಿದ್ದು, ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಅವರ ಜೆಡಿಯುಗೆ 11 ಸ್ಥಾನಗಳನ್ನು ಗಳಿಸಿದೆ.
    .
    ಇದನ್ನೂ ಓದಿ: ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?
  • ಕಾಂಗ್ರೆಸ್‌ನ ಇಬ್ಬರು ಶಾಸಕರು, ಜಿತಿನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾದ ಒಬ್ಬರು ಮತ್ತು ಏಕೈಕ ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಸಿಎಂ ನಿತೀಶ್ ಕುಮಾರ್ ಅವರು ಮೊಹಮ್ಮದ್ ಜಮಾ ಖಾನ್, ಜಯಂತ್ ರಾಜ್, ಶೀಲಾ ಕುಮಾರಿ, ಸುನಿಲ್ ಕುಮಾರ್, ಸಂಜಯ್ ಝಾ, ಮದನ್ ಸಾಹ್ನಿ, ಶ್ರವಣ್ ಕುಮಾರ್, ಅಶೋಕ್ ಚೌಧರಿ, ಲೇಶಿ ಸಿಂಗ್, ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಸೇರಿದಂತೆ ತಮ್ಮ ಪಕ್ಷದ ಹೆಚ್ಚಿನ ಮಂತ್ರಿಗಳನ್ನು ಉಳಿಸಿಕೊಂಡಿದ್ದಾರೆ.
  • ಆರ್‌ಜೆಡಿಯಿಂದ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್, ಅಲೋಕ್ ಮೆಹ್ತಾ, ಸುರೇಂದ್ರ ಪ್ರಸಾದ್ ಯಾದವ್ ಮತ್ತು ರಮಾನಂದ್ ಯಾದವ್, ಕುಮಾರ್ ಸರ್ವಜೀತ್, ಲಲಿತ್ ಯಾದವ್, ಸಮೀರ್ ಕುಮಾರ್ ಮಹಾಸೇತ್, ಚಂದ್ರಶೇಖರ್, ಜಿತೇಂದ್ರ ಕುಮಾರ್ ರೈ, ಅನಿತಾ ದೇವಿ ಮತ್ತು ಸುಧಾಕರ್ ಸಿಂಗ್, ಇಸ್ರೇಲ್ ಮನ್ಸೂರಿ, ಸುರೇಂದ್ರ ಸಿಂಗ್, ಕಾರ್ತಿಕೇಯ , ಶಹನವಾಜ್ ಆಲಂ, ಶಮೀಮ್ ಅಹಮದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
    .
    ಇದನ್ನೂ ಓದಿ: ಕಾಲು ಮುರಿಯಿರಿ, ಜಾಮೀನು ಕೊಡಿಸುತ್ತೇನೆ ಎಂದ ಸಿಎಂ ಶಿಂಧೆ ಬಣದ ಶಿವಸೇನೆ ಶಾಸಕನ ವಿರುದ್ಧ ದೂರು
  • ಕಾಂಗ್ರೆಸ್ ಶಾಸಕರಾದ ಅಫಕ್ ಆಲಂ ಮತ್ತು ಮುರಾರಿ ಲಾಲ್ ಗೌತಮ್ ಅವರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
  • ಹಿಂದೂಸ್ತಾನಿ ಅವಾಮ್ ಮೋರ್ಚಾದಿಂದ ಶಾಸಕ ಸಂತೋಷ್ ಸುಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಹಾರ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ 36 ಮಂತ್ರಿಗಳನ್ನು ಹೊಂದಬಹುದಾಗಿದೆ. ಭವಿಷ್ಯದ ಸಂಪುಟ ವಿಸ್ತರಣೆಗಾಗಿ ಕೆಲವು ಸಚಿವ ಸ್ಥಾನಗಳನ್ನು ಖಾಲಿ ಇರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿವೆ.
  • ಈ ತಿಂಗಳ ಆರಂಭದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯಿಂದ ಬೇರ್ಪಟ್ಟು ಆರ್‌ಜೆಡಿ ಮತ್ತು ಇತರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದ್ದಾರೆ.
  • ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಮತ್ತು ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿಯ ತೇಜಸ್ವಿ ಯಾದವ್ ಆಗಸ್ಟ್ 10 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಜೆಪಿಯು ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ ಎಂದು ನಿತೀಶ್‌ ಕುಮಾರ್‌ ಅವರ ಪಕ್ಷವೂ ಬೆದರಿದೆ.
    .
    ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ
  • 243 ಸ್ಥಾನಗಳಿರುವ ಬಿಹಾರ ವಿಧಾನಸಭೆಯಲ್ಲಿ ಮಹಾಮೈತ್ರಿಕೂಟವು 163 ರ ಒಟ್ಟು ಬಲವನ್ನು ಹೊಂದಿದೆ. ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡಿದ ನಂತರ ಅದರ ಬಲವು 164 ಕ್ಕೆ ಏರಿದೆ.
  • ಹೊಸ ಸರ್ಕಾರ ಆಗಸ್ಟ್ 24 ರಂದು ಬಿಹಾರ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವ ಸಾಧ್ಯತೆಯಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...