Homeಕರ್ನಾಟಕಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಸಿಪಿಐಎಂಎಲ್ ಲಿಬರೇಷನ್‌ನ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಅವರ ಬಿಡುಗಡೆಗೆ ಆಗ್ರಹಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ.

- Advertisement -
- Advertisement -

ಕೊಪ್ಪಳ ಜಿಲ್ಲೆ ಹುಲಿಹೈದರ್‌ನಲ್ಲಿ ನಡೆದ ಹಿಂಸಾಚಾರ, ಕೊಲೆ ಘಟನೆ ಖಂಡಿಸಿ ಹಾಗೂ ಹೋರಾಟಗಾರ ಸಣ್ಣ ಹನುಮಂತಪ್ಪ ಅವರನ್ನು ತಕ್ಷಣ ಬಿಡುಗಡೆಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಸಿಪಿಐ(ಎಂಎಲ್) ಲಿಬರೇಷನ್ ಪ್ರತಿಭಟನೆ ನಡೆಸಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆ.11ರಂದು ಹಿಂಸಾಚಾರ ನಡೆದು ಇಬ್ಬರು ಕೊಲೆಯಾಗಿದ್ದಾರೆ. ಯುವಕನೊಬ್ಬ ಜೀವನ್ಮರಣದ ಸ್ಥಿತಿಯಲ್ಲಿದ್ದು, ಈ ದುಷ್ಕೃತ್ಯಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು. ಪ್ರಕರಣವನ್ನು ಸಮಗ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಸಿಪಿಐಎಂಎಲ್ ಲಿಬರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು, ಮೈಸೂರು, ಕೊಪ್ಪಳ ಜಿಲ್ಲೆ ಗಂಗಾವತಿ, ಕನಕಗಿರಿ, ವಿಜಯನಗರ ಜಿಲ್ಲೆ ಹರಪನಹಳ್ಳಿ, ಕೋಲಾರ, ರಾಯಚೂರು ಜಿಲ್ಲೆ ಸಿಂಧನೂರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ,‌ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿಯನ್ನು ರವಾನಿಸಲಾಗಿದೆ.

ಸಿಪಿಐಎಂಎಲ್ ಲಿಬರೇಷನ್ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಮತ್ತು ಇತರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣವನ್ನು ಹಿಂಪಡೆದು ತಕ್ಷಣವೇ ಬಿಡುಗಡೆಗೊಳಿಸಬೇಕು. ಇಡೀ ಗಲಭೆ ಪ್ರಕರಣಕ್ಕೆ ಕಾರಣಕರ್ತರಾದ ಹನುಮೇಶ್ ನಾಯಕ ಮತ್ತು ರಮೇಶ ನಾಯಕರನ್ನು ತಕ್ಷಣವೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಹುಲಿಹೈದರ್ ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಖಚಿತಪಡಿಸಲು ಶಾಂತಿ ಸಭೆಯನ್ನು ಕರೆಯಬೇಕು, ಗಲಭೆ ಪ್ರಕರಣದಲ್ಲಿ ಕೊಲೆಗೀಡಾದ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು. ಈ ಪ್ರಕರಣದ ತನಿಖೆಯನ್ನು ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕರ್ತವ್ಯಲೋಪವೆಸಗಿದ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.

ಏನಿದು ಘಟನೆ?

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿತ್ತು. ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದರು. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾದರು. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...