Homeಮುಖಪುಟನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು...

ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ನಿಮ್ಮ ಮಾತು ಕೇಳಬೇಕು ಎಂಬುವುದಕ್ಕೆ ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿಲ್ಲ, ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ, ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ನಾನು ಇನ್ನೊಬ್ಬರ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಯ ದೊಡ್ಡ ಕೊಡುಗೆದಾರರಾಗಿದ್ದೇವೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?” ಎಂದು ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೆ ಮಾಧ್ಯಮದಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ಉಚಿತ ಸವಲತ್ತುಗಳು ನೀಡುವುದನ್ನು ‘ಪುಕ್ಕಟೆ ಕೊಡುಗೆ’ಗಳು ಎಂದು ಹೇಳುತ್ತಿರುವ ಮೋದಿ ನೇತೃತ್ವದ ಸರ್ಕಾರದ ನಿಲುವಿನ ಬಗ್ಗೆ ಅವರು ಮಾಡಿರುವ ವಾಗ್ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಗಳು ಏನು ಮಾಡಬಹುದು ಎಂಬುದನ್ನು ಒಕ್ಕೂಟ ಸರ್ಕಾರ ಯಾಕೆ ನಿರ್ಧರಿಸಬೇಕು ಎಂದು ತ್ಯಾಗ ರಾಜನ್ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತ್ಯಾಗ ರಾಜನ್, “ನೀವು ಹೇಳಿದ್ದನ್ನು ನಾವು ಕೇಳಬೇಕು ಎಂದು ಹೇಳುವುದಕ್ಕೆ ಒಂದೋ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನೀವು ವಿಷಯದಲ್ಲಿ ಪರಿಣತಿ ಹೊಂದಿದ್ದರೆ ಅಥವಾ ಅರ್ಥಶಾಸ್ತ್ರದಲ್ಲಿ ಡಬ್ಬಲ್ ಪಿಎಚ್‌ಡಿ ಹೊಂದಿದ್ದರೆ, ನೋಬೆಲ್ ಪ್ರಶಸ್ತಿ ಪಡೆದಿದ್ದರೆ, ನಮಗಿಂತ ಚೆನ್ನಾಗಿ ನೀವು ಕೆಲಸ ಮಾಡುತ್ತಿದ್ದರೆ, ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ ಎಂದಾದರೆ, ಸಾಲವನ್ನು ಕಡಿಮೆ ಮಾಡಿದ್ದೀರಿ ಎಂದಾದರೆ, ನೀವು ಉದ್ಯೋಗಗಳನ್ನು ಸೃಷ್ಟಿಸಿದ್ಧೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನಲೆಯನ್ನು ನೀವು ಹೊಂದಿದ್ದರೆ ನಾವು ನೀವು ಹೇಳುವುದನ್ನು ಕೇಳುತ್ತೇವೆ. ಆದರೆ ಇದು ಯಾವುದೂ ಇಲ್ಲದೆ, ನಾವು ಯಾಕೆ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ತಮಿಳುನಾಡು ಸರ್ಕಾರವು ಒಕ್ಕೂಟ ಸರ್ಕಾರದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದು ತ್ಯಾಗ ರಾಜನ್ ಅವರು ಪ್ರತಿಪಾದಿಸಿದ್ದಾರೆ.

“ನಾನು ಯಾರದೊ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ಅದು ದೇವರ ವಾಕ್ಯವೇ? ನಾನು ದೇವರನ್ನು ನಂಬುತ್ತೇನೆ, ಆದರೆ ಮನುಷ್ಯನೊಬ್ಬ ದೇವರು ಎಂದು ನಾನು ನಂಬುವುದಿಲ್ಲ. ಇನ್ನೊಬ್ಬರ ದೃಷ್ಟಿಕೋನವನ್ನು ನಾನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

“ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಮುಂದಿನ ಮೂರು ವರ್ಷವೂ ನಾನು ಚೆನ್ನಾಗಿ ಕೆಲಸ ಮಾಡುತ್ತೇನೆ ಎಂಬುವುದನ್ನು ಖಚಿತಪಡಿಸುತ್ತೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಗೆ ದೊಡ್ಡ ಕೊಡುಗೆದಾರರಾಗಿದ್ದು, ಅದಕ್ಕೆ ದೊಡ್ಡ ಮೊತ್ತವನ್ನು ನೀಡುತ್ತಿದ್ದೇವೆ. ಉದಾಹರಣೆಗೆ ಒಂದು ರುಪಾಯಿ ನಾವು ಒಕ್ಕೂಟ ಸರ್ಕಾರಕ್ಕೆ ನೀಡಿದರೆ ಅದು ನಮಗೆ 33-35 ಪೈಸೆ ಅಷ್ಟೆ ವಾಪಾಸು ನೀಡುತ್ತಿದೆ. ಇನ್ನೂ ನಮ್ಮಿಂದ ನಿಮಗೆ ಏನು ಬೇಕು?” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

“ಇಷ್ಟೆಲ್ಲಾ ಆಗಿಯೂ ನಾನು ಯಾಕೆ ನಿಮ್ಮ ಮಾತನ್ನು ಪಾಲಿಸಬೇಕು? ನಿಮ್ಮ ಮಾತನ್ನು ನಾನು ಪಾಲಿಸಬೇಕು ಎಂಬುವುದಕ್ಕೆ ಯಾವ ಆಧಾರವಿದೆ? ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿದೆಯೆ? ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ. ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ದೇವಲೋಕದಿಂದ ಹೆಚ್ಚುವರಿ ಸಾಂವಿಧಾನಿಕ ಆದೇಶಗಳೇನಾದರೂ ಬರುತ್ತಿದೆಯೆ? ನೀವು ಏನು ಹೇಳುತ್ತಿದ್ದೀರಿ?” ಎಂದು ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಉಚಿತ ಕೊಡುಗೆ’ ಸಂಸ್ಕೃತಿಯ ಚರ್ಚೆ ಇತ್ತೀಚೆಗೆ ರಾಜಕೀಯ ಚರ್ಚೆಯನ್ನು ಪಡೆದುಕೊಂಡಿದೆ. ಕಳೆದ ವಾರದ ಆರಂಭದಲ್ಲಿ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಹಣಕಾಸಿನ ಬಲವನ್ನು ಪರೀಕ್ಷಿಸಿ ಅದಕ್ಕೆ ಅನುಗುಣವಾಗಿ ಬಜೆಟ್ ನಿಬಂಧನೆಗಳನ್ನು ಮಾಡಿ ‘ಪುಕ್ಕಟೆ ಕೊಡುಗೆ’ಗಳ ನೀಡುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದರು.

ಈ ಮಧ್ಯೆ, ಹಲವಾರು ಉನ್ನತ ರಾಜಕೀಯ ನಾಯಕರು ‘ಉಚಿತ ಕೊಡುಗೆ’ ನೀತಿಯನ್ನು ಬೆಂಬಲಿಸಿದ್ದು, ಇದು ಜನ ಕಲ್ಯಾಣಕ್ಕಾಗಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉಚಿತ ಶಿಕ್ಷಣ ಮತ್ತು ಆರೋಗ್ಯ ‘ಉಚಿತ ಕೊಡುಗೆ’ಯಲ್ಲ ಎಂದು ಪ್ರತಿಪಾದಿಸಿದ್ದು, ಇವುಗಳು ಜನರಿಗೆ ಸಿಕ್ಕರೆ ಭಾರತವು ವಿಶ್ವದ ಅಗ್ರ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...