Homeಮುಖಪುಟರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ...

ರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ ಸ್ಪೀಕರ್ ಮೀರಾ ಕುಮಾರ್!

- Advertisement -
- Advertisement -

ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕೇಂದ್ರ ಸಚಿವೆ ಮೀರಾ ಕುಮಾರ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ತಂದೆ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ಕೂಡಾ ಜಾತಿ ವ್ಯವಸ್ಥೆಯಿಂದಾಗಿ ಎದುರಿಸಿದ್ದ ತಾರತಮ್ಯವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ದಲಿತ ಬಾಲಕನೊಬ್ಬ ಸವರ್ಣೀಯರಿಗೆ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿಸಿದ್ದಾರೆಂದು ಆರೋಪಕ್ಕೊಳಗಾಗಿ ಶಿಕ್ಷಕನಿಂದ ಹತ್ಯೆಯಾದ ಪ್ರಕರಣದ ವಿರುದ್ಧ ಮೀರಾ ಕುಮಾರ್ ಮಾತನಾಡಿದ್ದಾರೆ.

ಸೋಮವಾರದಂದು ಟ್ವೀಟ್‌ ಮಾಡಿರುವ ಮೀರಾ ಕುಮಾರ್ ಅವರು, “100 ವರ್ಷಗಳ ಹಿಂದೆ, ನನ್ನ ತಂದೆ ಬಾಬು ಜಗಜೀವನ್ ರಾಮ್ ಅವರಿಗೆ ಶಾಲೆಯಲ್ಲಿ ಸವರ್ಣ ಹಿಂದೂಗಳಿಗೆ ಮೀಸಲಾದ ಪಾತ್ರೆಯಿಂದ ನೀರನ್ನು ಕುಡಿಯಬಾರದು ಎಂದು ನಿಷೇಧಿಸಿದ್ದರು. ಆಗ ಅವರ ಪ್ರಾಣ ಉಳಿದಿದ್ದು ಒಂದು ಪವಾಡ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು, ಅದೇ ಕಾರಣಕ್ಕಾಗಿ ಒಂಬತ್ತು ವರ್ಷದ ದಲಿತ ಬಾಲಕನನ್ನು ಕೊಲ್ಲಲಾಗಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ, ಜಾತಿ ವ್ಯವಸ್ಥೆಯು ನಮ್ಮ ದೊಡ್ಡ ಶತ್ರುವಾಗಿ ಉಳಿದಿದೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೀರಾ ಕುಮಾರ್ ತನ್ನ ತಂದೆಯನ್ನು “ಅವಮಾನಗೊಳಿಸಲಾಗಿತ್ತು” ಮತ್ತು ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾತಿವಾದಿ ನಿಂದನೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನೇಜ್‌ಮೆಂಟ್‌ ಸರ್ಕಾರ | ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

1978 ರಲ್ಲಿ ವಾರಣಾಸಿಯಲ್ಲಿ ನಡೆದ ಘಟನೆಯೊಂದರ ಬಗ್ಗೆ ಮಾತನಾಡಿದ ಅವರು, ತಂದೆ ಸಂಪೂರ್ಣಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲು ಹೋಗಿದ್ದರು. ಅಲ್ಲಿ ಅವರಿಗೆ “ಜಗಜೀವನ್‌ ‘ಚಮ್ಮಾರ್’ ಇಲ್ಲಿಂದ ಹೋಗು” ಎಂದು ಹೇಳಲಾಗಿತ್ತು” ಎಂದು ಹೇಳಿದ್ದಾರೆ.

“ಪ್ರತಿಮೆ ‘ಕಲುಷಿತ’ವಾಗಿದೆ ಎಂದು ಅವರು ಅದನ್ನು ಗಂಗಾಜಲದಿಂದ ತೊಳೆದರು… ಜಾತಿ ವ್ಯವಸ್ಥೆಯು ಪ್ರತಿಯೊಬ್ಬರನ್ನು ಆವರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಬಾಡಿಗೆಗೆ ಸ್ಥಳವನ್ನು ಹುಡುಕುತ್ತಿರುವಾಗ ತನ್ನ ಜಾತಿಯ ಕುರಿತು ಕೇಳಿರುವ ಬಗ್ಗೆ ಮೀರಾ ಕುಮಾರ್ ಅವರು ನೆನಪಿಸಿಕೊಂಡಿದ್ದಾರೆ. “ಮನೆಯನ್ನು ಬಾಡಿಗೆಗೆ ನೀಡಲು ಹೊರಟಿದ್ದ ವ್ಯಕ್ತಿ ಹಿಂದೂ ಕೂಡ ಆಗಿರಲಿಲ್ಲ. ಅವರು ಕ್ರಿಶ್ಚಿಯನ್‌ ಆಗಿದ್ದರೂ… ಅವರು ನನ್ನನ್ನು ‘ನೀವು ಬ್ರಾಹ್ಮಣರೆ?’ ಎಂದು ಕೇಳಿದರು. ನಾನು, ‘ಅಲ್ಲ, ನಾನು ಬ್ರಾಹ್ಮಣನಲ್ಲ, ಪರಿಶಿಷ್ಟ ಜಾತಿ. ನಿಮಗೆ ಏನಾದರೂ ತೊಂದರೆ ಇದೆಯೇ?’ ಎಂದೆ. ಆಗ ಅವರು, ‘ಇಲ್ಲ’ ಎಂದರು. ಆದರೆ ಅವರು ನನಗೆ ಮನೆ ಕೊಡಲೇ ಇಲ್ಲ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

“ಈ ಬಗ್ಗೆ ನಾನು ನನ್ನ ತಂದೆಯನ್ನು, ‘ನೀವು ಸ್ವಾತಂತ್ರ್ಯಕ್ಕಾಗಿ ಏಕೆ ಹೋರಾಡಿದ್ದೀರಿ? ಈ ದೇಶ ನಿಮಗಾಗಿ ಏನನ್ನೂ ಮಾಡಿಲ್ಲ. ಅದು ನಿಮಗೆ ಅಥವಾ ನಿಮ್ಮ ಪೂರ್ವಜರಿಗೂ ಏನನ್ನೂ ನೀಡಿಲ್ಲ… ಎಂದು ಕೇಳಿದ್ದೆ’ ಅದಕ್ಕೆ ಅವರು, ‘ಸ್ವತಂತ್ರ ಭಾರತವು ಬದಲಾಗಲಿದ್ದು, ಜಾತಿ ರಹಿತ ಸಮಾಜ ನಿರ್ಮಾಣವಾಗಲಿದೆ’ ಎಂದು ಹೇಳಿದ್ದರು” ಎಂದು ಮೀರಾ ಅವರು ನೆನಪಿಸಿಕೊಂಡಿದ್ದಾರೆ.

“ಸ್ವಾತಂತ್ರ್ಯದ 75 ವರ್ಷಗಳ ನಂತರ ಕೂಡಾ ಭಾರತ ಬದಲಾಗಿಲ್ಲ ಎಂಬುವುದನ್ನು ನೋಡಲು ಅವರು ಈಗ ಇಲ್ಲ ಎಂಬುವುದೆ ನನಗೆ ಖುಷಿಯ ವಿಚಾರವಾಗಿದೆ” ಎಂದು ಮೀರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಜಲೋರ್‌ನ ಒಂಬತ್ತು ವರ್ಷದ ದಲಿತ ಬಾಲಕನ ಸಾವಿನ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪ್ರತಿಪಕ್ಷಗಳು ಮತ್ತು ಕಾಂಗ್ರೆಸ್‌ನ ಒಂದು ಬಣ ಕಿಡಿಕಾರಿದ್ದಾರೆ. ಅಲ್ಲದೆ ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಮತ್ತು ಸಿಎಂಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...