Homeಕರ್ನಾಟಕಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಸಿಪಿಐಎಂಎಲ್ ಲಿಬರೇಷನ್‌ನ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಅವರ ಬಿಡುಗಡೆಗೆ ಆಗ್ರಹಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ.

- Advertisement -
- Advertisement -

ಕೊಪ್ಪಳ ಜಿಲ್ಲೆ ಹುಲಿಹೈದರ್‌ನಲ್ಲಿ ನಡೆದ ಹಿಂಸಾಚಾರ, ಕೊಲೆ ಘಟನೆ ಖಂಡಿಸಿ ಹಾಗೂ ಹೋರಾಟಗಾರ ಸಣ್ಣ ಹನುಮಂತಪ್ಪ ಅವರನ್ನು ತಕ್ಷಣ ಬಿಡುಗಡೆಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಸಿಪಿಐ(ಎಂಎಲ್) ಲಿಬರೇಷನ್ ಪ್ರತಿಭಟನೆ ನಡೆಸಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆ.11ರಂದು ಹಿಂಸಾಚಾರ ನಡೆದು ಇಬ್ಬರು ಕೊಲೆಯಾಗಿದ್ದಾರೆ. ಯುವಕನೊಬ್ಬ ಜೀವನ್ಮರಣದ ಸ್ಥಿತಿಯಲ್ಲಿದ್ದು, ಈ ದುಷ್ಕೃತ್ಯಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು. ಪ್ರಕರಣವನ್ನು ಸಮಗ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಸಿಪಿಐಎಂಎಲ್ ಲಿಬರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು, ಮೈಸೂರು, ಕೊಪ್ಪಳ ಜಿಲ್ಲೆ ಗಂಗಾವತಿ, ಕನಕಗಿರಿ, ವಿಜಯನಗರ ಜಿಲ್ಲೆ ಹರಪನಹಳ್ಳಿ, ಕೋಲಾರ, ರಾಯಚೂರು ಜಿಲ್ಲೆ ಸಿಂಧನೂರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ,‌ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿಯನ್ನು ರವಾನಿಸಲಾಗಿದೆ.

ಸಿಪಿಐಎಂಎಲ್ ಲಿಬರೇಷನ್ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಮತ್ತು ಇತರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣವನ್ನು ಹಿಂಪಡೆದು ತಕ್ಷಣವೇ ಬಿಡುಗಡೆಗೊಳಿಸಬೇಕು. ಇಡೀ ಗಲಭೆ ಪ್ರಕರಣಕ್ಕೆ ಕಾರಣಕರ್ತರಾದ ಹನುಮೇಶ್ ನಾಯಕ ಮತ್ತು ರಮೇಶ ನಾಯಕರನ್ನು ತಕ್ಷಣವೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಹುಲಿಹೈದರ್ ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಖಚಿತಪಡಿಸಲು ಶಾಂತಿ ಸಭೆಯನ್ನು ಕರೆಯಬೇಕು, ಗಲಭೆ ಪ್ರಕರಣದಲ್ಲಿ ಕೊಲೆಗೀಡಾದ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು. ಈ ಪ್ರಕರಣದ ತನಿಖೆಯನ್ನು ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕರ್ತವ್ಯಲೋಪವೆಸಗಿದ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.

ಏನಿದು ಘಟನೆ?

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿತ್ತು. ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದರು. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾದರು. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...