Homeಮುಖಪುಟರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ...

ರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ ಸ್ಪೀಕರ್ ಮೀರಾ ಕುಮಾರ್!

- Advertisement -
- Advertisement -

ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕೇಂದ್ರ ಸಚಿವೆ ಮೀರಾ ಕುಮಾರ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ತಂದೆ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ಕೂಡಾ ಜಾತಿ ವ್ಯವಸ್ಥೆಯಿಂದಾಗಿ ಎದುರಿಸಿದ್ದ ತಾರತಮ್ಯವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ದಲಿತ ಬಾಲಕನೊಬ್ಬ ಸವರ್ಣೀಯರಿಗೆ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿಸಿದ್ದಾರೆಂದು ಆರೋಪಕ್ಕೊಳಗಾಗಿ ಶಿಕ್ಷಕನಿಂದ ಹತ್ಯೆಯಾದ ಪ್ರಕರಣದ ವಿರುದ್ಧ ಮೀರಾ ಕುಮಾರ್ ಮಾತನಾಡಿದ್ದಾರೆ.

ಸೋಮವಾರದಂದು ಟ್ವೀಟ್‌ ಮಾಡಿರುವ ಮೀರಾ ಕುಮಾರ್ ಅವರು, “100 ವರ್ಷಗಳ ಹಿಂದೆ, ನನ್ನ ತಂದೆ ಬಾಬು ಜಗಜೀವನ್ ರಾಮ್ ಅವರಿಗೆ ಶಾಲೆಯಲ್ಲಿ ಸವರ್ಣ ಹಿಂದೂಗಳಿಗೆ ಮೀಸಲಾದ ಪಾತ್ರೆಯಿಂದ ನೀರನ್ನು ಕುಡಿಯಬಾರದು ಎಂದು ನಿಷೇಧಿಸಿದ್ದರು. ಆಗ ಅವರ ಪ್ರಾಣ ಉಳಿದಿದ್ದು ಒಂದು ಪವಾಡ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು, ಅದೇ ಕಾರಣಕ್ಕಾಗಿ ಒಂಬತ್ತು ವರ್ಷದ ದಲಿತ ಬಾಲಕನನ್ನು ಕೊಲ್ಲಲಾಗಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ, ಜಾತಿ ವ್ಯವಸ್ಥೆಯು ನಮ್ಮ ದೊಡ್ಡ ಶತ್ರುವಾಗಿ ಉಳಿದಿದೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೀರಾ ಕುಮಾರ್ ತನ್ನ ತಂದೆಯನ್ನು “ಅವಮಾನಗೊಳಿಸಲಾಗಿತ್ತು” ಮತ್ತು ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾತಿವಾದಿ ನಿಂದನೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನೇಜ್‌ಮೆಂಟ್‌ ಸರ್ಕಾರ | ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

1978 ರಲ್ಲಿ ವಾರಣಾಸಿಯಲ್ಲಿ ನಡೆದ ಘಟನೆಯೊಂದರ ಬಗ್ಗೆ ಮಾತನಾಡಿದ ಅವರು, ತಂದೆ ಸಂಪೂರ್ಣಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲು ಹೋಗಿದ್ದರು. ಅಲ್ಲಿ ಅವರಿಗೆ “ಜಗಜೀವನ್‌ ‘ಚಮ್ಮಾರ್’ ಇಲ್ಲಿಂದ ಹೋಗು” ಎಂದು ಹೇಳಲಾಗಿತ್ತು” ಎಂದು ಹೇಳಿದ್ದಾರೆ.

“ಪ್ರತಿಮೆ ‘ಕಲುಷಿತ’ವಾಗಿದೆ ಎಂದು ಅವರು ಅದನ್ನು ಗಂಗಾಜಲದಿಂದ ತೊಳೆದರು… ಜಾತಿ ವ್ಯವಸ್ಥೆಯು ಪ್ರತಿಯೊಬ್ಬರನ್ನು ಆವರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಬಾಡಿಗೆಗೆ ಸ್ಥಳವನ್ನು ಹುಡುಕುತ್ತಿರುವಾಗ ತನ್ನ ಜಾತಿಯ ಕುರಿತು ಕೇಳಿರುವ ಬಗ್ಗೆ ಮೀರಾ ಕುಮಾರ್ ಅವರು ನೆನಪಿಸಿಕೊಂಡಿದ್ದಾರೆ. “ಮನೆಯನ್ನು ಬಾಡಿಗೆಗೆ ನೀಡಲು ಹೊರಟಿದ್ದ ವ್ಯಕ್ತಿ ಹಿಂದೂ ಕೂಡ ಆಗಿರಲಿಲ್ಲ. ಅವರು ಕ್ರಿಶ್ಚಿಯನ್‌ ಆಗಿದ್ದರೂ… ಅವರು ನನ್ನನ್ನು ‘ನೀವು ಬ್ರಾಹ್ಮಣರೆ?’ ಎಂದು ಕೇಳಿದರು. ನಾನು, ‘ಅಲ್ಲ, ನಾನು ಬ್ರಾಹ್ಮಣನಲ್ಲ, ಪರಿಶಿಷ್ಟ ಜಾತಿ. ನಿಮಗೆ ಏನಾದರೂ ತೊಂದರೆ ಇದೆಯೇ?’ ಎಂದೆ. ಆಗ ಅವರು, ‘ಇಲ್ಲ’ ಎಂದರು. ಆದರೆ ಅವರು ನನಗೆ ಮನೆ ಕೊಡಲೇ ಇಲ್ಲ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

“ಈ ಬಗ್ಗೆ ನಾನು ನನ್ನ ತಂದೆಯನ್ನು, ‘ನೀವು ಸ್ವಾತಂತ್ರ್ಯಕ್ಕಾಗಿ ಏಕೆ ಹೋರಾಡಿದ್ದೀರಿ? ಈ ದೇಶ ನಿಮಗಾಗಿ ಏನನ್ನೂ ಮಾಡಿಲ್ಲ. ಅದು ನಿಮಗೆ ಅಥವಾ ನಿಮ್ಮ ಪೂರ್ವಜರಿಗೂ ಏನನ್ನೂ ನೀಡಿಲ್ಲ… ಎಂದು ಕೇಳಿದ್ದೆ’ ಅದಕ್ಕೆ ಅವರು, ‘ಸ್ವತಂತ್ರ ಭಾರತವು ಬದಲಾಗಲಿದ್ದು, ಜಾತಿ ರಹಿತ ಸಮಾಜ ನಿರ್ಮಾಣವಾಗಲಿದೆ’ ಎಂದು ಹೇಳಿದ್ದರು” ಎಂದು ಮೀರಾ ಅವರು ನೆನಪಿಸಿಕೊಂಡಿದ್ದಾರೆ.

“ಸ್ವಾತಂತ್ರ್ಯದ 75 ವರ್ಷಗಳ ನಂತರ ಕೂಡಾ ಭಾರತ ಬದಲಾಗಿಲ್ಲ ಎಂಬುವುದನ್ನು ನೋಡಲು ಅವರು ಈಗ ಇಲ್ಲ ಎಂಬುವುದೆ ನನಗೆ ಖುಷಿಯ ವಿಚಾರವಾಗಿದೆ” ಎಂದು ಮೀರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಜಲೋರ್‌ನ ಒಂಬತ್ತು ವರ್ಷದ ದಲಿತ ಬಾಲಕನ ಸಾವಿನ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪ್ರತಿಪಕ್ಷಗಳು ಮತ್ತು ಕಾಂಗ್ರೆಸ್‌ನ ಒಂದು ಬಣ ಕಿಡಿಕಾರಿದ್ದಾರೆ. ಅಲ್ಲದೆ ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಮತ್ತು ಸಿಎಂಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....