Homeಕರ್ನಾಟಕಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಮಹಿಳಾ ಆಯೋಗಕ್ಕೆ ಎಎಪಿ ದೂರು

ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಮಹಿಳಾ ಆಯೋಗಕ್ಕೆ ಎಎಪಿ ದೂರು

ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಈಗಾಗಲೇ ಕ್ಷಮೆ ಕೇಳಿದ್ದು, ಸ್ಪಷ್ಟನೆಯನ್ನೂ ನೀಡಿದ್ದಾರೆ.

- Advertisement -
- Advertisement -

ಯುವತಿಯರು ಸರಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆಗಸ್ಟ್‌ 12, 2022ರಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ಮಾತನಾಡಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು” ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದ್ದಾರೆ.

ಕ್ಷಮೆ ಕೇಳಿರುವ ಪ್ರಿಯಾಂಕ್ ಖರ್ಗೆ

ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆಯವರು ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಕ್ಷಮೆಯನ್ನೂ ಯಾಚಿಸಿದ್ದಾರೆ. “ರಾಜ್ಯ ಸರಕಾರವನ್ನು ಲಂಚ-ಮಂಚ ಸರ್ಕಾರ ಎಂದು ಕರೆದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಕೇಳಲು ಸಿದ್ದನಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆಯನ್ನು ನೀಡಿರುವ ಅವರು, “ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದ್ದೇನೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ. ಆದರೆ ಬಿಜೆಪಿ, ಹೆಣ್ಣು ಮಕ್ಕಳಿಗೆ ನಿಜವಾಗಿ ಅಪಮಾನ ಮಾಡಿರುವ ತನ್ನೆಲ್ಲಾ ನಾಯಕರ ಬಳಿ ರಾಜೀನಾಮೆ ಪಡೆದು ರಾಜ್ಯದ ಮಹಿಳಾ ಸಮುದಾಯಕ್ಕೆ ಎಸಗಿದ ಅವಮಾನಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಕೆಲಸ ಮಾಡಲಿದೆಯಾ? ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಬಿಜೆಪಿಯಿಂದ ಉತ್ತರವನ್ನು ನಿರೀಕ್ಷಿಸಬಹುದೇ?” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲಾ ಒಂದು ಹಗರಣಗಳು ದಿನಂಪ್ರತಿ ಬೆಳಕಿಗೆ ಬರುತ್ತಲೇ ಇವೆ. ಇದು ಈ ಸರ್ಕಾರದ ಭ್ರಷ್ಟಾಚಾರದ ವಿರಾಟ್ ರೂಪ ಹಾಗೂ ಲಂಚಕೋರ ಆಡಳಿತಕ್ಕೆ ಹಿಡಿದ ಕೈಗನ್ನಡಿ. ವಿಶೇಷವಾಗಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ರಾಜ್ಯದ ಸಾವಿರಾರು ಯುವಕರ ಕಣ್ಣಲ್ಲಿ ನೀರು ತರಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇತ್ತೀಚಿಗೆ ನಡೆದ KPTCL ಪರೀಕ್ಷೆಯಲ್ಲಿ ಆಗಿರುವ ಅಕ್ರಮಕ್ಕೆ ಯಾವುದೇ ಶಿಕ್ಷೆ ನೀಡಿದರೂ ಕಮ್ಮಿಯೇ. ಸರ್ಕಾರಿ ಕೆಲಸ ಒಂದಿಡೀ ಕುಟುಂಬವನ್ನೇ ಬಡತನದಿಂದ ಮೇಲೆತ್ತುವ, ಸುಭದ್ರ ಭವಿಷ್ಯ ಕಟ್ಟಿಕೊಡುವ ಅವಕಾಶ. ಲಂಚ ಪಡೆದು ಪರೀಕ್ಷೆಯಲ್ಲಿ ಅಕ್ರಮವಾಗಿ ಉತ್ತೀರ್ಣರಾಗುವ ಮೂಲಕ ವ್ಯವಸ್ಥಿತವಾಗಿ ಬಡವರ್ಗದ ಹಾಗೂ ಯೋಗ್ಯ ಯುವ ಜನರ ಕೈಯಿಂದ ಆ ಅವಕಾಶವನ್ನು ಕಿತ್ತುಕೊಳ್ಳುವುದನ್ನು ಈ ಭ್ರಷ್ಟ ಬಿಜೆಪಿ ಸರ್ಕಾರ ಸಕ್ರಮಗೊಳಿಸಿಬಿಟ್ಟಿದೆ. ಇದನ್ನು ವಿರೋಧಿಸಿ ನಾನು ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಈ ಸರ್ಕಾರವನ್ನು ಲಂಚ-ಮಂಚದ ಸರ್ಕಾರವೆಂದು ಕರೆದಿದ್ದೆ. ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು, ತನ್ನ ಭ್ರಷ್ಟ ರೂಪವನ್ನು ರಕ್ಷಿಸಿಕೊಳ್ಳಲು, ಹಾಗೂ ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನನ್ನ ಹೇಳಿಕೆಯನ್ನು ಅವರ ಅನುಕೂಲಕ್ಕೆ ತಕ್ಕಂತೆ ತಿರುಚಿ KPTCL ಅಕ್ರಮವನ್ನು ಈ ಮೂಲಕ ಮುಚ್ಚಿ ಹಾಕಲು ಬಿಜೆಪಿ ಹೊರಟು ನಿಂತಿದೆ” ಎಂದು ಟೀಕಿಸಿದ್ದಾರೆ.

“ಕೆಲಸಕ್ಕಾಗಿ ಬಂದ ಯುವತಿಯನ್ನು ಈ ಸರ್ಕಾರದ ಮಂತ್ರಿ ಮೋಸ ಮಾಡಿ, ಸಿಕ್ಕಿ ಬಿದ್ದು ರಾಜೀನಾಮೆ ನೀಡಬೇಕಾಯಿತು. ಆದರೆ ಅವರ ಬಳಿ ಕ್ಷಮೆಯನ್ನು ಬಿಜೆಪಿಯ ಯಾರೊಬ್ಬರೂ ಕೇಳಲಿಲ್ಲ. ಕೇಂದ್ರ ಮಂತ್ರಿಯೊಬ್ಬರು ಅಶ್ಲೀಲವಾಗಿ ಪರಸ್ತ್ರೀಯೊಬ್ಬರೊಂದಿಗೆ ನಡೆಸಿದ್ದ ವಿಡಿಯೋ ವೈರಲ್ ಆದಾಗ ಹೆಣ್ಣನ್ನು ತೃಣವಾಗಿ ಕಂಡಿದ್ದ ಅವರ ಬಳಿ ಬಿಜೆಪಿಯ ಯಾರೊಬ್ಬರೂ ಕ್ಷಮೆಗೆ ಆಗ್ರಹಿಸಲಿಲ್ಲ. ಸದನದಲ್ಲಿ ಕೂತು ಪಾರ್ನ್ ವೀಕ್ಷಿಸಿ ಇಡೀ ರಾಜ್ಯದ ಹೆಣ್ಣು ಕುಲಕ್ಕೆ ಅಪಮಾನ ಮಾಡಿದವರ ಬಳಿ ಕ್ಷಮೆಗೆ ಆಗ್ರಹಿಸಲಿಲ್ಲ, ಬದಲಾಗಿ ಮತ್ತೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬಂದರು, ಸೋತವರನ್ನು MLC ಮಾಡಿ DCM ಮಾಡಿದ್ದು ಇದೇ BJP ಪಕ್ಷ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿರಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಈ ಸರ್ಕಾರದ ಮಂತ್ರಿಯೊಬ್ಬರು ‘ಈ ರಾಜ್ಯದ ಯಾವ ಶಾಸಕ ಏಕ ಪತ್ನಿವೃತಸ್ಥ?’ ಎಂಬ ಪ್ರಶ್ನೆ ಬಿಜೆಪಿಗೆ ಈ ನಾಡಿನ ಹೆಣ್ಣು ಮಕ್ಕಳ ಅವಮಾನದಂತೆ ಕಂಡುಬರಲಿಲ್ಲ. ಈ ನಾಡಿನ ಹೆಣ್ಣು ಮಕ್ಕಳು ಕೆಲಸಕ್ಕಾಗಿ ಹೋದಾಗ ಅಶ್ಲೀಲವಾಗಿ ವರ್ತಿಸಿ ‘ಮೀ ಟೂ’ ಪ್ರಕರಣದಲ್ಲಿ ಬಿಜೆಪಿಯ ಇಬ್ಬರು ಸಂಸದರು ಸಿಕ್ಕಿ ಬಿದ್ದಾಗ ಬಿಜೆಪಿ ಅವರ ಬಳಿ ಕ್ಷಮೆ ಕೇಳಲಿಲ್ಲ. ಈ ರಾಜ್ಯದ ಸಚಿವ ಸಂಪುಟದ ಸಚಿವರ ‘ಮಂಚದ ವಿಚಾರ’ಕ್ಕೆ ಹೆದರಿ ಹೈಕೋರ್ಟ್ ನಿಂದ ಸ್ಟೇ ತಂದಾಗ ಬಿಜೆಪಿ ಇವರ್ಯಾರ ಬಳಿಯೂ ಕ್ಷಮೆ ಕೇಳಲಿಲ್ಲ ಎಂದಿದ್ದಾರೆ.

ಈ ಸರ್ಕಾರದ ಅನಿಷ್ಟ ಆಡಳಿತಕ್ಕೆ ಇವರ ಕಾರ್ಯಕರ್ತರೇ ‘ಜನಾಕ್ರೋಶ’ ರೂಪಿಸಿ ಇವರ ಜನೋತ್ಸವಕ್ಕೆ ಬ್ರೇಕ್ ಹಾಕಿದ್ದಾರೆ. ಇನ್ನು ಈಗಷ್ಟೆ ಬಿಜೆಪಿ ಸರ್ಕಾರದ ಮಂತ್ರಿಯೊಬ್ಬರು, ‘ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿಲ್ಲ, ಬದಲಿಗೆ ಮ್ಯಾನೇಜ್ಮೆಂಟ್ ನಡೆಸುತ್ತಿದ್ದೇವೆ’ ಎಂದು ಮಾತನಾಡಿರುವ ಆಡಿಯೋ ವೈರೆಲ್ ಆಗುತ್ತಿದೆ. ಈ ಸರ್ಕಾರದಲ್ಲಿ ಆಗಿರುವ ಹಾಗೂ ಈಗಲೂ ಘಟಿಸುತ್ತಿರುವ ಮಂಚ-ಲಂಚದ ಪ್ರಕರಣಗಳಿಗೆ ಕನ್ನಡಿಯಾಗಿ ಮಾತನಾಡುವುದು ವಿರೋಧ ಪಕ್ಷವಾಗಿ ನಮ್ಮ ಆದ್ಯ ಕರ್ತವ್ಯ. ಆ ಕೆಲಸವನ್ನು ಇಂದು ನಾವು ಸರಿಯಾಗಿ ನಿರ್ವಹಿಸುತ್ತಿರುವದರಿಂದಲೇ ಬಿಜೆಪಿ ನಾಯಕರು ಇಂದು ವಿಚಲಿತರಾಗಿ ಹೇಳಿಕೆ ನೀಡುತ್ತಿರುವುದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...