Homeದಲಿತ್ ಫೈಲ್ಸ್ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

- Advertisement -
- Advertisement -

9 ವರ್ಷದ ದಲಿತ ಬಾಲಕ ಸವರ್ಣೀಯರಿಗೆ ಮೀಸಲಾಗಿದ್ದ ಪಾತ್ರೆ ಮುಟ್ಟಿದನೆಂದು ಜಾತಿವಾದಿ ಶಿಕ್ಷಕ ಹೊಡೆದು ಕೊಂದ ಬಳಿಕ ರಾಜಸ್ಥಾನದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಬಿಕ್ಕಟ್ಟು ಎದುರಾಗಿದೆ.

ಪ್ರತಿಪಕ್ಷ ಬಿಜೆಪಿಯ ನಿರಂತರ ದಾಳಿಯ ಜೊತೆಗೆ, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ತನ್ನ ಪಕ್ಷದ ನಾಯಕರಿಂದಲೇ ವಿರೋಧ ಎದುರಿಸುವಂತಾಗಿದೆ.

ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪಣಚಂದ್ ಮೇಘವಾಲ್ ಅವರು ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಿದ್ದಾರೆ. “9 ವರ್ಷದ ವಿದ್ಯಾರ್ಥಿಯ ಸಾವಿನಿಂದ ನನಗೆ ತೀವ್ರ ನೋವಾಗಿದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಘಟಿಸುತ್ತಿರುವ ಜಾತಿ ಸಂಬಂಧಿತ ಅಪರಾಧಗಳ ಕುರಿತು ಬೇಸರ ವ್ಯಕ್ತಪಡಿಸಿರುವ ಪಣಚಂದ್‌ ಮೇಘವಾಲ್‌, ಪೊಲೀಸರು ಸಾಕಷ್ಟು ತ್ವರಿತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷಗಳ ಹಿಂದೆ ಗೆಹ್ಲೋಟ್ ಅವರ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಕೊಲೆಯಾದ ಮಗುವಿನ ಕುಟುಂಬವನ್ನು ಭೇಟಿ ಮಾಡಲು ಜಲೋರ್ ಜಿಲ್ಲೆಗೆ ತೆರಳುತ್ತಿದ್ದರು.

“ನಾವು ಜಲೋರ್‌ನಂತಹ ಘಟನೆಗಳನ್ನು ಕೊನೆಗೊಳಿಸಬೇಕಾಗಿದೆ. ದಲಿತ ಸಮುದಾಯದೊಂದಿಗೆ ನಾವು ಸದಾ ನಿಲ್ಲುತ್ತೇವೆ ಎಂಬ ಭರವಸೆ ನೀಡಬೇಕು” ಎಂದು ಪೈಲಟ್ ಹೇಳಿದ್ದಾರೆ.

“ಸರಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದು, ಮುಂದೆಯೂ ಕ್ರಮ ಕೈಗೊಳ್ಳಲಿದೆ. ಈ ರೀತಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಪೈಲಟ್‌ಗೆ ರಾಜಕೀಯ ಲಾಭ ಪಡೆಯಲು ಅವಕಾಶ ನೀಡದಿರಲು ಯೋಚಿಸಿದ ಮುಖ್ಯಮಂತ್ರಿ ಗೆಹ್ಲೋಟ್‌ ಅವರು ಇದೀಗ ಹಿರಿಯ ಕ್ಯಾಬಿನೆಟ್ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆದ ಗೋವಿಂದ್ ಸಿಂಗ್ ದೋತಸ್ರಾ ಅವರನ್ನು ಜಲೋರ್‌ಗೆ ಕಳುಹಿಸಿದ್ದಾರೆ.

ಜುಲೈ 20ರಂದು ಶಿಕ್ಷಕ ಹಲ್ಲೆ ನಡೆಸಿದ್ದನು. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು.

ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದರು.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದರು.

ಇದನ್ನೂ ಓದಿರಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿ, “ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದರು.

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...