Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...