Homeಮುಖಪುಟಹಿಂಗಿದ್ದ ನಮ್ಮ ರಾಮಣ್ಣ: ಭಾಗ-3; ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ?

ಹಿಂಗಿದ್ದ ನಮ್ಮ ರಾಮಣ್ಣ: ಭಾಗ-3; ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ?

- Advertisement -
- Advertisement -

ಆಗಿನ ಊರಬ್ಬಗಳು ಚನ್ನಾಗಿದ್ದೊ. ಹಬ್ಬ ಅಂದ ಕೂಡ್ಲೆ ಊರಿಗೆ ಓಡಿ ಬತ್ತಿದ್ದೊ. ಹಬ್ಬಕೆ ಅಂತ ಬಂದ ನಂಟ್ರನ್ಯಲ್ಲ ಮಾತಾಡಿಸಿ ಮೈಸೂರಲ್ಲಿ ಡಾಗುಟ್ರಾಗ್ತಾ ಅವುನೆ ಅಂತ ಅವುರಿವುರಿಂದ ಹೊಗಳಿಸಿಕಂಡು ಬರದು ಅಂದ್ರೆ ಭಾಳ ಖುಷಿಯಾಗದು. ಬರುವಾಗ ಹಬ್ಬದ ತಿಂಡಿನ್ಯಲ್ಲ ಗಂಟುಕಟ್ಟಿ ಕಳುಸರು. ನಾನು ತಂದ ಗಂಟ ರಾಮಣ್ಣ ನರಿ, ಕೋಳಿ ನೋಡಿದಂಗೆ ನೋಡಿ ಲಲ್ಲಲ್ಲಾ ಲಲ್ಲಲ್ಲಾ ಅಂತ ನಾಲಗೆಲೆ ಹಾಡೇಳನು. ಅವುನಿಗೆ ಖುಷಿಯಾದಾಗ ಲಿರಿಕ್ ಇಲ್ಲದ ಹಾಡು ಬರುವು. ಅದು ಬರಿ ಲಲ್ಲಲ್ಲಾ ಅಂತ. ನಾನದನ್ನ ನೆಗ್ಲೆಟ್ ಮಾಡಿದ್ರೆ, “ಅದೇನ್ಲ ಗಂಟು ಬಿಚ್ಚಲಾ, ವಬ್ನೆ ತಿನ್ನಕ್ಕೆ ಮಡಿಕಂಡಿದ್ದಿಯಾ” ಅನ್ನನು. ಆಗ ನಾನು, “ನಾನೂ ಹಂಚಿ ತಿನ್ನೋನು ಕನೊ, ವಬ್ನೆ ಯಾವತ್ತಾರ ತಿಂದಿದ್ದಿನಾ, ಗಂಟು ಬಿಚ್ಚಗಂಟ ವಸಿ ತಡಕೊ, ಅಂಗೆ ಬೊಬ್ಬೆ ವಾತನಂಗಾಡಬ್ಯಾಡ” ಅಂತಿದ್ದೆ.

“ಸುಮ್ಮನಂಗಂದೆ ಕಲ, ಆಟೊಂತರ ವಬ್ನೆ ತಿನ್ನಕೋದಿಯಾ. ನಿಮ್ಮ ಕಡೆ ಕರ್ಜಿಕಾಯಿ, ಚಿಕ್ಕಿನುಂಡೆ, ವಡಕಜ್ಜಾಯ ಚನ್ನಾಗಿರತವೆ ಕಲ. ವಯಿಸಾದೆಂಗೆಸರ ಕೈಯೇ ಚಂದ ಕಲ. ಹದ ಹಿಡಿದಿರತವೆ; ಅವುರು ಯಡಗೈಲಿ ಉಪ್ಪಾಕಿದ್ರೂ ಕರಟ್ಟಾಗಾಕ್ತರೆ. ವಡೆ ಅಗಿತ ಅಗಿತ ರುಚಿ ಬತ್ತವೆ.” ಅಂತ ನಮ್ಮಳ್ಳಿ ಹೆಂಗಸರ ಹೊಗಳೋನು. ಊರಿನಿಂದ ಏನಾರ ಬಾಡಿನೆಸರು ಕಳಿಸಿದ್ರೆ, “ಇರ್‍ಲ ವಸಿಯ, ಇಲ್ಲೆ ಬಂದೆ” ಅಂತ ಒಂದೇ ಉಸುರಿಗೋಡೋಗಿ ತ್ರಿಬಲ್ಲೆಕ್ಸ್ ರಂ ತರೋನು. ಅದೇನಾಗ ಐದು ರೂಪಾಯಿಗೊಂದು ಸೀಸ ಸಿಗದು. ಅದ ತಂದು ಮಟ್ಟವಾಗಿ ಕೂತಗಂಡು ಭಾಳ ಸ್ಟೈಲಾಗಿ ಜಾದೂ ಮಾಡೋನಂಗೆ ಮುಚ್ಚಳ ತಗದು ಗ್ಲಾಸಿಗುಯ್ಕಂಡು ಕುಡಿವಾಗ ನನ್ನ ಕಡಿಗೆ ಕಣ್ಣು ಬುಡೋನು. ಮದ್ಲೆ ಅವುನವು ಕೆಂಪುಕಣ್ಣು. ಯಣ್ಣೆ ಹೀರತ ಸುಖಪಡೊ ಭಂಗಿಯ ಈಗ್ಲು ಮರಿಯಂಗಿಲ್ಲ. ಅಮ್ಯಾಲೆ ಬಾಡಿನಿಲಕ ತಗದು ಬಾಯಿಗೆಸಗಳನು, ಅಂಗೆ ಅಣ್ಣೆಕಲ್ಯಸದಂಗೆ ಗುರಿಯಿಟ್ಟು ಅಂಗಳಿಗೆ ತಾಕಂಗೆ ಯಸಿಯನು. ಬಾಡಿನೆಸರು ಅಂದ್ರು ಸಾಕು ಮರಿಯನಂಗೆಯ. ನಮ್ಮ ಜನಗಳ ಆಗಿನಿಂದ್ಲೂ ನೋಡಿದ್ದಿನಿ, ವಡೆ ಪಯಸದ ಊಟ ಅಂದ್ರೆ ಅಂಗಾಡದಿಲ್ಲ. ಅಲ್ಲಿ ಯಾವ ಜಗಳನೂ ಇರದಿಲ್ಲ. ಅದೇ ಬಾಡಿನೆಸರು ಮಾಡಿದ ಪಾಸಾಲೆನೆ ಪ್ರಕ್ಷುಬ್ದವಾಗಿರತದೆ. ಈಗಂತು ಅಂತ ಜಾಗಕ್ಕೆ ಹೋಗಕ್ಕೆ ಭಯಾಯ್ತದೆ. ಬಾಡಿನೆಸರೂಟಕ್ಕೆ ಜನ ತಯಾರಾಗಿ ಬಂದಿರತರೆ. ರಾಮಣ್ಣಂಗೆ ಆಗಾಗ್ಗೆ ಬಾಡಿನೆಸರು ಮೆಸ್‌ಗೋಗಬೇಕು ಅನ್ಸದು. ಆಗ ನನ್ನ ಕರದು “ಬಾಲ ಬಾಯಿಕೆಟ್ಟದೆ ಹೋಗಮು” ಅನ್ನೋನು.

ರಾಮಣ್ಣ ಮೆಡಿಕಲ್ ಪುಸ್ತಕ ಓದದಕಿಂತ ಕತೆ ಕಾದಂಬರಿ ಓದೊನು. ಅವುನು ಮೆಡಿಕಲ್ ಓದಕ್ಕೆ ಅಂತ ಬಂದಿರಂಗೆ ಕಾಣ್ತಾಯಿರಲಿಲ್ಲ. ಅವುನು ಸುತ್ತ ಬ್ಯಾರೆ ಪುಸ್ತಕನೆ ಇರವು. ಹೊಸಹೊಸ ಪುಸ್ತಕ ತಂದು. ಮುಗಿಯೊವರಿಗೂ ಬುಡ್ತಿರಲಿಲ್ಲ. ಇದ ನೋಡಿದ ನಾವು “ಅದೇನು ಓದ್ತಿಯೋ, ಮೊದಲು ಸಬ್‌ಜೆಕ್ಟೋದು, ಅಮ್ಯಾಲೆ ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ” ಅಂದೆ, ಅವುನಿಗೆ ಸಿಟ್ಟು ಬಂದು, “ಅದೇನು ಕೇಮಿದ್ರ ಕೆಯಿಲ, ನಿನಿಗೇನು ಗೊತ್ತಾದತೂ ಸಾಯಿತ್ಯ ಅಂತಿದ್ದ.

“ಮದ್ಲು ಸಬ್‌ಜೆಕ್ಟು ಆಮ್ಯಾಲೆ ಸಾಹಿತ್ಯ ಕಣೊ” ಅಂದ್ರೆ “ಅಮಿಕ್ಕಂಡು ಕುತಗಳ್ಳ, ನಾನೀಗ ಚಂಬಲ್ ಕಣಿವೆ ಮಂಗಳ್ ಸಿಂಗ್ ಒತ್ತಾಯಿದ್ದಿನಿ ಕಲ. ಈ ನಮ್ಮ ವಿದ್ವಾಂಸರು ಕತೆ ಕಾದಂಬರಿ ತರನೆ ಸಬ್‌ಜಕ್ಟ್ ಬುಕ್ಕುನೂ ಬರದಿದ್ರೆ ಎಷ್ಟು ಚನ್ನಾಗಿರದ್ಲ” ಅಂದ.

“ಏನೋತ್ತಾಯಿದ್ದಿ ನೀನು?”

“ಹೇಳ್ಳಿಲವೇನ್ಲ ಚಂಬಲ್ ಕಣಿವೆ ಮಂಗಳ್ ಸಿಂಗ್ ಒತ್ತಾಯಿದ್ದಿನಿ. ಅವುನಕ್ಕನ್ ಏನ್ ಜನರಯ್ಯ ಅವುರು”.

“ಸರಿಯಪ್ಪ ಅದರ್‍ವಳಿಕೆನಿನ್ನ ಮೆಡಿಕಲ್ ಯಂಗೆ ಸೇರಸಮ?”

“ವಿಜ್ಞಾನ ಓದಿದೋನು ಸಾಯಿತಿಯಾದ್ರೆ ಬರಿಬವುದು ಕಲ” ಅಂದ.

“ಆಯ್ತು ನೀನೆ ಅಂತ ವಿಜ್ಞಾನದ ಸಾಯಿತಿ ಯಾರಾಗಬಾರದು” ಅಂದೆ.

“ಸುಮ್ಮನೆ ನಿಂದೇನದೆ ಅದ ಓದ್‌ಕಲ” ಅಂದ.

ರಾಮಣ್ಣ ಯಂತ ಗಿರಾಕಿ ಅಂದ್ರೇ, ಅವುನ ಸಬ್‌ಜೆಕ್ಟ್‌ನ ನನ್ನ ಕೈಲಿ ಜೋರಾಗಿ ಓದಕ್ಕೆ ಕೊಟ್ಟು ಸುಮ್ಮನೆ ಜಂತಿಗೆ ಕಣ್ಣು ಬುಟುಗಂಡು ನೋಡನು. ಅಮ್ಯಾಲೆ ನನ್ನ ಓದಿನ ಯಥಾವತ್ ಪದ ಬಳಸಿ ಬರಿತಿದ್ದ. ಕೇಳಿದ್ದನ್ನ ನ್ಯಾಪಗ ಇಟ್ಗಳದ್ರಲ್ಲಿ ನಿಸ್ಸೀಮ ಅವುನು. ಆದ್ರು ಪೇಲಾಗೋನು.

“ಸರಿಯಪ್ಪ ಇಷ್ಟು ಬುದ್ದಿವಂತ ಅದ್ಯಾಕ್ ಪೇಲಾಯ್ತೀ” ಅಂದ್ರೆ, “ಅದೇ ಕಲ ನನಿಗೂ ಆಶ್ಚರ್ಯ” ಅನ್ನೋನು. ಆದರೆ ನಿಜವಾಗಿ ಅವುನು ಪ್ರಾಕ್ಟಿಕಲ್‌ನಲ್ಲಿ ಡಲ್ಲಾಗಿದ್ದ. ಯಾಕಂದ್ರೆ ಪ್ರಾಕ್ಟಿಕಲ್ ಚಕ್ಕರ್ ಹೊಡದು ಊರಿಗೋಗಿಬುಡತಿದ್ದ. ಆಗ ಊರು ಅಂಗೇ ಇರತಿದ್ದೊ. ಅಲ್ಲಿನ ಬಾಂಧವ್ಯ ಸಮಂಧಿಕರ ಮಾತುಕತೆಯಿಂದ ಮನಸ್ಸು ತಣದಮ್ಯಾಲೆ ಮೈಸೂರಿಗೆ ಬರೋನು. ಈ ಸಮಂಧಕಿಂತ ಅವುನಿಗೆ ಪ್ರಾಕ್ಟಿಕಲ್ ಮುಖ್ಯ ಅನ್ನಸತಿರಲಿಲ್ಲ. ಆದ್ರೆ ಮೆಡಿಕಲ್ಲಲ್ಲಿ ಅದು ಬಹಳ ಮುಖ್ಯ. ಬೆಡ್ಡಲ್ಲಿರೊ ಪೇಷಂಟ್ ಮುಂಖಾಂತರ ಕಲಿಯೋದು ಬಹಳ ಮುಖ್ಯ. ಒಂಥರ ಅಕ್ಕಸಾಲಿಗ ಒಡವೆ ಹಿಡಕಂಡು ಉಜ್ಜತನೆ ನೋಡು, ಅಂಗೆ ಬೆಡ್ಡಲ್ಲಿರೊ ಪೇಷಂಟ್ ತಪಾಸಣೆ ಬಹಳ ಮುಖ್ಯ. ಆದ್ರಿಂದ ರಜ ಸಿಕ್ಕಿದೇಟಿಗೆ ಊರಿಗೋಗೊ ರಾಮಣ್ಣ ಪ್ರಾಕ್ಟಿಕಲಲ್ಲಿ ಡಲ್ಲಾಗಿದ್ದ. ಒಂದು ವೇಳೆ ಅವುನು ಊರಿಗೋಡೋಗದು, ಕತೆ ಬರಿಯ ಶ್ರಮನ್ಯಲ್ಲ ಇಲ್ಲಾಕಿದ್ರೆ ನಮ್ಮನ್ಯಲ್ಲ ಮೀರಿ ಒಳ್ಳೆ ಡಾಕ್ಟರಾಗೋನು.

“ಅಂಗಾಗಿದ್ರೆ ಕನ್ನಡಕ್ಕೆ ಒಬ್ಬ ಒಳ್ಳೆ ಕತೆಗಾರ ಸಿಗತಿರಲಿಲ್ಲ ಕಣಣ್ಣ. ಈ ನಾಡಲ್ಲಿ ಬೇಕಾದಷ್ಟು ಜನ ಡಾಕ್ಟರವುರೆ. ಆದ್ರೆ ಕನ್ನಡ ಸಾಹಿತ್ಯದಲ್ಲಿ ರಾಮಣ್ಣನಂತ ಕತೆಗಾರ ಇದ್ದುದ್ದು ಅವುನೊಬ್ಬನೆ. ಅದೂ ಯಂಥಾ ಕಾಲದಲ್ಲಿ ಅಂತೀ. ಅವುನು ಬರಿತಿದ್ದ ಕಾಲದಲ್ಲಿ ಕನ್ನಡದ ಮುಖ್ಯ ಕತೆಗಾರರೆಲ್ಲ ನವ್ಯ ಸಂವೇದನೆ ಮೈಮ್ಯಾಲ್ಯಳಕಂಡು ವಿಮರ್ಶಕರ ಮುಖಾಂತರ ನಮಗೆ ಅರ್ಥವಾಗದಂಗೆ ಕತೆ ಬರಿತಿದ್ರು. ಆದ್ರೆ ರಾಮಣ್ಣ ಈ ನ್ಯಲಕ್ಕೆ ನಿಷ್ಟನಾಗಿ ಬರದು ನೇರವಾಗಿ ನಮ್ಮ ಹೃದಯನ ತಟ್ಟೋನು. ಮನ ಮುಟ್ಟಂಗೆ ಬರತಿದ್ದ. ನಮಿಗ್ಯಲ್ಲ ಬರಿಯದ ಕಲಿಸಿದೋನೆ ಅವುನು. ಒಂದು ಕತೆಯಂತೂ ಇವತ್ನೋಡಿದ್ರು ನಮ್ಮನ್ನು ಅಲ್ಲಾಡಿಸಿಬುಡ್ತದೆ ಕಣಣ್ಣ, ಗಾಂಧಿ ಕತೆ ಓದಿದ್ದಿಯಾ. ಅದರಲ್ಲಿ ಗಾಂಧಿ ಹೆಸರಿನ ಹುಡುಗನ್ನ ಉಳಿಸಗಳಕ್ಕಾಗದಿಲ್ಲ. ಕರಿಸಿದ್ದೇಗೌಡ ದನನೊ ಅಥವಾ ಮರನೋ ಮಾರಿ ದುಡ್ಡು ತತ್ತನೆ. ಅಷ್ಟ್ರಲ್ಲಿ ಗಾಂಧಿ ಅವ್ವ ಅಳತಾ ಬಾಗಲಲ್ಲಿ ನಿಂತಿರತಳೆ. ಕರಿಸಿದ್ದೇಗೌಡ ಬಂದು ’ಜೀವ ಯಾವಾಗೊಯ್ತು’ ಅಂತನೆ. ಅಳನೆ ಅವಳುತ್ತರವಾಯ್ತದೆ. ಆಗ ಕರಿಸಿದ್ದೇಗೌಡ, ’ಮನುಸ್ರು ಸಾಯ್ದೆ ಕಲ್ಲು ಸತ್ತವಾ ಸುಮ್ನಿರು’ ಅಂತ ಗಾಂಧಿ ಶವ ತಗಳಕ್ಕೆ ಅಂತ ಡಾಕ್ಟರು ಕೇಳಕ್ಕೋಯ್ತನೆ. ರಾಮಣ್ಣ ಬರದ ಈ ಸಾಲು ಕನ್ನಡ ಸಾಹಿತ್ಯನೆ ಆಳ್ಳಾಡಿಸಿಬುಡ್ತು ಕಣಣ್ಣ.”

“ನಿಜ ರಾಮಣ್ಣನ ಕತೆಗಳು ಓದುಗರ ಮನಸ ಮುಟ್ಟಿದ್ಕೆ ಅಲವೆ ಅವುನು ವಳ್ಳೆ ಕತೆಗಾರ ಅನ್ನಿಸಿಗಂಡಿದ್ದು.”

“ರಾಮಣ್ಣ ನಮ್ಮ ಏರಿಯಾದ ಭಾಷೆನ ಯಾವುದೆ ಸಂಕೋಚವಿಲ್ಲದೆ ಬಳಸಿದ. ಲೇ ಆ ಕರ ಹಿಡಿಕಂಡೋಗಿ ಬಿತ್ತ ಕೆಚ್ಚಿಸಿಗಂಡು ಬಾರ್ಲ. ಸಿಕ್ಕಿದ ಹಸಿನ ಮ್ಯಾಲ್ಯಲ್ಲ ನ್ಯಗಿತದೆ” ಅಂತ ರಾಮಣ್ಣ ಬರದಿದ್ರಿಂದ ನಾವ್ಯಲ್ಲ ನಮ್ಮೂರ ಭಾಷೆ ಬಳಸಕ್ಕೆ ಧೈರ್ಯ ಮಾಡಿದ್ದು.”

“ಅಂತ ಮಾತು ಅವುನ ಕತೆಲಿ ತುಂಬಾ ಬತ್ತವೆ. ಆಲನಹಳ್ಳಿ ಕೃಷ್ಣ ಹಳ್ಳಿ ಕತೆ ಬರುದ್ರು, ರಾಮಣ್ಣನೇ ಬ್ಯಾರೆ ತರ ಬರಿಯೋನು. ಅವುನ ಕತೆ ಜನಪ್ರಗತಿಲೊ ಮಯೂರದಲ್ಲೊ ಪ್ರಜಾವಾಣಿಲೋ ಬಂದ್ರೆ ಅದೇ ಒಂದು ಸುದ್ದಿಯಾಗದು ಆ ಟೈಮಲ್ಲಿ. ಆಲನಹಳ್ಳಿ ’ಏನ್ಲ ರಾಮಣ್ಣ ಯಂಗಿದ್ದಿಲ’ ಅಂತ ಬಂದುಬುಡೋನು. ಅವುನು ಬಂದೇಟಿಗೆ ವಾಕ್ ಮಾಡೋರು. ನನಿಗೆ ರಾಮಣ್ಣ, ’ಹೋಗ್ಲಾ ಒಂದು ಮೂರು ಕಾಳು ಚೌಚೌ ತಗಂಬಾಲ ಅನ್ನೋನು’. ನಾನು ಹೋಗಿ ಕತೆಗಾರರಿಗೆ ಚೌಚೌ ಕಟ್ಟಿಸಿಗಂಡು ಬರಿವೆ”.

ಹೇಳ್ದವ್ರು: ಡಾ. ಕಮಲಾಕ್ಷಣ್ಣ
ಬರ್ಕಂಡವ್ರು: ಬಿ ಚಂದ್ರೇಗೌಡ


ಇದನ್ನೂ ಓದಿ: ಹಿಂಗಿದ್ದ ನಮ್ಮ ರಾಮಣ್ಣ-2; ಮಂಡ್ಯಜಿಲ್ಲೆ ಒರಟುತನ ಇಲವಲ್ಲಾ, ಇಷ್ಟು ನಯವಂತಿಕೆ ಯಂಗೆ ಬತ್ತೂ ಅನ್ನಕಂಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...