Homeರಾಜಕೀಯಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

ಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

- Advertisement -
- Advertisement -

ಮಾಚಯ್ಯ |

ಅಂತೂಇಂತೂ ಬ್ರಿಗೇಡ್ ಈಶ್ವರಪ್ಪ ಶಿವಮೊಗ್ಗ ಸಿಟಿಯಲ್ಲಿ ಗೆದ್ದು ನಿಟ್ಟುಸಿರು ಬಿಟ್ಟಿದ್ದಾರೆ. ಎತ್ತಿಂದೆತ್ತ ಲೆಕ್ಕ ಹಾಕಿದರೂ ಕಳೆದ ಸಲದ ಮೂರನೇ ಸ್ಥಾನ ಬಿಟ್ಟು ಮೇಲಕ್ಕೇಳುವ ಲಕ್ಷಣಗಳೇ ಈ ಚುನಾವಣೆಯ ಕೊನೆಯ ಕ್ಷಣದವರೆಗೆ ಈಶ್ವರಪ್ಪ ಮೊಗದಲ್ಲಿ ಕಾಣಿಸುತ್ತಿರಲಿಲ್ಲ. ತಾನು ಪಕ್ಷ ಬಿಟ್ಟು ಹೋಗಲು ಕಾರಣವಾಗಿದ್ದ, ವಾಪಾಸು ಬಂದಾಗಲೂ ರಾಯಣ್ಣ ಬ್ರಿಗೇಡ್ ಕಟ್ಟಿಕೊಂಡು ವಿಪರೀತ ಕಾಟ ಕೊಟ್ಟಿದ್ದ ಈಶ್ವರಪ್ಪರನ್ನು ಸೋಲಿಸಿ, ಅವರ ರಾಜಕೀಯ ಬದುಕಿಗೆ ಇತಿಶ್ರೀ ಹಾಡಲು ಸ್ವತಃ ಯಡ್ಯೂರಪ್ಪನವರೇ ಸಕಲ ಸನ್ನದ್ಧರಾಗಿದ್ದು ವಾಸ್ತವ. ಹಾಗೆ ನೋಡಿದರೆ ಈಶ್ವರಪ್ಪನಿಗೆ ಟಿಕೇಟು ಕೊಡೋದೇ ಯಡ್ಯೂರಪ್ಪನವರಿಗೆ ಇಷ್ಟವಿರಲಿಲ್ಲ. ಅದಕ್ಕೆಂದೇ ಕಳೆದ ಸಲದ ಕೆಜೆಪಿ ಹುರಿಯಾಳು ರುದ್ರೇಗೌಡರನ್ನು ಜಿಲ್ಲಾಧ್ಯಕ್ಷ ಮಾಡಿ, ಚುನಾವಣಾ ಮುಂಚೂಣಿಗೆ ತರುವ ಪ್ರಯತ್ನ ಮಾಡಿದ್ದೂ ಉಂಟು.

ಹೈಕಮಾಂಡ್ ಒತ್ತಡಕ್ಕೆ ಮಣಿದು ಟಿಕೇಟ್ ಕನ್ಫರ್ಮ್ ಮಾಡಿದ ಮೇಲೂ ಈಶ್ವರಪ್ಪರಿಗೆ ಸೋಲಿನ ರುಚಿ ತೋರಿಸಲು ಮಾಡಬೇಕಾದ ಮಸಲತ್ತುಗಳನ್ನೆಲ್ಲ ಯಡ್ಯೂರಪ್ಪ ಅಣಿ ಮಾಡಿಟ್ಟಿದ್ದರು. ಕೊನೇ ಕ್ಷಣದವರೆಗೆ ಕ್ಷೇತ್ರದೊಳಗೆ ಕಾಲಿಟ್ಟ ಎಂತವರಿಗೇ ಆದರೂ ಈಶ್ವರಪ್ಪನ ಮೂರನೇ ಸ್ಥಾನದ ದುರಂತ ಭವಿಷ್ಯ ಮುಖಕ್ಕೆ ರಾಚುತ್ತಿತ್ತು. ಅಂತದ್ದರಲ್ಲಿ ಬ್ರಾಹ್ಮಣ ಮತಗಳು ಗಣನೀಯ ಸಂಖ್ಯೆಯಲ್ಲಿರುವ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅದೇ ಬ್ರಾಹ್ಮಣ ಸಮುದಾಯದ ಕೆ.ಬಿ.ಪ್ರಸನ್ನ ಕುಮಾರ್‍ರನ್ನು ಹಿಂದಿಕ್ಕಿ ಬರೋಬ್ಬರಿ ಐವತ್ತು ಸಾವಿರ ಲೀಡ್‍ನಲ್ಲಿ ಈಶ್ವರಪ್ಪ ಗೆಲುವಿನ ಪತಾಕೆ ಹಾರಿಸುತ್ತಾರೆಂದರೆ ಹೇಗೆ ಸಾಧ್ಯ ಅನ್ನೋದು ಜನರನ್ನು ಕಾಡುತ್ತಿದೆ.

ಒನ್ಸ್ ಎಗೇನ್, ಈಶ್ವರಪ್ಪನವರ ಈ ಗೆಲುವಿನ ಹಿಂದೆ ಕೆಲಸ ಮಾಡಿರೋದು ಅದೇ ಹೈಕಮಾಂಡ್! ಶತಾಯಗತಾಯ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಅಧಿಕಾರದಿಂದ ದೂರ ಇಡಬೇಕೆಂದು ನಿರ್ಧರಿಸಿಕೊಂಡಿದ್ದ ಬಿಜೆಪಿ ಹೈಕಮಾಂಡ್‍ಗೆ ಒಂದೊಂದು ಸೀಟೂ ಮುಖ್ಯವೆನ್ನುವುದು ಮನದಟ್ಟಾಗಿ ಹೋಗಿತ್ತು. ಅದಕ್ಕೋಸ್ಕರ ಆಂತರಿಕ ಕಚ್ಚಾಟದಿಂದ ಕೈತಪ್ಪಿ ಹೋಗಬಹುದಾಗಿರುವ ಕ್ಷೇತ್ರಗಳನ್ನು ಪಟ್ಟಿ ಮಾಡಿ ಸಂಬಂಧಪಟ್ಟವರ ತಲೆಮೇಲೆ ಮೊಟಕುವ ಪ್ರಯತ್ನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾದಾಗ ಆ ಪಟ್ಟಿಯಲ್ಲಿ ಮೊದಲು ಕಾಣಿಸಿಕೊಂಡಿದ್ದೇ ಈಶ್ವರಪ್ಪನವರ ತವರುಮನೆ. ಸ್ವತಃ ಯಡ್ಯೂರಪ್ಪನವರೇ ಈಶ್ವರಪ್ಪನನ್ನು ಮಣಿಸಲು ರಹಸ್ಯ ಸಿದ್ಧತೆ ಮಾಡಿಕೊಂಡಿರೋದನ್ನು ಖಾತ್ರಿಪಡಿಸಿಕೊಂಡ ಅಮಿತ್ ಶಾ, ಯಡ್ಯೂರಪ್ಪನನ್ನು ಕರೆದು `ನಿಮ್ಮ ಸಿಎಂ ಆಗೋ ಕನಸು ನನಸಾಗಬೇಕು ಅಂದ್ರೆ, ನೀವು ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲೇಬೇಕು. ಅಕಸ್ಮಾತ್ ಆಯಪ್ಪ ಸೋತರೆ, ಅದಕ್ಕೆ ನೀವೇ ಜವಾಬ್ಧಾರರಾಗ್ತೀರಿ. ಆಮೇಲಿನ ಬೆಳವಣಿಗೆಗಳಿಗೆ ನಾವು ಹೊಣೆಯಲ್ಲ’ ಅನ್ನೋ ಸಾಫ್ಟ್ ಎಚ್ಚರಿಕೆ ರವಾನಿಸಿದ್ದರು. ಆನಂತರವೇ ಯಡ್ಯೂರಪ್ಪ ತನ್ನೆಲ್ಲಾ ರಣತಂತ್ರಗಳನ್ನು ರಿವರ್ಸ್ ಮಾಡಿ, ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲು ದಾಳ ಉರುಳಿಸಿದ್ದು. ಲಿಂಗಾಯತ ಮತಗಳು ಸಾಲಿಡ್ಡಾಗಿ ಈಶ್ವರಪ್ಪನಿಗೆ ಒಲಿದು ಬರುವಂತೆ ಫರ್ಮಾನು ಹೊರಡಿಸಿದ್ದಲ್ಲದೇ, ಸ್ಥಳೀಯ ಆರೆಸ್ಸೆಸ್ ನಾಯಕರನ್ನು ಬಳಸಿಕೊಂಡು ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೇನೆ ಬ್ರಾಹ್ಮಣ ಸಮುದಾಯಕ್ಕೆ ಅನುಕೂಲ, ಹಾಗಾಗಿ ಜಾತ್ಯಸ್ಥ ಅಂತ ಪ್ರಸನ್ನ ಕುಮಾರ್‍ಗೆ ಓಟ್ ಹಾಕುವ ಬದಲು ಕಮಲದ ಚಿಹ್ನೆಗೆ ಮತ ಹಾಕುವಂತೆ ಅಂಡರ್ ಕರೆಂಟ್ ಹರಿಸಿದ್ದರು. ಅದು ಈಶ್ವರಪ್ಪನವರನ್ನು ಅನಾಮತ್ತು ಮೂರನೇ ಸ್ಥಾನದಿಂದ ಮೇಲಕ್ಕೇರಿಸಿ, ಐವತ್ತು ಸಾವಿರ ಲೀಡ್‍ಗಳಲ್ಲಿ ಗೆಲ್ಲಿಸಿದೆ.

ಅಂದಹಾಗೆ, ಗೆದ್ದರೂ ಪಕ್ಷದೊಳಗೆ ಈಶ್ವರಪ್ಪರನ್ನು ಈ ಋಣಭಾರ ಭರ್ಜರಿಯಾಗೇ ಮೆತ್ತಗಾಗಿಸಲಿದೆ. ಅಂತದ್ದೊಂದು ಸಣ್ಣ ಸ್ಯಾಂಪಲ್ ಕೂಡಾ ಈಗಾಗಲೇ ಘಟಿಸಿದೆ. ಫಲಿತಾಂಶ ಹೊರಬಿದ್ದು ಅಧಿಕಾರದ ಹೊಸ್ತಿಲಿಗೆ ಬಂದು ಅಂಡು ಸುಟ್ಟ ಬೆಕ್ಕಿನಂತಾಗಿದ್ದ ಬಿಜೆಪಿಯು ಪಕ್ಷೇತರರು, ಕಾಂಗ್ರೆಸ್-ಜೆಡಿಎಸ್ ಅತೃಪ್ತರಿಗೆ ಗಾಳ ಹಾಕುವ ಪ್ರಯತ್ನದಲ್ಲಿತ್ತು. ಆಗ ರಾಣೇಬೆನ್ನೂರಿನಿಂದ ಕೋಳಿವಾಡರನ್ನು ಮುಕ್ಕಿಸಿ ಬಂದ ಕೆಪಿಜೆಪಿಯ ಆರ್.ಶಂಕರ್‍ನನ್ನು ಬಿಜೆಪಿ ಸಂಪರ್ಕಿಸಿ ಕುದುರಿಸಿಕೊಂಡಿದ್ದುಂಟು. ಆತ ಜಾತಿಯಲ್ಲಿ ಕುರುಬನಾದ್ದರಿಂದ ಮತ್ತು ಈಶ್ವರಪ್ಪನ ಕಳ್ಳುಬಳ್ಳಿ ಸಂಬಂಧಿಕನೂ ಆದ್ದರಿಂದ ಆತನನ್ನು ನಿಭಾಯಿಸುವ ಹೊಣೆಯನ್ನು ಈಶ್ವರಪ್ಪನಿಗೇ ಹೈಕಮಾಂಡ್ ವಹಿಸಿತ್ತು. ಆದರೆ ಈಶ್ವರಪ್ಪ ಕೊಂಚ ಮೈಮರೆತಿದ್ದರಿಂದ ಬೆಳಿಗ್ಗೆ ಬಿಜೆಪಿ ಜೊತೆಗಿದ್ದ ಶಂಕರ್ ಸಂಜೆಯ ವೇಳೆಗಾಗಲೇ ಸಿದ್ದರಾಮಯ್ಯನವರ ಪಡಸಾಲೆಯಲ್ಲಿ ಮುಖ ತೋರಿಸಿ ಜೈ ಅಂದ. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಹೈಕಮಾಂಡ್ ಪ್ರತಿನಿಧಿ ಪ್ರಕಾಶ್ ಜಾವ್ಡೇಕರ್, ಈಶ್ವರಪ್ಪನನ್ನು ಕರೆಸಿಕೊಂಡು `ಒಬ್ಬ ಎಮ್ಮೆಲ್ಲೆನ ನಿಮ್ಮ ಕೈಲಿ ನಿಭಾಯಿಸೋಕೆ ಆಗಲ್ವೇನ್ರೀ? ಇದಕ್ಕೋಸ್ಕರನೇನಾ ನಾವು ಯಡ್ಯೂರಪ್ಪಾಜಿಯ ಮನವೊಲಿಸಿ ನಿಮ್ಮನ್ನು ಗೆಲ್ಲಿಸಿಕೊಂಡದ್ದು. ನಿಮ್ಮ ಈ ಹೊಣೆಗೇಡಿತನದ ವಿರುದ್ಧ ಅಮಿತ್ ಶಾಜಿಗೆ ಕಂಪ್ಲೇಂಟ್ ಮಾಡ್ತೀನಿ’ ಅಂತ ಲೆಫ್ಟ್‍ರೈಟ್ ಕ್ಲಾಸ್ ತಗೊಂಡಿದ್ದರು. ಯಡ್ಯೂರಪ್ಪನವರ ಮರ್ಜಿಯಲ್ಲಿ ಗೆದ್ದಿರೋ ಈಶ್ವರಪ್ಪನೋರಿಗೆ ಭವಿಷ್ಯದಲ್ಲಿ ಇಂಥ ದೈನೇಸಿ ಬಹುಮಾನಗಳು ಸಾಕಷ್ಟು ಕಾದಿವೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...