Homeದಲಿತ್ ಫೈಲ್ಸ್ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

- Advertisement -
- Advertisement -

9 ವರ್ಷದ ದಲಿತ ಬಾಲಕ ಸವರ್ಣೀಯರಿಗೆ ಮೀಸಲಾಗಿದ್ದ ಪಾತ್ರೆ ಮುಟ್ಟಿದನೆಂದು ಜಾತಿವಾದಿ ಶಿಕ್ಷಕ ಹೊಡೆದು ಕೊಂದ ಬಳಿಕ ರಾಜಸ್ಥಾನದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಬಿಕ್ಕಟ್ಟು ಎದುರಾಗಿದೆ.

ಪ್ರತಿಪಕ್ಷ ಬಿಜೆಪಿಯ ನಿರಂತರ ದಾಳಿಯ ಜೊತೆಗೆ, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ತನ್ನ ಪಕ್ಷದ ನಾಯಕರಿಂದಲೇ ವಿರೋಧ ಎದುರಿಸುವಂತಾಗಿದೆ.

ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪಣಚಂದ್ ಮೇಘವಾಲ್ ಅವರು ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಿದ್ದಾರೆ. “9 ವರ್ಷದ ವಿದ್ಯಾರ್ಥಿಯ ಸಾವಿನಿಂದ ನನಗೆ ತೀವ್ರ ನೋವಾಗಿದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಘಟಿಸುತ್ತಿರುವ ಜಾತಿ ಸಂಬಂಧಿತ ಅಪರಾಧಗಳ ಕುರಿತು ಬೇಸರ ವ್ಯಕ್ತಪಡಿಸಿರುವ ಪಣಚಂದ್‌ ಮೇಘವಾಲ್‌, ಪೊಲೀಸರು ಸಾಕಷ್ಟು ತ್ವರಿತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷಗಳ ಹಿಂದೆ ಗೆಹ್ಲೋಟ್ ಅವರ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಕೊಲೆಯಾದ ಮಗುವಿನ ಕುಟುಂಬವನ್ನು ಭೇಟಿ ಮಾಡಲು ಜಲೋರ್ ಜಿಲ್ಲೆಗೆ ತೆರಳುತ್ತಿದ್ದರು.

“ನಾವು ಜಲೋರ್‌ನಂತಹ ಘಟನೆಗಳನ್ನು ಕೊನೆಗೊಳಿಸಬೇಕಾಗಿದೆ. ದಲಿತ ಸಮುದಾಯದೊಂದಿಗೆ ನಾವು ಸದಾ ನಿಲ್ಲುತ್ತೇವೆ ಎಂಬ ಭರವಸೆ ನೀಡಬೇಕು” ಎಂದು ಪೈಲಟ್ ಹೇಳಿದ್ದಾರೆ.

“ಸರಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದು, ಮುಂದೆಯೂ ಕ್ರಮ ಕೈಗೊಳ್ಳಲಿದೆ. ಈ ರೀತಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಪೈಲಟ್‌ಗೆ ರಾಜಕೀಯ ಲಾಭ ಪಡೆಯಲು ಅವಕಾಶ ನೀಡದಿರಲು ಯೋಚಿಸಿದ ಮುಖ್ಯಮಂತ್ರಿ ಗೆಹ್ಲೋಟ್‌ ಅವರು ಇದೀಗ ಹಿರಿಯ ಕ್ಯಾಬಿನೆಟ್ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆದ ಗೋವಿಂದ್ ಸಿಂಗ್ ದೋತಸ್ರಾ ಅವರನ್ನು ಜಲೋರ್‌ಗೆ ಕಳುಹಿಸಿದ್ದಾರೆ.

ಜುಲೈ 20ರಂದು ಶಿಕ್ಷಕ ಹಲ್ಲೆ ನಡೆಸಿದ್ದನು. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು.

ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದರು.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದರು.

ಇದನ್ನೂ ಓದಿರಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿ, “ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದರು.

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...