Homeಅಂಕಣಗಳುಮುರುಘಾ ಶರಣರ ಮರುಳು ಮಾತು ನಿಜವೆ?

ಮುರುಘಾ ಶರಣರ ಮರುಳು ಮಾತು ನಿಜವೆ?

- Advertisement -
- Advertisement -

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಹರಿದು ಬಂದ ಜನಸಾಗರ ನೋಡಿದ ಬಿಜೆಪಿಗಳು ಅದಕ್ಕೆ ಪ್ರತಿಯಾಗಿ ತಾವೂ ಸಾಗರೋಪಾದಿಯಲ್ಲಿ ಜನರನ್ನು ಸೇರಿಸುವ ಬಗ್ಗೆ ಗಾಢ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರಂತಲ್ಲಾ. ಸ್ವತಃ ಎಡೂರಪ್ಪನವರೇ ಇಡೀ ದಿನ ಟಿ.ವಿ. ಮುಂದೆ ಕುಳಿತು ಸಿದ್ದರಾಮೋತ್ಸವ ನೋಡಿ, ಏನೂ ಹೇಳಲಾಗದ ಏನೂ ಮಾಡಲಾಗದ ಅಸಹಾಯಕತೆ ಚಡಪಡಿಕೆ ಪ್ರದರ್ಶಿಸಿದರು. ಕಾರಣ ಅವರೀಗ ಮುಖ್ಯಮಂತ್ರಿಯಲ್ಲಿ. ವಿರೋಧಪಕ್ಷದ ನಾಯಕರೂ ಅಲ್ಲ. ತಮ್ಮ ಅಧಿಕಾರಾವಧಿಯ ಮಧ್ಯದಲ್ಲೇ ಅವರನ್ನು ಕೆಳಗಿಳಿಸಲಾಯ್ತು. ಇಳಿಯುವಾಗಲಾದರೂ ಇಂತಹದೊಂದು ಎಡೂರು ಜಾತ್ರೆ ಮಾಡಿಬಿಡಬಹುದಿತ್ತು. ಆ ಜಾತ್ರೆಗೆ ಸರಕಾರದಿಂದ ಭಿಕ್ಷೆ ಪಡೆದ ಹಲವು ಜಗತ್ತಿನ ಜಗದ್ಗುರುಗಳ ಪರಿಷೆಯೇ ನೆರೆಯುತ್ತಿತ್ತು. ಸಹಜವಾಗಿ ಆ ಮಠಗಳ ಭಕ್ತಾದಿಗಳು, ಸರಕಾರಿ ಮತ್ತು ಖಾಸಗಿಯವರ ಸುವಿಹಾರಿ ಬಸ್ಸಿನಲ್ಲಿ ಬಂದಿಳಿಯುತ್ತಿದ್ದರು. ಅವರಿಗೆಲ್ಲಾ ಹೋಳಿಗೆ ಶೀಖರಣೆ ಊಟ ಹಾಕಿಕಳಿಸಬಹುದಿತ್ತು. ಪೀಠ ಹಿಡಿದು ಕುಳಿತಿರುವ ಸಿರಿವಂತ ಸ್ವಾಮಿಗಳು, ತಮ್ಮ ಎಂದಿನ ನಿಷ್ಠುರ ಮಾತುಗಳನ್ನು ಝಳಪಿಸಿ ಎಡೂರಪ್ಪನವರು ಎಂದಿಗೂ ಸ್ಥಾನ ಬಿಟ್ಟುಕೊಡಬಾರದು, ನನ್ನನ್ನಾದರೂ ನೋಡಿ ಅವರು ಧೈರ್ಯ ತುಂಬಿಕೊಳ್ಳಬೇಕೆಂದು ಅಪ್ಪಣೆ ಕೊಡಿಸಿದರೆ, ಇನ್ನ ಮುರುಘಾ ಮಠದವರು ಎಡೂರಪ್ಪನವರು ಎದೆಗುಂದಬಾರದು, ಸುತ್ತ ಮುತ್ತ ಶತ್ರುಗಳಿರುವಾಗ ಧೈರ್ಯದಿಂದ ರಾಜ್ಯವನ್ನಾಳಬೇಕು ಎಂದು ಹೇಳೇ ಹೇಳುತ್ತಿದ್ದರಂತಲ್ಲಾ, ಥೂತ್ತೆರಿ.

****

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಬಂದಿದ್ದ ರಾಹುಲಗಾಂಧಿಯನ್ನು ಒಂದರ್ಥದಲ್ಲಿ ಹೈಜಾಕ್ ಮಾಡಿದ ಡಿ.ಕೆ. ಶಿವಕುಮಾರ್ ತಾವು ಮುಂದೆ ಮುಖ್ಯಮಂತ್ರಿಯಾಗಲು ಶರಣ ಸಮೂಹದ ಓಟು ಬೇಕಾದ್ದರಿಂದ, ತಂತ್ರಗಾರಿಕೆ ನಡೆಸಿ, ಅದರಂತೆ ಮುರುಘಾ ಶರಣರಿಂದ ರಾಹುಲಗಾಂಧಿಗೆ ಲಿಂಗದೀಕ್ಷೆ ಕೊಡಿಸೇಬಿಟ್ಟರಂತಲ್ಲಾ. ಮುಖ್ಯವಾಗಿ ದಯವೇ ಧರ್ಮದ ಮೂಲವೆಂದು ಒಪ್ಪಿದವರೆಲ್ಲಾ ಬಸವಣ್ಣನ ಅನುಯಾಯಿಗಳಾಗುತ್ತಾರೆ. ಅವರಿಗೆ ಲಿಂಗದೀಕ್ಷೆಯ ಅಗತ್ಯವೇ ಇರುವುದಿಲ್ಲ. ಇಂತಹ ಸೂಕ್ಷ್ಮ ವಿಚಾರ ಮುರುಘಾ ಶರಣರಿಗೆ ಹೊಳೆಯಬೇಕಿತ್ತು. ನಮ್ಮ ಮುರುಘಾ ಶರಣರು ಬೆಂಬಲಿಸಿದ ಎಡೂರಪ್ಪ ಶರಣ. ಬಸವ ತತ್ವಪ್ರತಿಪಾದಕರಾಗಬೇಕಿತ್ತು. ಆದರೇ ಮಾಡಿದ್ದೆಲ್ಲಾ ಪುರೋಹಿತ ಶಾಹಿಗಳು ಹೇಳಿದ ಕೆಲಸವನ್ನು. ಅವರ ನಂತರ ಮುಖ್ಯಮಂತ್ರಿಯಾದ ಸಾದಲಿಂಗಾಯಿತರ ಬಸವರಾಜ ಬೊಮ್ಮಾಯಿ ಮತ್ತೊಬ್ಬ ಶರಣ. ಲಿಂಗಕಟ್ಟಿಗೊಂಡು ಇವರು ಮಾಡಿದ ಆಡಳಿತವೆಲ್ಲಾ ಕೇಶವಕೃಪಾದ ಆಜ್ಞೆಯ ಪರಿಪಾಲನೆ; ಹಿಜಾಬು, ನಮಾಜು, ಮುಸ್ಲಿಂ ವ್ಯಾಪಾರಿಗಳ ನಿರ್ಬಂಧ ಇತ್ಯಾದಿ ಕೇಶವ ಕೃಪದ ಮನೆಹಾಳು ಕೃತ್ಯಗಳ ಜಾರಿ ಮತ್ತು ಸಮರ್ಥನೆ; ಇದ ಒಬ್ಬ ಲಿಂಗದೀಕ್ಷೆಯ ಶರಣನ ಆಡಳಿತದಲ್ಲಿ ಜರುಗಿದ ದುಸ್ವಪ್ನ. ಸಿದ್ದರಾಮಯ್ಯ ಹುಟ್ಟಿನಿಂದ ಶರಣನಲ್ಲ. ಆದರೆ ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡಿದ್ದು ಬಸವ ಜಯಂತಿಯಂದು. ನಂತರ ಮಾಡಿದ್ದು ಶರಣರ ದಾಸೋಹ ಕಲ್ಪನೆಯ ಅನನಭಾಗ್ಯ ಮುಂತಾದ ಕೆಲಸ. ಹಾಗೆ ನೋಡಿದರೆ, ಲಿಂಗದೀಕ್ಷೆಗೂ ಶರಣ ತತ್ವ ಪ್ರತಿಪಾದನೆಗೂ ತಾಳಮೇಳವೇ ಇಲ್ಲವೆಂಬುದು ಮುರುಘಾ ಶರಣರಿಗೆ ಹೊಳೆಯಬೇಕಿತ್ತಂತಲ್ಲಾ, ಥೂತ್ತೆರಿ.

*****

ಚಿತ್ರದುರ್ಗದ ಮಠಕ್ಕೆ ಬಂದ ರಾಹುಲಗಾಂಧಿಯನ್ನ ಹಿಡಿದುಕೊಂಡ ಮುರುಘಾ ಶರಣರು, ಮೋದಿ ಒಬ್ಬ ಸಮರ್ಥನಾಯಕ, ಸದ್ಯ ನಮ್ಮ ಸುತ್ತಲೂ ಶತ್ರು ರಾಷ್ಟ್ರಗಳಿದ್ದು, ಅವುಗಳಿಂದ ದೇಶವನ್ನ ರಕ್ಷಿಸಬೇಕಾದರೆ ಮೋದಿಯಂತಹ ಸಮರ್ಥ ನಾಯಕ ಬೇಕೆಂದು ರಾಹುಲಗಾಂಧಿಗೇ ಹೇಳಿದರಂತಲ್ಲಾ. ಆಗ ಮುಗ್ದ ಬಾಲಕನಂತೆ ಮುರುಘಾ ಶರಣರ ಮುಖ ನೋಡಿದ ರಾಹುಲಗಾಂಧಿ, ಶರಣರ ಜ್ಞಾನಕ್ಕೆ ಮರುಕ ಪಟ್ಟಿರಬಹುದಲ್ಲವೆ. ಮುಖ್ಯವಾಗಿ ಕಾಮನ್ ಸೆನ್ಸ್ ಏಂಬುದೊಂದು ಮನಸ್ಥಿತಿ ಇದ್ದಿದ್ದರೆ, ಮೋದಿಯ ಸಮರ್ಥ ನಾಯಕತ್ವದ ಅರಿವಾಗಬೇಕಿತ್ತು. ಚೀನಾ ಅತಿಕ್ರಮಿಸಿರುವ ವಿಷಯವನ್ನು ದೇಶದ ಮುಂದೆ ಅವರು ಈವರೆಗೂ ಹೇಳಿಲ್ಲ. ಕೃಷಿ ಕಾಯ್ದೆ ಜಾರಿಮಾಡಿದ್ದಕ್ಕಾಗಿ ಒಂದು ವರ್ಷ ನಡೆದ ರೈತರ ಧರಣಿಯಲ್ಲಿ ಏಳುನೂರ ರೈತರು ಹತರಾದರು. ಆ ಬಗ್ಗೆ ಮೋದಿ ಈವರೆಗೂ ಪ್ರತಿಕ್ರಿಯಿಸಿಲ್ಲ. ಹೀಗಿರುವಾಗ, ಮೋದಿ ಒಬ್ಬ ಸಮರ್ಥ ಪ್ರಧಾನಿ ಎಂಬ ಅಭಿಪ್ರಾಯವನ್ನು ಹೊಂದಿರುವ ಮುರುಘಾ ಶರಣರು ಚಿತ್ರದುರ್ಗದಾಚೆಗೆ ದೇಶದ ಆಗುಹೋಗುಗಳನ್ನು ಕಣ್ಣುತೆರೆದು ನೋಡಿದರೆ ನಿಜದ ಅರಿವಾಗಬಹುದು ಎಂಬ ಅಭಿಪ್ರಾಯ ರಾಹುಲಗಾಂಧಿಗೆ ಹೊಳೆದಿರಬಹುದಂತಲ್ಲಾ, ಥೂತ್ತೆರಿ.

****

ಇನ್ನ ನಮ್ಮೂರ ಕೆರೆ ಕೋಡಿಯಲ್ಲಿ ಕುಳಿತಿರುವ ಕಾಲಜ್ಞಾನಿ ಸ್ವಾಮೀಜಿಗಳು ಎಂದಿನಂತೆ ಮತ್ತೆ ಜನಗಳನ್ನು ಹೆದರಿಸಿದ್ದಾರೆ. ದುರ್ದೈವವೆಂದರೆ ಅವರ ಮಾತುಗಳಿಗೆ ಯಾರೂ ಹೆದರಿದಂತೆ ಕಾಣದೇ ಇರುವುದರಿಂದ ಮತ್ತೆ ಗುಡಾಗಿದ್ದಾರಂತಲ್ಲಾ. ಆ ಗುಡುಗಿನ ಶಬ್ದ ಯಾವುದೆಂದರೆ ಕರ್ನಾಟಕ ಅತಿವೃಷ್ಠಿಯಿಂದ ಕಂಗೆಟ್ಟು ಹೋಗಲಿದೆ, ದಟ್ಟೈಸಿದ ಮೋಡದಿಂದ ಧಾರಾಕಾರ ಮಳೆಯಾಗುತ್ತದೆ. ಈ ಮಳೆ ದೆಸೆಯಿಂದ ಕೆರೆಕಟ್ಟಿ ತುಂಬಿ ಹರಿಯುತ್ತವೆ. ಆದಕಾರಣ ಕೆರೆಗೆ ಬಿಟ್ಟು ಸಾಕುತ್ತಿರುವ ಮೀನುಗಳು ಕೊಚ್ಚಿಕೊಂಡು ಹೋಗಿ ಕಂಡವರ ಪಾಲಾಗುತ್ತವೆ. ಕೆರೆ ಏರಿ ಹೊಡೆಯುತ್ತದೆ. ಮನೆಗಳ ಗೋಡೆ ಕುಸಿಯುತ್ತದೆ. ಗೋಡೆ ಕೆಳಗೆ ಸಿಕ್ಕವರು ಸತ್ತುಹೋಗುತ್ತಾರೆ. ಜಾನುವಾರುಗಳು ನೀರಲ್ಲಿ ತೇಲುತ್ತ ಹೋಗುತ್ತವೆ. ರಸ್ತೆಯ ಬದಿಯ ಮರಗಳು ರಸ್ತೆಗೇ ಉರುಳುತ್ತವೆ. ಸಂಚಾರಕ್ಕೆ ಅಡ್ಡಿಯಾಗುತ್ತದೆ. ದೇವಸ್ಥಾನ ಮಠಗಳಿಗೆ ಹೋಗುವ ಜನಗಳಿಗೆ ಅನಾನುಕೂಲವಾಗಿ ಪೂಜೆಪುನಸ್ಕಾರಗಳು ನಿಂತುಹೋಗುತ್ತವೆ. ಮಳೆಯಿಂದ ಬೆಳೆಗೆ ಹಾನಿಯಾಗುತ್ತದೆ. ಬೆಳೆಹಾನಿಯಿಂದ ಮಳೆ ಹೆಚ್ಚಾಗುತ್ತದೆ. ದಿನಕ್ಕೊಂದು ಕೊಲೆಯಾಗುತ್ತದೆ. ಕಳ್ಳತನ ಜಾಸ್ತಿಯಾಗುತ್ತದೆ. ಸರಕಾರದ ತನಿಖೆ ನಾಟಕವಾಗುತ್ತದೆ. ರಾಜ್ಯ ಆಳುವ ನಾಯಕನಿಗೆ ಅಪಾಯವಿದೆ. ಅವರಿಗೆ ಅನಾರೋಗ್ಯವುಂಟಾಗಿ ಮಾನಸಿಕ ನೆಮ್ಮದಿ ಕಳೆದುಕೊಂಡು ಏನೇನೂ ಮಾತನಾಡುತ್ತಾರೆ, ಇದಕ್ಕೆ ಪರಿಹಾರವಿದೆ. ಈ ಆಷಾಢ ಮಾಸ ಮುಗಿದ ನಂತರ ಮಠಕ್ಕೆ ಒಂದುನೂರು ದೀಪ ಹಚ್ಚಿ ದಾಸೋಹನಡೆಸಿ ಗುರುವರ್ಯರ ಪಾದ ಹಿಡಿದರೆ ಎಲ್ಲವೂ ಸಾಂಗವಾಗಿ, ಅವರು ನಿರಾತಂಕವಾಗಿ ರಾಜ್ಯದಾಳಬಹುದೆಂಬ ಸಂದೇಶ ಹೊgಟಿದೆಯಂತಲ್ಲಾ, ಥೂಥೂ ಥೂತ್ತೆರಿ.


ಇದನ್ನೂ ಓದಿ: ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...