Homeಮುಖಪುಟಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು...

ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ ಅರ್ಜಿ

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆ ನೀಡುವ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ

- Advertisement -
- Advertisement -

ಉಚಿತ ಯೋಜನೆಗಳ ಕುರಿತು ನಡೆಯುತ್ತಿರುವ ಪ್ರಕರಣದ ವಿಚಾರದಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ‘ಉಚಿತ ಕೊಡುಗೆ’ ಎಂಬ ಪದದ ವ್ಯಾಪ್ತಿ ತುಂಬಾ ವಿಸ್ತಾರವಾಗಿದ್ದು, ‘ಇದರ ಬಗ್ಗೆ ಪರಿಗಣಿಸಬೇಕಾದ ಅಂಶಗಳು ಬಹಳ ಇವೆ’ ಎಂದು ವಾದಿಸಿದೆ. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸರ್ಕಾರಗಳ ಉಚಿತ ಕೊಡುಗೆಗಳ ಭರವಸೆಗಳನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ನಡೆಸುತ್ತಿದೆ. ಈ ರೀತಿಯ ಸಂಪ್ರದಾಯವು ರಾಜ್ಯವನ್ನು ಆರ್ಥಿಕವಾಗಿ ನಾಶಪಡಿಸುತ್ತದೆ ಎಂದು ಬಿಜೆಪಿ ಪ್ರತಿಪಾದಿಸಿದೆ. ತಮಿಳುನಾಡು ಸರ್ಕಾರ ಮಾತ್ರವಲ್ಲದೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೂಡಾ ತಾನು ಆಳುವ ರಾಜ್ಯಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸುವ ಭರವಸೆ ನೀಡಿ, ಅಧಿಕಾರಕ್ಕೆ ಬಂದ ಕೂಡಲೇ ಅವುಗಳನ್ನು ಈಡೇರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಚುನಾವಣೆಯ ಸಮಯದಲ್ಲಿ ಸಾಂಪ್ರದಾಯಿಕವಾಗಿ ಎಲ್ಲಾ ಪಕ್ಷಗಳೂ ಉಚಿತ ಯೋಜನೆಗಳ ಭರವಸೆಯನ್ನು ನೀಡುತ್ತದೆ. ಅಲ್ಲದೆ ಚುನಾವಣೆಗೂ ಮುನ್ನ ಕೂಡಾ ಜನರಿಗೆ ಬಟ್ಟೆ, ಆಹಾರ, ಗೃಹೋಪಯೋಗಿ ವಸ್ತುಗಳನ್ನು ವಿತರಿಸಲಾಗಿದ್ದು, ಕೆಲವೊಮ್ಮೆ ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

ಚುನಾವಣೆಯ ನಂತರ, ನಂತರದ ಸರ್ಕಾರಗಳು ಆಹಾರ ಮತ್ತು ಇತರ ವಸ್ತುಗಳ ಮೇಲೆ ಭಾರಿ ಸಬ್ಸಿಡಿಗಳನ್ನು ನೀಡಿವೆ. ಪ್ರತಿಪಕ್ಷ ಎಐಎಡಿಎಂಕೆಯ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ‘ಅಮ್ಮ ಕ್ಯಾಂಟೀನ್’ಗಳಿಗೆ ಹೆಸರುವಾಸಿಯಾಗಿದ್ದರು. ಈ ಕ್ಯಾಂಟೀನ್‌ಗಳಲ್ಲಿ ಕೆಲವೇ ರೂಪಾಯಿಗಳಲ್ಲಿ ಊಟವನ್ನು ಮಾಡಬಹುದಿತ್ತು.

ಪ್ರಕರಣದ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆಯು ರಾಜ್ಯ ಸರ್ಕಾರ ಪರಿಚಯಿಸಿದ ಕಲ್ಯಾಣ ಯೋಜನೆಯನ್ನು ಮಾತ್ರ ಉಚಿತ ಕೊಡುಗೆ ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

“ಕೇಂದ್ರದ ಆಡಳಿತರೂಢ ಪಕ್ಷವೂ ವಿದೇಶಿ ಕಂಪನಿಗಳಿಗೆ ತೆರಿಗೆ ರಜೆ ನೀಡುವುದು, ಪ್ರಭಾವಿ ಕೈಗಾರಿಕೋದ್ಯಮಿಗಳ ಸುಸ್ತಿ ಸಾಲ ಮನ್ನಾ ಮಾಡುವುದು, ತಮಗೆ ಬೇಕಾದ ಕಂಪನಿಗಳಿಗೆ ಬಹುಮುಖ್ಯವಾದ ಗುತ್ತಿಗೆಗಳನ್ನು ನೀಡುವುದು ಇತ್ಯಾದಿಗಳನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಬೇಕು” ಎಂದು ಡಿಎಂಕೆ ಅರ್ಜಿಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ.

ಇದನ್ನೂ ಓದಿ: ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಕಿಡಿ 

“ಸೂಕ್ಷ್ಮ ಮತ್ತು ಸ್ಥೂಲ ಮಟ್ಟದಲ್ಲಿ ಫಲಿತಾಂಶದ ಪರಿಣಾಮಗಳು ಮತ್ತು ಸಾಮಾಜ ಕಲ್ಯಾಣದ ಪ್ರಮಾಣವನ್ನು ಪರಿಗಣಿಸದೆ ಕೇಂದ್ರ ಹಾಗೂ ರಾಜ್ಯ ಶಾಸಕಾಂಗವು ಯಾವುದೇ ಯೋಜನೆ ಅಥವಾ ಕಾರ್ಯವನ್ನು ‘ಉಚಿತ ಕೊಡುಗೆ’ ಎಂದು ವರ್ಗೀಕರಿಸಲು ಗೌರವಾನ್ವಿತ ನ್ಯಾಯಾಲಯಕ್ಕೆ ಯಾವುದೇ ನಿರ್ಬಂಧಿತ ವಿಧಾನವನ್ನು ಹೊಂದಲು ಸಾಧ್ಯವಿಲ್ಲ” ಎಂದು ಡಿಎಂಕೆ ವಾದಿಸಿದೆ.

ಕಲ್ಯಾಣ ಯೋಜನೆಗಳನ್ನು ಸಂವಿಧಾನದ 38 ನೇ ವಿಧಿಯ ಅಡಿಯಲ್ಲಿ ಸಾಮಾಜಿಕ ಸುವ್ಯವಸ್ಥೆ ಮತ್ತು ಆರ್ಥಿಕ ನ್ಯಾಯವನ್ನು ಭದ್ರಪಡಿಸುವ ಉದ್ದೇಶದಿಂದ ‘ಆದಾಯ, ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು’ ಉಚಿತ ಸೇವೆಯನ್ನು ಪರಿಚಯಿಸಲಾಗಿದೆ ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಯಾವುದೇ ಕಾರಣಕ್ಕೂ ಇದನ್ನು ‘ಉಚಿತ ಕೊಡುಗೆ’ ಎಂದು ಅರ್ಥೈಸಲು ಸಾಧ್ಯವಿಲ್ಲ” ಎಂದು ಡಿಎಂಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಈ ಹಿಂದೆ ನಡೆದ ವಿಚಾರಣೆಯೊಂದರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು, ಉಚಿತ ಕೊಡುಗೆಗಳನ್ನು ಒದಗಿಸುವುದು ಗಂಭೀರ ಆರ್ಥಿಕ ಸಮಸ್ಯೆಯಾಗಿದ್ದು, ಚುನಾವಣಾ ಸಮಯದಲ್ಲಿ ಘೋಷಿಸಿದುವ “ಉಚಿತ ಬಜೆಟ್” ಸಾಮಾನ್ಯ ಬಜೆಟ್‌ಗಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ  

ಈ ವಿಚಾರದಲ್ಲಿ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ಸೂಚಿಸಿತ್ತು. ಆದರೆ ಯಾವುದೇ ಕಾನೂನುಗಳು ಇಲ್ಲದೆ ಇರುವುದರಿಂದ ಅಧಿಕಾರಕ್ಕೆ ಬಂದರೆ ಉಚಿತ ಕೊಡುಗೆಗಳನ್ನು ನೀಡುವ ರಾಜಕೀಯ ಪಕ್ಷಗಳ ಭರವಸೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಪ್ರತಿಕ್ರಿಯಿಸಿತ್ತ೮.

ಅರವಿಂದ್ ಕೇಜ್ರಿವಾಲ್ ಅವರ ಎಎಪಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಡಿಎಂಕೆಯಂತೆಯೇ ವಾದ ಮಂಡಿಸಿದೆ. ಅರ್ಹ ಮತ್ತು ಹಿಂದುಳಿದ ಜನಸಾಮಾನ್ಯರ ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಯೋಜನೆಗಳನ್ನು “ಉಚಿತ ಕೊಡುಗೆ” ಎಂದು ವಿವರಿಸಲು ಸಾಧ್ಯವಿಲ್ಲ ಎಂದು ಎಎಪಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು ಕಾನೂನು ವಿಧಾನಗಳ ಮೂಲಕ ರಾಜಕೀಯ ಕಾರ್ಯಸೂಚಿಯನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....