Homeಮುಖಪುಟಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು...

ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ ಅರ್ಜಿ

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆ ನೀಡುವ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ

- Advertisement -
- Advertisement -

ಉಚಿತ ಯೋಜನೆಗಳ ಕುರಿತು ನಡೆಯುತ್ತಿರುವ ಪ್ರಕರಣದ ವಿಚಾರದಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ‘ಉಚಿತ ಕೊಡುಗೆ’ ಎಂಬ ಪದದ ವ್ಯಾಪ್ತಿ ತುಂಬಾ ವಿಸ್ತಾರವಾಗಿದ್ದು, ‘ಇದರ ಬಗ್ಗೆ ಪರಿಗಣಿಸಬೇಕಾದ ಅಂಶಗಳು ಬಹಳ ಇವೆ’ ಎಂದು ವಾದಿಸಿದೆ. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸರ್ಕಾರಗಳ ಉಚಿತ ಕೊಡುಗೆಗಳ ಭರವಸೆಗಳನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಭರವಸೆಯನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ನಡೆಸುತ್ತಿದೆ. ಈ ರೀತಿಯ ಸಂಪ್ರದಾಯವು ರಾಜ್ಯವನ್ನು ಆರ್ಥಿಕವಾಗಿ ನಾಶಪಡಿಸುತ್ತದೆ ಎಂದು ಬಿಜೆಪಿ ಪ್ರತಿಪಾದಿಸಿದೆ. ತಮಿಳುನಾಡು ಸರ್ಕಾರ ಮಾತ್ರವಲ್ಲದೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೂಡಾ ತಾನು ಆಳುವ ರಾಜ್ಯಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸುವ ಭರವಸೆ ನೀಡಿ, ಅಧಿಕಾರಕ್ಕೆ ಬಂದ ಕೂಡಲೇ ಅವುಗಳನ್ನು ಈಡೇರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಚುನಾವಣೆಯ ಸಮಯದಲ್ಲಿ ಸಾಂಪ್ರದಾಯಿಕವಾಗಿ ಎಲ್ಲಾ ಪಕ್ಷಗಳೂ ಉಚಿತ ಯೋಜನೆಗಳ ಭರವಸೆಯನ್ನು ನೀಡುತ್ತದೆ. ಅಲ್ಲದೆ ಚುನಾವಣೆಗೂ ಮುನ್ನ ಕೂಡಾ ಜನರಿಗೆ ಬಟ್ಟೆ, ಆಹಾರ, ಗೃಹೋಪಯೋಗಿ ವಸ್ತುಗಳನ್ನು ವಿತರಿಸಲಾಗಿದ್ದು, ಕೆಲವೊಮ್ಮೆ ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

ಚುನಾವಣೆಯ ನಂತರ, ನಂತರದ ಸರ್ಕಾರಗಳು ಆಹಾರ ಮತ್ತು ಇತರ ವಸ್ತುಗಳ ಮೇಲೆ ಭಾರಿ ಸಬ್ಸಿಡಿಗಳನ್ನು ನೀಡಿವೆ. ಪ್ರತಿಪಕ್ಷ ಎಐಎಡಿಎಂಕೆಯ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ‘ಅಮ್ಮ ಕ್ಯಾಂಟೀನ್’ಗಳಿಗೆ ಹೆಸರುವಾಸಿಯಾಗಿದ್ದರು. ಈ ಕ್ಯಾಂಟೀನ್‌ಗಳಲ್ಲಿ ಕೆಲವೇ ರೂಪಾಯಿಗಳಲ್ಲಿ ಊಟವನ್ನು ಮಾಡಬಹುದಿತ್ತು.

ಪ್ರಕರಣದ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆಯು ರಾಜ್ಯ ಸರ್ಕಾರ ಪರಿಚಯಿಸಿದ ಕಲ್ಯಾಣ ಯೋಜನೆಯನ್ನು ಮಾತ್ರ ಉಚಿತ ಕೊಡುಗೆ ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

“ಕೇಂದ್ರದ ಆಡಳಿತರೂಢ ಪಕ್ಷವೂ ವಿದೇಶಿ ಕಂಪನಿಗಳಿಗೆ ತೆರಿಗೆ ರಜೆ ನೀಡುವುದು, ಪ್ರಭಾವಿ ಕೈಗಾರಿಕೋದ್ಯಮಿಗಳ ಸುಸ್ತಿ ಸಾಲ ಮನ್ನಾ ಮಾಡುವುದು, ತಮಗೆ ಬೇಕಾದ ಕಂಪನಿಗಳಿಗೆ ಬಹುಮುಖ್ಯವಾದ ಗುತ್ತಿಗೆಗಳನ್ನು ನೀಡುವುದು ಇತ್ಯಾದಿಗಳನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಬೇಕು” ಎಂದು ಡಿಎಂಕೆ ಅರ್ಜಿಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ.

ಇದನ್ನೂ ಓದಿ: ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಕಿಡಿ 

“ಸೂಕ್ಷ್ಮ ಮತ್ತು ಸ್ಥೂಲ ಮಟ್ಟದಲ್ಲಿ ಫಲಿತಾಂಶದ ಪರಿಣಾಮಗಳು ಮತ್ತು ಸಾಮಾಜ ಕಲ್ಯಾಣದ ಪ್ರಮಾಣವನ್ನು ಪರಿಗಣಿಸದೆ ಕೇಂದ್ರ ಹಾಗೂ ರಾಜ್ಯ ಶಾಸಕಾಂಗವು ಯಾವುದೇ ಯೋಜನೆ ಅಥವಾ ಕಾರ್ಯವನ್ನು ‘ಉಚಿತ ಕೊಡುಗೆ’ ಎಂದು ವರ್ಗೀಕರಿಸಲು ಗೌರವಾನ್ವಿತ ನ್ಯಾಯಾಲಯಕ್ಕೆ ಯಾವುದೇ ನಿರ್ಬಂಧಿತ ವಿಧಾನವನ್ನು ಹೊಂದಲು ಸಾಧ್ಯವಿಲ್ಲ” ಎಂದು ಡಿಎಂಕೆ ವಾದಿಸಿದೆ.

ಕಲ್ಯಾಣ ಯೋಜನೆಗಳನ್ನು ಸಂವಿಧಾನದ 38 ನೇ ವಿಧಿಯ ಅಡಿಯಲ್ಲಿ ಸಾಮಾಜಿಕ ಸುವ್ಯವಸ್ಥೆ ಮತ್ತು ಆರ್ಥಿಕ ನ್ಯಾಯವನ್ನು ಭದ್ರಪಡಿಸುವ ಉದ್ದೇಶದಿಂದ ‘ಆದಾಯ, ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು’ ಉಚಿತ ಸೇವೆಯನ್ನು ಪರಿಚಯಿಸಲಾಗಿದೆ ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಯಾವುದೇ ಕಾರಣಕ್ಕೂ ಇದನ್ನು ‘ಉಚಿತ ಕೊಡುಗೆ’ ಎಂದು ಅರ್ಥೈಸಲು ಸಾಧ್ಯವಿಲ್ಲ” ಎಂದು ಡಿಎಂಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಈ ಹಿಂದೆ ನಡೆದ ವಿಚಾರಣೆಯೊಂದರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು, ಉಚಿತ ಕೊಡುಗೆಗಳನ್ನು ಒದಗಿಸುವುದು ಗಂಭೀರ ಆರ್ಥಿಕ ಸಮಸ್ಯೆಯಾಗಿದ್ದು, ಚುನಾವಣಾ ಸಮಯದಲ್ಲಿ ಘೋಷಿಸಿದುವ “ಉಚಿತ ಬಜೆಟ್” ಸಾಮಾನ್ಯ ಬಜೆಟ್‌ಗಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಉಚಿತ ಬಸ್‌ ಪಾಸ್‌ – ದಿಲ್ಲಿ ಮಹಿಳೆಯರು ದಿಲ್‌ ಖುಷ್‌.. : ಮುಂದಿನ ಕೊಡುಗೆ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ  

ಈ ವಿಚಾರದಲ್ಲಿ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ಸೂಚಿಸಿತ್ತು. ಆದರೆ ಯಾವುದೇ ಕಾನೂನುಗಳು ಇಲ್ಲದೆ ಇರುವುದರಿಂದ ಅಧಿಕಾರಕ್ಕೆ ಬಂದರೆ ಉಚಿತ ಕೊಡುಗೆಗಳನ್ನು ನೀಡುವ ರಾಜಕೀಯ ಪಕ್ಷಗಳ ಭರವಸೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಪ್ರತಿಕ್ರಿಯಿಸಿತ್ತ೮.

ಅರವಿಂದ್ ಕೇಜ್ರಿವಾಲ್ ಅವರ ಎಎಪಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಡಿಎಂಕೆಯಂತೆಯೇ ವಾದ ಮಂಡಿಸಿದೆ. ಅರ್ಹ ಮತ್ತು ಹಿಂದುಳಿದ ಜನಸಾಮಾನ್ಯರ ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಯೋಜನೆಗಳನ್ನು “ಉಚಿತ ಕೊಡುಗೆ” ಎಂದು ವಿವರಿಸಲು ಸಾಧ್ಯವಿಲ್ಲ ಎಂದು ಎಎಪಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು ಕಾನೂನು ವಿಧಾನಗಳ ಮೂಲಕ ರಾಜಕೀಯ ಕಾರ್ಯಸೂಚಿಯನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...