Homeಮುಖಪುಟರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ...

ರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ ಸ್ಪೀಕರ್ ಮೀರಾ ಕುಮಾರ್!

- Advertisement -
- Advertisement -

ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕೇಂದ್ರ ಸಚಿವೆ ಮೀರಾ ಕುಮಾರ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ತಂದೆ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ಕೂಡಾ ಜಾತಿ ವ್ಯವಸ್ಥೆಯಿಂದಾಗಿ ಎದುರಿಸಿದ್ದ ತಾರತಮ್ಯವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ದಲಿತ ಬಾಲಕನೊಬ್ಬ ಸವರ್ಣೀಯರಿಗೆ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿಸಿದ್ದಾರೆಂದು ಆರೋಪಕ್ಕೊಳಗಾಗಿ ಶಿಕ್ಷಕನಿಂದ ಹತ್ಯೆಯಾದ ಪ್ರಕರಣದ ವಿರುದ್ಧ ಮೀರಾ ಕುಮಾರ್ ಮಾತನಾಡಿದ್ದಾರೆ.

ಸೋಮವಾರದಂದು ಟ್ವೀಟ್‌ ಮಾಡಿರುವ ಮೀರಾ ಕುಮಾರ್ ಅವರು, “100 ವರ್ಷಗಳ ಹಿಂದೆ, ನನ್ನ ತಂದೆ ಬಾಬು ಜಗಜೀವನ್ ರಾಮ್ ಅವರಿಗೆ ಶಾಲೆಯಲ್ಲಿ ಸವರ್ಣ ಹಿಂದೂಗಳಿಗೆ ಮೀಸಲಾದ ಪಾತ್ರೆಯಿಂದ ನೀರನ್ನು ಕುಡಿಯಬಾರದು ಎಂದು ನಿಷೇಧಿಸಿದ್ದರು. ಆಗ ಅವರ ಪ್ರಾಣ ಉಳಿದಿದ್ದು ಒಂದು ಪವಾಡ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು, ಅದೇ ಕಾರಣಕ್ಕಾಗಿ ಒಂಬತ್ತು ವರ್ಷದ ದಲಿತ ಬಾಲಕನನ್ನು ಕೊಲ್ಲಲಾಗಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ, ಜಾತಿ ವ್ಯವಸ್ಥೆಯು ನಮ್ಮ ದೊಡ್ಡ ಶತ್ರುವಾಗಿ ಉಳಿದಿದೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೀರಾ ಕುಮಾರ್ ತನ್ನ ತಂದೆಯನ್ನು “ಅವಮಾನಗೊಳಿಸಲಾಗಿತ್ತು” ಮತ್ತು ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾತಿವಾದಿ ನಿಂದನೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನೇಜ್‌ಮೆಂಟ್‌ ಸರ್ಕಾರ | ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

1978 ರಲ್ಲಿ ವಾರಣಾಸಿಯಲ್ಲಿ ನಡೆದ ಘಟನೆಯೊಂದರ ಬಗ್ಗೆ ಮಾತನಾಡಿದ ಅವರು, ತಂದೆ ಸಂಪೂರ್ಣಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲು ಹೋಗಿದ್ದರು. ಅಲ್ಲಿ ಅವರಿಗೆ “ಜಗಜೀವನ್‌ ‘ಚಮ್ಮಾರ್’ ಇಲ್ಲಿಂದ ಹೋಗು” ಎಂದು ಹೇಳಲಾಗಿತ್ತು” ಎಂದು ಹೇಳಿದ್ದಾರೆ.

“ಪ್ರತಿಮೆ ‘ಕಲುಷಿತ’ವಾಗಿದೆ ಎಂದು ಅವರು ಅದನ್ನು ಗಂಗಾಜಲದಿಂದ ತೊಳೆದರು… ಜಾತಿ ವ್ಯವಸ್ಥೆಯು ಪ್ರತಿಯೊಬ್ಬರನ್ನು ಆವರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಬಾಡಿಗೆಗೆ ಸ್ಥಳವನ್ನು ಹುಡುಕುತ್ತಿರುವಾಗ ತನ್ನ ಜಾತಿಯ ಕುರಿತು ಕೇಳಿರುವ ಬಗ್ಗೆ ಮೀರಾ ಕುಮಾರ್ ಅವರು ನೆನಪಿಸಿಕೊಂಡಿದ್ದಾರೆ. “ಮನೆಯನ್ನು ಬಾಡಿಗೆಗೆ ನೀಡಲು ಹೊರಟಿದ್ದ ವ್ಯಕ್ತಿ ಹಿಂದೂ ಕೂಡ ಆಗಿರಲಿಲ್ಲ. ಅವರು ಕ್ರಿಶ್ಚಿಯನ್‌ ಆಗಿದ್ದರೂ… ಅವರು ನನ್ನನ್ನು ‘ನೀವು ಬ್ರಾಹ್ಮಣರೆ?’ ಎಂದು ಕೇಳಿದರು. ನಾನು, ‘ಅಲ್ಲ, ನಾನು ಬ್ರಾಹ್ಮಣನಲ್ಲ, ಪರಿಶಿಷ್ಟ ಜಾತಿ. ನಿಮಗೆ ಏನಾದರೂ ತೊಂದರೆ ಇದೆಯೇ?’ ಎಂದೆ. ಆಗ ಅವರು, ‘ಇಲ್ಲ’ ಎಂದರು. ಆದರೆ ಅವರು ನನಗೆ ಮನೆ ಕೊಡಲೇ ಇಲ್ಲ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

“ಈ ಬಗ್ಗೆ ನಾನು ನನ್ನ ತಂದೆಯನ್ನು, ‘ನೀವು ಸ್ವಾತಂತ್ರ್ಯಕ್ಕಾಗಿ ಏಕೆ ಹೋರಾಡಿದ್ದೀರಿ? ಈ ದೇಶ ನಿಮಗಾಗಿ ಏನನ್ನೂ ಮಾಡಿಲ್ಲ. ಅದು ನಿಮಗೆ ಅಥವಾ ನಿಮ್ಮ ಪೂರ್ವಜರಿಗೂ ಏನನ್ನೂ ನೀಡಿಲ್ಲ… ಎಂದು ಕೇಳಿದ್ದೆ’ ಅದಕ್ಕೆ ಅವರು, ‘ಸ್ವತಂತ್ರ ಭಾರತವು ಬದಲಾಗಲಿದ್ದು, ಜಾತಿ ರಹಿತ ಸಮಾಜ ನಿರ್ಮಾಣವಾಗಲಿದೆ’ ಎಂದು ಹೇಳಿದ್ದರು” ಎಂದು ಮೀರಾ ಅವರು ನೆನಪಿಸಿಕೊಂಡಿದ್ದಾರೆ.

“ಸ್ವಾತಂತ್ರ್ಯದ 75 ವರ್ಷಗಳ ನಂತರ ಕೂಡಾ ಭಾರತ ಬದಲಾಗಿಲ್ಲ ಎಂಬುವುದನ್ನು ನೋಡಲು ಅವರು ಈಗ ಇಲ್ಲ ಎಂಬುವುದೆ ನನಗೆ ಖುಷಿಯ ವಿಚಾರವಾಗಿದೆ” ಎಂದು ಮೀರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಜಲೋರ್‌ನ ಒಂಬತ್ತು ವರ್ಷದ ದಲಿತ ಬಾಲಕನ ಸಾವಿನ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪ್ರತಿಪಕ್ಷಗಳು ಮತ್ತು ಕಾಂಗ್ರೆಸ್‌ನ ಒಂದು ಬಣ ಕಿಡಿಕಾರಿದ್ದಾರೆ. ಅಲ್ಲದೆ ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಮತ್ತು ಸಿಎಂಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...