Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

- Advertisement -
- Advertisement -

ಬಾಲಕನೊಬ್ಬ ರಾಜಸ್ಥಾನಿ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಾಜಸ್ಥಾನದ ಜಲೋರ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ತನ್ನ ಶಾಲಾ ಶಿಕ್ಷಕನಿಂದಲೇ ಹಲ್ಲೆಗೊಳದ 9 ವರ್ಷದ ದಲಿತ ವಿದ್ಯಾರ್ಥಿ ಇಂದ್ರ ಕುಮಾರ್ ಮೇಘ್ವಾಲ್ ವಿಡಿಯೊ ಇದೆಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚೈಲ್ ಸಿಂಗ್ (40 ವರ್ಷ), ಶಾಲೆಯಲ್ಲಿ ಸವರ್ಣಿಯರಿಗೆ ಕುಡಿಯಲು ಮೀಸಲಿಟ್ಟಿದ್ದ ನೀರನ್ನು ದಲಿತ ಬಾಲಕ ಇಂದ್ರ ಕುಮಾರ್ ಕುಡಿದನೆಂದು ಕೋಪಗೊಂಡು ಬಾಲಕನಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಅಸ್ವಸ್ಥಗೊಂಡ ಬಾಲಕ ಮೃತಪಟ್ಟಿದ್ದಾನೆ. ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು, ಕೊಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ದೇಶದ ಆತ್ಮಸಾಕ್ಷಿಯನ್ನು ಕದಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದಿರುವ ಈ ಘಟನೆಯು ಅಮೃತ ಮಹೋತ್ಸವದ ವೈಭವವನ್ನು ಅಣಿಸಿದಂತಿದೆ. ಇದೆಲ್ಲದರ ನಡುವೆ ಬಾಲಕನ ಹತ್ಯೆಗೆ ಥಳುಕು ಹಾಕಿ ಕೆಲವು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇಲ್ಲಿ ಚರ್ಚಿಸಲಾಗುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮದ ಬಳಕೆದಾರರು ಬಾಲಕನ ಸಾವಿನ ಕುರಿತು ಹೀಗೆ ಬರೆದಿದ್ದಾರೆ: “ಇಂದ್ರನ  ನೆನಪು, ಎಂತಹ ಮುಗ್ಧತೆ, ಕೇವಲ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತೇನೆ ಎಂದು ಈ ಬಡ ಮಗುವಿಗೆ ಹೇಗೆ ತಿಳಿಯಬೇಕು? ಈ ಬಡ ಮಗುವಿಗೆ ಇಂತಹ ಕ್ರೂರ ಶಿಕ್ಷೆಯೇ? ಅವನಿಗೆ ಕೋಟಿ ನಮನಗಳು…”

ಹೀಗೆ ಕೆಲವು ಟಿಪ್ಪಣಿಗಳೊಂದಿಗೆ ವಿಡಿಯೊ ಹಂಚಿಕೆಯಾಗುತ್ತಿದೆ. ಹಾಗಿದರೆ ವೈರಲ್ ವಿಡಿಯೊದಲ್ಲಿ ಹಾಡಿಗೆ ನೃತ್ಯ ಮಾಡಿರುವ ಬಾಲಕ ಇಂದ್ರ ಮೇಘ್ವಾಲ್ ಎಂಬುದು ನಿಜವೇ?

ವೈರಲ್ ವಿಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಬಾಲಕ ಇಂದ್ರ ಕುಮಾರ್ ಮೇಘ್ವಾಲ್‌ ಅಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವೈರಲ್ ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ಬಾಲಕನ ಚಿತ್ರ, ಥಳಿತಕ್ಕೊಳಗಾಗಿ ಸಾವನಪ್ಪಿದ ದಲಿತ ವಿದ್ಯಾರ್ಥಿ ಇಂದ್ರ ಮೇಘ್ವಾಲ್‌ ಚಿತ್ರವನ್ನು ಹೋಲಿಕೆ ಮಾಡಿದಾಗ ಎರಡು ಬೇರೆ ಬೇರೆ ಎಂಬುದು ಸ್ಪಷ್ಟವಾಗುತ್ತದೆ. ಈ ಫೋಟೋಗಳ ನಡುವೆ ವ್ಯತ್ಯಾಸಗಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ವೈರಲ್ ವಿಡಿಯೋದಲ್ಲಿ ಹಾಡಿಗೆ ನೃತ್ಯ ಮಾಡುತ್ತಿರುವ ಬಾಲಕನ ಹೆಸರು ಹರೀಶ್ ಎಂದಾಗಿದೆ. ಈ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನೃತ್ಯ ಮಾಡುತ್ತಿರುವ ವಿಡಿಯೊವನ್ನು ವಿದ್ಯಾರ್ಥಿ ಹರೀಶನ ಶಾಲೆಯ ಶಿಕ್ಷಕರಾದ ಟಿ.ಆರ್‌. ಚೇಲಾ ರಾಮ್ ರೈಕಾ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  “ಜುಲೈ 30ರಂದು 2ನೇ ತರಗತಿ ವಿದ್ಯಾರ್ಥಿ ಹರೀಶ್, ನೋ ಬ್ಯಾಗ್ ಡೇ ಸಂದರ್ಭದಲ್ಲಿ ಆತ್ಮವಿಶ್ವಾಸದ ಪ್ರದರ್ಶನ ತೋರಿದನು” ಎಂಬ ಟಿಪ್ಪಣಿಯೊಂದಿಗೆ ಶಿಕ್ಷಕ ಚೇಲಾ ರಾಮ್‌ ಅವರು ಹಂಚಿಕೊಂಡಿರುವ ದೀರ್ಘ ವಿಡಿಯೊವನ್ನು ಇಲ್ಲಿ ಗಮನಿಸಬಹುದು. ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧಿಕೃತ ಫೇಸ್‌ಬುಕ್ ಪೇಜ್‌  ಪರಿಶೀಲಿಸಿದಾಗ ಅಲ್ಲಿಯೂ ಇದೇ ವಿಡಿಯೊವನ್ನು ಹಂಚಿಕೊಂಡಿರುವುದನ್ನು ನೋಡಬಹುದು.

ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುಣೇಶ ರಾಮ್ ಚೌಧರಿ ಅವರನ್ನು ಇಂಡಿಯಾ ಟುಡೆ ಸಂಪರ್ಕಿಸಿದ್ದು, “ವೀಡಿಯೊದಲ್ಲಿರುವ ಮಗು ನಮ್ಮ ಶಾಲೆಯ ವಿದ್ಯಾರ್ಥಿ ಹರೀಶ್ ಭೀಲ್”’ ಎಂದು ಸ್ಪಷ್ಟಪಡಿಸಿದ್ದಾರೆ. “ಆರು ವರ್ಷದ ಹರೀಶ್ 2 ನೇ ತರಗತಿಯಲ್ಲಿ ಓದುತ್ತಿದ್ದು, ನೃತ್ಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾನೆ. ಇದೇ ಆಗಸ್ಟ್ 15 ರಂದು ರಾಕಿಂಗ್ ಪ್ರದರ್ಶನ ನೀಡಿದ್ದಾನೆ” ಎಂದು ಚೌಧರಿ ಹೇಳಿದ್ದಾರೆ.

“ಜುಲೈ 30ರಂದು ಭೀಲ್ ಅವರ ವೈರಲ್ ನೃತ್ಯ ವೀಡಿಯೊವನ್ನು ಶಾಲೆಯ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ, ಜಲೋರ್ ಘಟನೆಯ ಹಿನ್ನೆಲೆಯಲ್ಲಿ ಕೆಲವರು ಹರೀಶನ ವಿಡಿಯೋವನ್ನು ಪ್ರಸಾರ ಮಾಡಲು ಪ್ರಾರಂಭಿಸಿದಾಗ ಶಾಲಾ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು” ಎಂದು ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ.

“ಭೀಲ್‌ನ ಮತ್ತೊಂದು ವಿಡಿಯೊವನ್ನು ನಮಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಪುಟಾಣಿ ಹರೀಶ್‌ ಭೀಲ್‌ ಮುಖ ಸ್ಪಷ್ಟವಾಗಿ ಕಾಣಬಹುದು. ಈ ವೀಡಿಯೊವನ್ನು ನೋಡಿದರೆ, ವೈರಲ್ ವೀಡಿಯೊದ ಹುಡುಗ ಹರೀಶ್‌ ಎಂಬುದು ಸ್ಪಷ್ಟವಾಗುತ್ತದೆ” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ಜಾಲೋರ್ ವರದಿಗಾರ ನರೇಶ್ ಸರ್ನೌ ವಿಷ್ಣೋಯ್ ಅವರು ಇಂದ್ರ ಕುಮಾರ್ ಮೇಘವಾಲ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ವೈರಲ್ ವೀಡಿಯೊದಲ್ಲಿರುವ ಬಾಲಕನ ಬಗ್ಗೆ ವಿಚಾರಿಸಿದಾಗ, “ವೈರಲ್ ಆಗಿರುವ ವಿಡಿಯೋದಲ್ಲಿರುವ ಬಾಲಕ ತನ್ನ ಮಗ ಇಂದ್ರ ಕುಮಾರ್ ಅಲ್ಲ” ಎಂದು ಮೃತ ವಿದ್ಯಾರ್ಥಿಯ ತಂದೆ ದೇವರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬಾಲಕನೊಬ್ಬ ನೃತ್ಯ ಮಾಡಿರುವ ವಿಡಿಯೋವು ರಾಜಸ್ಥಾನದಲ್ಲಿ ಹತ್ಯೆಯಾದ ಇಂದ್ರ ಮೇಘ್ವಾಲ್‌ದ್ದಲ್ಲ. ಈ ವಿಡಿಯೊದಲ್ಲಿರುವ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಹರೀಶ್‌ ಎಂದು ಸ್ಪಷ್ಟವಾಗಿದೆ.

ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಬದುಕಿರುವ ವ್ಯಕ್ತಿ ಮತ್ತು ಮನೆಯವರ ಭಾವನೆಗಳಿಗೆ ನೋವುಂಟಾಗುತ್ತದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....