Homeಕರ್ನಾಟಕಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಸೇವಾಲಾಲ್‌ರ ವಿಚಾರಗಳಿಗೂ ಆರ್‌ಎಸ್‌ಎಸ್‌ ಚಿಂತನೆಗೂ ಯಾವುದೇ ಸಂಬಂಧವಿಲ್ಲ ಎಂದು ಬಂಜಾರ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಸೇವಾಲಾಲ್ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್ ಶಿಬಿರ ನಡೆಸಲು ಮುಂದಾಗಿರುವುದಕ್ಕೆ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಎಸ್‌ಎಸ್ ಚಿಂತನೆಗಳಿಗೂ ಸಂತ ಸೇವಾಲಾಲರ ವಿಚಾರಗಳಿಗೂ ಯಾವುದೇ ಸಂಬಂಧವಿಲ್ಲ. ಗಾಂಧಿ ಹತ್ಯೆ ಮಾಡಿದ ಗೋಡ್ಸೆ ಆರ್‌ಎಸ್‌ಎಸ್‌ಗೆ ಸೇರಿದವನು. ಮಕ್ಕಳಿಗೆ ಬಂದೂಕು ನೀಡಿ ತರಬೇತಿ ಕೊಡುವ ಕೆಲಸವನ್ನು ಸಂಘಪರಿವಾರ ಮಾಡುತ್ತಿದೆ. ಸೇವಾಲಲ್‌ರ ಚಿಂತನೆಗಳು, ಆರ್‌ಎಸ್‌ಎಸ್‌ ಚಿಂತನೆಗಳಿಗೂ ಯಾವುದೇ ಸಂಬಂಧವಿಲ್ಲ. ಅವರ ಜನ್ಮಸ್ಥಳದಲ್ಲಿ ಶಿಬಿರ ನಡೆಸಬಾರದು ಎಂದು ಆಗ್ರಹಿಸಲಾಗುತ್ತಿದೆ.

ಸೆಪ್ಟೆಂಬರ್‌ 11ರಿಂದ 19ರವರೆಗೆ ಆರ್‌ಎಸ್‌ಎಸ್, ‘ಉದ್ಯೋಗಿ ಪ್ರಾಥಮಿಕ ಶಿಕ್ಷಣ ವರ್ಗ’ ಎಂಬ ಕಾರ್ಯಕ್ರಮವನ್ನು ಮಠದಲ್ಲಿ ಹಮ್ಮಿಕೊಂಡಿದೆ. ಬಂಜಾರ ಮಹಾಮಠದಲ್ಲಿ ಆರ್‌ಎಸ್ಎಸ್ ಶಿಬಿರ ಆಯೋಜನೆ‌ ಮಾಡಬಾರದು ಎಂದು ಸೇವಾಲಾಲ್ ಸಮಿತಿಯವರು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದಲ್ಲಿ ಕೋಮುವಾದ ಹರಡುತ್ತಿರುವ ಆರ್‌ಎಸ್ಎಸ್ ಎನ್ನುವ ಸಂಘಟನೆ ದಲಿತ, ಬಂಜಾರರ ಮೇಲೆ ದೌರ್ಜನ್ಯ ಎಸಗುತ್ತಲೇ ಬಂದಿದೆ‌. ಆರ್‌ಎಸ್‌ಎಸ್ ಶಿಬಿರ ಆಯೋಜನೆಗೆ ಅವಕಾಶ ಮಾಡಿಕೊಡಬಾರದು ಎಂದು ಕರುನಾಡು ಬಂಜಾರ ಸೇವಾ ಸೇನೆಯ ರಾಜ್ಯಾಧ್ಯಕ್ಷ ಲಕ್ಷ್ಮಣ್ ರಾಮಾವತ್ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ದಲಿತರಿಗೆ, ಬಂಜಾರರಿಗೆ ಮೀಸಲಾತಿ ನೀಡಿರುವುದನ್ನು, ಭಾರತದ ಸಂವಿಧಾನವನ್ನು ಒಪ್ಪದಿರುವ ಆರ್‌ಎಸ್‌ಎಸ್‌ನ ಶಿಬಿರ ಏರ್ಪಡಿಸಿರುವುದು ನ್ಯಾಯ ಸಮ್ಮತವಲ್ಲ. ಸಮುದಾಯದಲ್ಲಿ ತಾವೇ ನಾಯಕರೆಂದು ಬಿಂಬಿಸಿಕೊಂಡು ಆರ್‌ಎಸ್‌ಎಸ್ ಓಲೈಕೆ ಮಾಡಲು ಶಾಸಕ ಪಿ.ರಾಜೀವ್‌ ಏಕಪಕ್ಷೀಯವಾಗಿ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಸಮುದಾಯವನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

“ಸಚಿವ ಪ್ರಭು ಚೌವ್ಹಾಣ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಪ್ಲಾನ್‌ ಮಾಡಿದ್ದಾರೆ. ಸಚಿವ ಸ್ಥಾನ ಪಡೆಯಲು ಬಂಜಾರ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದರು.

“ಆರ್‌ಎಸ್‌ಎಸ್ ಓಲೈಕೆಗಾಗಿ ಪಿ. ರಾಜೀವ್ ಶಿಬಿರ ಆಯೋಜನೆ ಮಾಡಿಕೊಟ್ಟಿರುವುದು ಅಕ್ಷಮ್ಯ ಅಪರಾಧ. ರಾಜೀವ್ ಅವರನ್ನು ಬಹಿಷ್ಕರಿಸಬೇಕು. ಕೋಮುವಾದಿ ಸಂಘಟನೆಗಳಿಗೆ ಮಠದಲ್ಲಿ ಅವಕಾಶ‌ ಕೊಟ್ಟರೆ ನಾವು ಸುಮ್ಮನಿರಲ್ಲ. ಸೇವಾಲಾಲ್ ಜನ್ಮಸ್ಥಳ ಮಹಾಮಠದಲ್ಲಿ ಆರ್‌ಎಸ್ಎಸ್ ಶಿಬಿರ ಆಯೋಜನೆ ಆದರೆ ಬಂಜಾರ ಅಸ್ಮಿತೆಯನ್ನು ನಾಶಪಡಿಸಿದಂತೆ” ಎಂದು ಆತಂಕ ವ್ಯಕ್ತಪಡಿಸಿದರು.

“ಮಹಾಮಠದಲ್ಲಿ ಯಾವುದೇ ರಾಜಕೀಯ ಸಂಘಟನೆಗಳಿಗೆ ಅವಕಾಶ ಕೊಡುವುದಿಲ್ಲ. ಇಲ್ಲಿಯವರೆಗೆ ಯಾವುದೇ ಪಕ್ಷದ ಸಮ್ಮೇಳನ, ಸಂಘಟನೆಗಳಿಗೆ ಅವಕಾಶ ನೀಡಿಲ್ಲ.‌ ಇಂದು ಆರ್‌ಎಸ್‌ಎಸ್‌ನವರು ಬಂದಿದ್ದಾರೆ. ನಾಳೆ ಬಿಜೆಪಿಯವರು, ನಾಡಿದ್ದು ಕಾಂಗ್ರೆಸ್‌ನವರು ಬರುತ್ತಾರೆ. ಹೀಗಾಗಲು ಬಿಡುವುದಿಲ್ಲ. ಈ ಶಿಬಿರ ನಿಲ್ಲದಿದ್ದರೆ ಸೇವಾಲಾಲ್ ಜನ್ಮಸ್ಥಳದ‌ ಎದುರು ಹೋರಾಟ ಮಾಡುವುದು ನಿಶ್ಚಿತ” ಎಂದು ಎಚ್ಚರಿಕೆ ನೀಡಿದರು.

ಸೂರಗೊಂಡನಕೊಪ್ಪ ಬಂಜಾರರ ಧಾರ್ಮಿಕ ಕ್ಷೇತ್ರ. ಇಲ್ಲಿ ನಮ್ಮ ವೃದ್ಧರಿಗೆ, ಭಕ್ತಾದಿಗಳಿಗೆ ಆಶ್ರಯ ಕೊಡಬೇಕು. ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಕೇಂದ್ರಗಳನ್ನು ಇಲ್ಲಿ ತೆರೆಯಬೇಕು ಎಂಬುದು ನಮ್ಮ ಉದ್ದೇಶ. ಇದನ್ನು ಮಾಡುವುದು ಬಿಟ್ಟು ಮತೀಯವಾದಿ ಸಂಘಟನೆಯ ಶಿಬಿರ ನಡೆಸಲು ಮುಂದಾಗಿದ್ದಾರೆ ಎಂದರು.

“ಸಮುದಾಯದ ಜನಪ್ರತಿನಿಧಿಗಳು ಈ ಕುರಿತು ಪ್ರತಿಕ್ರಿಯೆ ನೀಡಬೇಕಿದೆ. ನಾವು ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಚರ್ಚೆ ಹುಟ್ಟಿಕೊಂಡಿದೆ. ಶಿಬಿರ ನಡೆಸಬೇಕೋ ಬೇಡವೋ ಎಂಬ ಚರ್ಚೆ ನಡೆಸಲು ಮಹಾಮಠ ಸಮಿತಿ ಆಗಸ್ಟ್‌ 21ರಂದು ಸಭೆ ನಡೆಸಲು ಮುಂದಾಗಿದೆ” ಎಂದು ಮಾಹಿತಿ ನೀಡಿದರು.

“ಸಂತ ಸೇವಾಲಾಲರ ಚಿಂತನೆಗೂ ಆರ್‌ಎಸ್‌ಎಸ್ ಚಿಂತನೆಗಳೂ ಯಾವುದೇ ಸಂಬಂಧವಿಲ್ಲ. ಆರ್‌ಎಸ್‌ಎಸ್‌ನವರಿಗೆ ನಮ್ಮ ಸಂಸ್ಕೃತಿಯ ಕುರಿತು ಒಂಚೂರು ಗೊತ್ತಿಲ್ಲ. ನಮ್ಮ ಸಂಸ್ಕೃತಿಯೇ ಬೇರೆ. ಅವರ ಸಂಸ್ಕೃತಿಯೇ ಬೇರೆ. ಮಕ್ಕಳ ಕೈಗೆ ಗನ್ ನೀಡಿ ಪ್ರಾಕ್ಟೀಸ್ ಮಾಡಿಸಿದ ಉದಾಹರಣೆಗಳನ್ನು ನೋಡಿದ್ದೇವೆ. ರಾಷ್ಟ್ರಪಿತ ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್‌ನವನು. ಆರ್‌ಎಸ್‌ಎಸ್‌ ಸಂಸ್ಕೃತಿಯನ್ನು ನಮ್ಮ ಸಂಸ್ಕೃತಿಯಲ್ಲಿ ಅಳವಡಿಸಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ಸ್ಪಷ್ಟಪಡಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯನ್ನು ಅವರು ನಡೆಸಿದ್ದಾರೆ.

ಇದನ್ನೂ ಓದಿರಿ: ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಮತ್ತೊಬ್ಬ ಬಂಜಾರ ಮುಖಂಡರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ಸೂರಗೊಂಡನಕೊಪ್ಪ ಇಡೀ ಬಂಜಾರ ಜನಾಂಗಕ್ಕೆ ಸೇರಿದ ಧಾರ್ಮಿಕ ಸ್ಥಳವೇ ಹೊರತು ಯಾವುದೇ ಒಬ್ಬ ವ್ಯಕ್ತಿಯ ಸ್ಥಿರಾಸ್ತಿಯಲ್ಲ. ಸೂರಗೊಂಡನಕೊಪ್ಪದಲ್ಲಿ ರೆಜಿಸ್ಟರ್ಡ್ ಮಹಾಮಠ ಸಮಿತಿಯಿದೆ. ಈ ರೀತಿಯ ಶಿಭಿರವನ್ನು ನಡೆಸುವುದಾದರೆ ಆ ಸಮಿತಿಗೆ ಮನವಿ ಮಾಡಬೇಕು, ಈ ಶಿಬಿರದ ಅಜೆಂಡಾ ಏನೆಂದು ತಿಳಿಸಬೇಕು. ಆಗ ಇದಕ್ಕೆ ಅನುಮತಿ ಕೊಡಬೇಕೋ ಬೇಡವೋ ಎನ್ನುವುದನ್ನು ಸಮಿತಿ ತೀರ್ಮಾನ ಮಾಡುತ್ತದೆ. ಅದನ್ನು ಬಿಟ್ಟು ಸಮಿತಿಯ ಅಪ್ಪಣೆಯೇ ಇಲ್ಲದೆ ಅವರ ಗಮನಕ್ಕೆ ಬಾರದೆಯೇ ಬಿತ್ತಿ ಪತ್ರಗಳನ್ನು ಪ್ರಿಂಟ್ ಮಾಡಿ ಹಂಚುತ್ತಾರೆಂದರೆ ಇದು ಅಕ್ಷಮ್ಯ ಅಪರಾಧ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯು ಕೂಡಲೇ ಕಾನೂನು ರೀತಿ ಕ್ರಮ ಜರುಗಿಸಬೇಕು ಇಲ್ಲವಾದರೆ ಮುಂದೆ ಬೇರೆ ಬೇರೆ ಸಂಘಟನೆಗಳು ಅಲ್ಲಿ ತಮ್ಮ ಸಿದ್ಧಾಂತವನ್ನು ಹೇರುವ ಕಾರ್ಯಕ್ರಮವನ್ನು ನಡೆಸಲು ಅನುಮತಿ ಕೇಳಿಕೊಂಡು ಬಂದಾಗ ಸಮಿತಿಯು ಅದರಿಂದಾಗುವ ವ್ಯತಿರಿಕ್ತ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇಡೀ ಬಂಜಾರ ಸಮುದಾಯ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಪೇಚಿಗೆ ಸಿಕ್ಕಿಹಾಕಿಕೊಳ್ಳಬೇಕಾಗುತ್ತದೆ. ಈ ಹಿಂದೆ ಯಾವುದೇ ಪಕ್ಷದ ಆಡಳಿತವಿದ್ದರೂ ಅನೇಕ ಅಧ್ಯಕ್ಷರುಗಳು ಪಕ್ಷಾತೀತವಾಗಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಅಭಿವೃದ್ಧಿ ಮಾಡಿದ್ದಾರೆ. ಇಂದು ಸೂರಗೊಂಡನಕೊಪ್ಪದ ಭಾಯಾಘಡ್ ಈ ಹಂತಕ್ಕೆ ಬರಬೇಕಾದರೆ ಅನೇಕ ಅಧಿಕಾರಿಗಳ, ರಾಜಕಾರಣಿಗಳ, ಸನುದಾಯದ ಹಿರಿಯರ, ಸ್ಥಳೀಯರ ಪರಿಶ್ರಮವಿದೆ ಎನ್ನುವ ಅರಿವು ಎಲ್ಲರಲ್ಲೂ ಇರಲಿ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

9 COMMENTS

  1. ಬ್ರಾಹ್ಮಣರಲ್ಲದ, ಬೇರೆಲ್ಲಾ ಸಾದುಸಂತರ, ಸ್ವಾಮೀಜಿಗಳ, ಮಟಾದೀಶರ ಹೆಸರು ಮತ್ತು ಕೊಡುಗೆಯನ್ನು ನಿರ್ನಾಮ ಮಾಡಿ, ಮುಂದಿನ ಪೀಳಿಗೆಗೆ ಅವರ ಹೆಸರೂ ಸಹ ದಕ್ಕಬಾರದು, ಎಂಬುದು ಮನುವಾದಿಗಳ ಹಿಡನ್ ಅಜೆಂಡಾ. ಇದನ್ನು ಅವರು ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ.

  2. ಸರಿಯಾಗಿ ಹೇಳಿದರಿ ಬ್ರೋ …
    ಬಂಜಾರಾ ಸಮಾಜವನ್ನು SC ST ಯಿಂದ ತೆಗದಾಕಬೇಕು ಎಂಬ ಒಳಸಂಚು ಈ ಮನೊವಾದಿಗಳದೆ ಅಲ್ಲವೇ? ..

  3. ಸಂತ ಸೇವಾಲಾಲ್ ಅವರು ಬಂಜಾರ ಸಮುದಾಯದ ಆದರ್ಶ ಪುರುಷರಾಗಿದ್ದಾರೆ. ಅವರ ಚಿಂತನೆಗಳು ಸಮುದಾಯದ ಅಭಿವೃದ್ಧಿಗೆ ಕಾರಣವಾಗಿದೆ ಆದರೆ ಆರ್ ಎಸ್ ಎಸ್ ವಿಚಾರಧಾರೆಗಳು ಸಮಾಜದಲ್ಲಿ ಕೋಮುಗಲಭೆಯನ್ನು ಸೃಷ್ಟಿ ಮಾಡಿ ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿದ್ದಾರೆ ಇಂತಹ ಸಂಘಟನೆಗಳಿಂದ ಕಿಂಚಿತ್ತು ಪ್ರಯೋಜನವಾಗುವುದಿಲ್ಲ.

  4. RSS ಬಗ್ಗೆ ಬಂಜಾರ ಸಮುದಾಯಕ್ಕೆ ಪ್ರತ್ಯೇಕವಾಗಿ ಯುವಕರಿಗೆ ಸರಿಯಾದ ಮಾಹಿತಿ ನೀಡಬೇಕಾಗಿದೆ, RSS ಅದು ಒಂದು ಮನುವಾದಿ ಸಿದ್ಧಾಂತದ ಆಧಾರದಲ್ಲಿ ಸ್ಥಾಪಿಸಿಕೊಂಡ ಸಂಘಟನೆ ಅದು ಕಳೆದ 75 ವರ್ಷದಲ್ಲಿ ಈ ದೇಶದಲ್ಲಿ ಸಹೋದರತೆಯಿಂದ ಜೀವಿಸಲು ಯಾರನ್ನೂ ಬಿಡಲಿಲ್ಲ

  5. ನೂರಾರು ವರ್ಷಗಳಿಂದ ಈ ಸಮುದಾಯ ಮೇಲ್ವರ್ಗದವರಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ… ಉಳುವವನೇ ಭೂಮಿಯ ಒಡೆಯ ಯೋಜನೆಯ ಫಲ ಮತ್ತು ಬಾಬಾ ಸಾಹೇಬರ ಸಂವಿಧಾನದ ಫಲವಾಗಿ ಇತ್ತೀಚಿನ ಹತ್ತರಿಂದ ಹದೈನೈದು ವರ್ಷಗಳಲ್ಲಿ ಬಂಜಾರ ಸಮುದಾಯ ತನ್ನ ಅಸ್ಮಿತೆಯನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತದೆ… ಅಂತಹದ್ದರಲ್ಲಿ ಗೆದ್ದ ಎತ್ತಿನ ಬಾಲ ಹಿಡಿಯುವಂತೆ ಈ ಸಮುದಾಯದ ಮಾತಲ್ಲಿ ಮೋಡಿ ಮಾಡುವ ರಾಜಕಾರಣಿಗಳ ಮಾತನ್ನು ಕೇಳಿ ಒಪ್ಪಿಗೆ ನೀಡದರೆಂದರೆ ಒಲೈಕೆಯ ರಾಜಕಾರಣಿಗಳು ಹಣ ಮತ್ತು ಪದವಿ ಪಡೆಯುತ್ತಾರೆ. ಆದರೆ ಈ ಸಮುದಾಯ ಬ್ರಾಹ್ಮಣ್ಯದ ಮತ್ತು ಬ್ರಾಹ್ಮಣರ ಗುಲಾಮರಾಗಬೇಕಾಗಬಹುದು..ಈ ಸಮುದಾಯದ ಕೆಲವರು ಈಗಾಗಲೇ ಅವರ ಸಿದ್ದಾಂತಗಳಿಗೆ ಪ್ರಭಾವಿತರಾಗಿ ಅವರ ಕಾಲ ಕಸವಾಗಿ ಬಿದ್ದಿದ್ದಾರೆ… ಮುಂದೊಂದು ದಿನ ಮನುಶಾಸ್ತ್ರವನ್ನೇ ಸಂವಿಧಾನವೆಂದು ನಂಬಿಸಿ ಬಿಡುತ್ತಾರೆ. ಮತ್ತೆ ಮನುವಿನ ಕಾಲದ ಶೋಷಣೆಗೆ ನಾವೆಲ್ಲರೂ ಒಳಗಾಗಬೇಕಾಗುತ್ತದೆ… ಎಚ್ಚರ ಈ ಹಿಂದೆ ನಮ್ಮವರಿಗೆ ಇವರಿಂದಲೇ ಶೋಷಣೆಗಳಾಗಿದ್ದನ್ನು ಮರಿಯಬೇಡಿ

  6. ನೂರಾರು ವರ್ಷಗಳಿಂದ ಈ ಸಮುದಾಯ ಮೇಲ್ವರ್ಗದವರಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ… ಉಳುವವನೇ ಭೂಮಿಯ ಒಡೆಯ ಯೋಜನೆಯ ಫಲ ಮತ್ತು ಬಾಬಾ ಸಾಹೇಬರ ಸಂವಿಧಾನದ ಫಲವಾಗಿ ಇತ್ತೀಚಿನ ಹತ್ತರಿಂದ ಹದೈನೈದು ವರ್ಷಗಳಲ್ಲಿ ಬಂಜಾರ ಸಮುದಾಯ ತನ್ನ ಅಸ್ಮಿತೆಯನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತದೆ… ಅಂತಹದ್ದರಲ್ಲಿ ಗೆದ್ದ ಎತ್ತಿನ ಬಾಲ ಹಿಡಿಯುವಂತೆ ಈ ಸಮುದಾಯದ ಮಾತಲ್ಲಿ ಮೋಡಿ ಮಾಡುವ ರಾಜಕಾರಣಿಗಳ ಮಾತನ್ನು ಕೇಳಿ ಒಪ್ಪಿಗೆ ನೀಡದರೆಂದರೆ ಒಲೈಕೆಯ ರಾಜಕಾರಣಿಗಳು ಹಣ ಮತ್ತು ಪದವಿ ಪಡೆಯುತ್ತಾರೆ. ಆದರೆ ಈ ಸಮುದಾಯ ಬ್ರಾಹ್ಮಣ್ಯದ ಮತ್ತು ಬ್ರಾಹ್ಮಣರ ಗುಲಾಮರಾಗಬೇಕಾಗಬಹುದು..ಈ ಸಮುದಾಯದ ಕೆಲವರು ಈಗಾಗಲೇ ಅವರ ಸಿದ್ದಾಂತಗಳಿಗೆ ಪ್ರಭಾವಿತರಾಗಿ ಅವರ ಕಾಲ ಕಸವಾಗಿ ಬಿದ್ದಿದ್ದಾರೆ… ಮುಂದೊಂದು ದಿನ ಮನುಶಾಸ್ತ್ರವನ್ನೇ ಸಂವಿಧಾನವೆಂದು ನಂಬಿಸಿ ಬಿಡುತ್ತಾರೆ. ಮತ್ತೆ ಮನುವಿನ ಕಾಲದ ಶೋಷಣೆಗೆ ನಾವೆಲ್ಲರೂ ಒಳಗಾಗಬೇಕಾಗುತ್ತದೆ… ಎಚ್ಚರ ಈ ಹಿಂದೆ ನಮ್ಮವರಿಗೆ ಇವರಿಂದಲೇ ಶೋಷಣೆಗಳಾಗಿದ್ದನ್ನು ಮರೆಯಬೇಡಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...