Homeಮುಖಪುಟಯುಪಿ: ತಿರಂಗ ಯಾತ್ರೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಫೋಟೋ ಮೆರವಣಿಗೆ

ಯುಪಿ: ತಿರಂಗ ಯಾತ್ರೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಫೋಟೋ ಮೆರವಣಿಗೆ

- Advertisement -
- Advertisement -

ಅಖಿಲ ಭಾರತೀಯ ಹಿಂದೂ ಮಹಾಸಭಾವು ಸೋಮವಾರ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಾಥೂರಾಂ ಗೋಡ್ಸೆಯ ಫೋಟೋದೊಂದಿಗೆ ತಿರಂಗಾ ಯಾತ್ರೆಯನ್ನು ನಡೆಸಿದೆ.

ಗಾಂಧಿ ಹಂತಕ ಗೋಡ್ಸೆಯ ಭಾವಚಿತ್ರದೊಂದಿಗೆ ರಾಷ್ಟ್ರಧ್ವಜದ ಮೆರವಣಿಗೆ ಮಾಡಿರುವುದು ಟೀಕೆಗಳಿಗೆ ಕಾರಣವಾಗಿದೆ. ತಿರಂಗ ಯಾತ್ರೆಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ರಾತ್ರಿ ವೈರಲ್ ಆದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ದಾರ್ಸಲ್ ಹಿಂದೂ ಮಹಾಸಭಾದ ಕಾರ್ಯಾಧ್ಯಕ್ಷ ಯೋಗೇಂದ್ರ ವರ್ಮಾ ನೇತೃತ್ವದಲ್ಲಿ ಸೋಮವಾರ ಸಂಜೆ ತ್ರಿವರ್ಣ ಯಾತ್ರೆಯನ್ನು ನಡೆಸಲಾಗಿದೆ. ರಾಷ್ಟ್ರಧ್ವಜದ ಯಾತ್ರೆಯಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಹಲವು ಕ್ರಾಂತಿಕಾರಿಗಳ ಚಿತ್ರಗಳಿದ್ದರೂ ಅವುಗಳ ಜೊತೆಗೆ ಮಹಾತ್ಮ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯ ಚಿತ್ರವನ್ನೂ ಅಳವಡಿಸಲಾಗಿತ್ತು.

ಹಿಂದೂ ಮಹಾಸಭಾ ಮುಖಂಡ ಯೋಗೇಂದ್ರ ವರ್ಮಾ ಮಾತನಾಡಿ, “ಸ್ವಾತಂತ್ರ್ಯ ದಿನಾಚರಣೆಯಂದು ತಿರಂಗ ಯಾತ್ರೆ ಹಮ್ಮಿಕೊಂಡಿದ್ದು, ರ್‍ಯಾಲಿ ಜಿಲ್ಲೆಯಾದ್ಯಂತ ಸಂಚರಿಸಿದೆ. ಎಲ್ಲಾ ಪ್ರಮುಖ ಹಿಂದೂ ಮುಖಂಡರು ಇದರಲ್ಲಿ ಭಾಗವಹಿಸಿದ್ದರು. ನಾವು ಹಲವಾರು ಕ್ರಾಂತಿಕಾರಿಗಳ ಛಾಯಾಚಿತ್ರಗಳನ್ನು ಹಾಕಿದ್ದೆವು. ಅವರಲ್ಲಿ ಗೋಡ್ಸೆ ಕೂಡ ಒಬ್ಬ” ಎಂದಿದ್ದಾರೆ.

ಗಾಂಧಿ ಅನುಸರಿಸಿದ ನೀತಿಗಳೇ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡುವಂತೆ ಗೋಡ್ಸೆಯನ್ನು ಪ್ರೇರೇಪಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

“ಗೋಡ್ಸೆ ತನ್ನದೇ ಆದ ಪ್ರಕರಣದಲ್ಲಿ ಹೋರಾಡಿದ್ದಾನೆ. ನ್ಯಾಯಾಲಯದಲ್ಲಿ ಆತ ಹೇಳಿದ ಎಲ್ಲವನ್ನೂ ಸರ್ಕಾರವು ಸಾರ್ವಜನಿಕಗೊಳಿಸಬೇಕು. ಗಾಂಧಿಯನ್ನು ಏಕೆ ಹತ್ಯೆ ಮಾಡಲಾಯಿತು ಎಂಬುದನ್ನು ಜನರಿಗೆ ತಿಳಿಸುವುದಕ್ಕೆ ಸರ್ಕಾರಕ್ಕೆ ಇಷ್ಟವಿಲ್ಲ” ಎಂದು ತಿಳಿಸಿದ್ದಾರೆ.

“ಗಾಂಧಿಯವರ ಕೆಲವು ನೀತಿಗಳು ಹಿಂದೂ ವಿರೋಧಿಯಾಗಿದ್ದವು. ವಿಭಜನೆಯ ಸಮಯದಲ್ಲಿ 30 ಲಕ್ಷ ಹಿಂದೂಗಳು ಮತ್ತು ಮುಸ್ಲಿಮರು ಕೊಲ್ಲಲ್ಪಟ್ಟರು. ಇದಕ್ಕೆ ಗಾಂಧಿಯೇ ಕಾರಣ” ಎಂದು ದೂರಿದ್ದಾರೆ.

ಗೋಡ್ಸೆ ಗಾಂಧಿಯನ್ನು ಹತ್ಯೆ ಮಾಡಿದ್ದಕ್ಕೆ ಮರಣದಂಡನೆ ಅನುಭವಿಸಿದ ಎಂದಿರುವ ಯೋಗೇಂದ್ರ ವರ್ಮಾ, “ಗಾಂಧಿ ನಮ್ಮ ಸ್ಫೂರ್ತಿ ಎಂದು ಕೆಲವರು ಭಾವಿಸುವಂತೆಯೇ, ಗೋಡ್ಸೆಯ ಮೇಲೆ ನಮಗೆ ಅಭಿಮಾನವಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಾಂಧಿಯ ಸ್ಥಾನಕ್ಕೆ ಗೋಡ್ಸೆ ಬಂದಿದ್ದಾನೆ, ಈ ದೇಶಕ್ಕೆ ಏನೋ ಕೇಡುಗಾಲ ಕಾದಿದೆ ಎಂದೇ ಅರ್ಥ.

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...