Homeಮುಖಪುಟ114 ಕೋಟಿ ವೀಕ್ಷಕರನ್ನು ಹೊಂದಿರುವ 8 ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿಷೇಧಿಸಿದ ಮೋದಿ ಸರ್ಕಾರ

114 ಕೋಟಿ ವೀಕ್ಷಕರನ್ನು ಹೊಂದಿರುವ 8 ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿಷೇಧಿಸಿದ ಮೋದಿ ಸರ್ಕಾರ

- Advertisement -
- Advertisement -

ತಪ್ಪು ಮಾಹಿತಿ ಹರಡುತ್ತಿದೆ ಎಂದು ಆರೋಪಿಸಿ ಒಟ್ಟು 114 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದಿದ್ದ ಎಂಟು ಯೂಟ್ಯೂಬ್ ಚಾನೆಲ್‌ಗಳನ್ನು ಒಕ್ಕೂಟ ಸರ್ಕಾರವು ನಿಷೇಧಿಸಿದೆ. ನಿಷೇಧಿಸಿದ ಒಟ್ಟು ಚಾನೆಲ್‌ಗಳಲ್ಲಿ ಏಳು ಭಾರತದ್ದಾಗಿದ್ದು, ಒಂದು ಪಾಕಿಸ್ತಾನದ್ದಾಗಿದೆ. “ನಿರ್ಬಂಧಿಸಲ್ಪಟ್ಟ ಚಾನಲ್‌ಗಳು ನಕಲಿ ಮತ್ತು ಭಾರತ ವಿರೋಧಿ ವಿಷಯಗಳ ಮೂಲಕ ಹಣಗಳಿಸಲಾಗುತ್ತಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚಾನೆಲ್‌ಗಳು ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯನ್ನು ಹರಡುತ್ತಿವೆ ಎಂದು ಸರ್ಕಾರ ಹೇಳಿದೆ. “ರಾಷ್ಟ್ರೀಯ ಭದ್ರತೆ ಮತ್ತು ವಿದೇಶಿ ರಾಜ್ಯಗಳೊಂದಿಗೆ ಭಾರತದ ಸ್ನೇಹ ಸಂಬಂಧಗಳ ದೃಷ್ಟಿಕೋನದಿಂದ ಚಾನೆಲ್‌ಗಳ ವಿಷಯವು ಸಂಪೂರ್ಣವಾಗಿ ಸುಳ್ಳು ಮತ್ತು ಸೂಕ್ಷ್ಮವಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೋಕತಂತ್ರ ಟಿವಿ, U&V TV, AM ರಜ್ವಿ, ಗೌರವಶಾಲಿ ಪವನ್ ಮಿಥಿಲಾಂಚಲ್, SeeTop5TH, Sarkari Update, Sab Kuch Dekho ನಿಷೇಧಕ್ಕೆ ಒಳಗಾಗಿರುವ ಏಳು ಭಾರತೀಯ ಯೂಟ್ಯೂಬ್ ಚಾನೆಲ್‌ಗಳಾಗಿವೆ.  ಪಾಕಿಸ್ತಾನ ಮೂಲದ ‘ನ್ಯೂಸ್ ಕಿ ದುನ್ಯಾ’ ಚಾನೆಲ್ ಅನ್ನು ಕೂಡಾ ನಿರ್ಬಂಧಿಸಲಾಗಿದೆ. ಸುಮಾರು 85 ಲಕ್ಷ ಬಳಕೆದಾರರು ಈ ಚಾನೆಲ್‌ಗಳಿಗೆ ಚಂದಾದಾರರಾಗಿದ್ದಾರೆ. ಇದಲ್ಲದೇ ಒಂದು ಫೇಸ್ ಬುಕ್ ಖಾತೆ ಮತ್ತು ಎರಡು ಫೇಸ್ ಬುಕ್ ಪೋಸ್ಟ್‌ಗಳನ್ನು ಕೂಡಾ ಬ್ಲಾಕ್ ಮಾಡಲಾಗಿದೆ.

ಇದನ್ನೂ ಓದಿ: ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

“ಬಳಕೆದಾರರನ್ನು ತಪ್ಪುದಾರಿಗೆ ಎಳೆಯಲು ಭಾರತ ಮೂಲದ ಚಾನೆಲ್‌ಗಳು ನಕಲಿ ಮತ್ತು ಸಂವೇದನಾಶೀಲ ಥಂಬ್‌ನೇಲ್‌ಗಳು, ಸುದ್ದಿ ನಿರೂಪಕರ ಚಿತ್ರಗಳು ಮತ್ತು ಕೆಲವು ಟಿವಿ ಸುದ್ದಿ ವಾಹಿನಿಗಳ ಲೋಗೋಗಳನ್ನು ಬಳಸುತ್ತಿರುವುದನ್ನು ಗಮನಿಸಲಾಗಿದೆ” ಎಂದು ಸರ್ಕಾರ ಹೇಳಿದೆ.

“ಸಚಿವಾಲಯದಿಂದ ನಿರ್ಬಂಧಿಸಲಾದ ಎಲ್ಲಾ ಯೂಟ್ಯೂಬ್ ಚಾನೆಲ್‌ಗಳು ತಮ್ಮ ವೀಡಿಯೊಗಳಲ್ಲಿ ಕೋಮು ಸೌಹಾರ್ದತೆ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭಾರತದ ವಿದೇಶಿ ಸಂಬಂಧಗಳಿಗೆ ಹಾನಿಕಾರಕವಾದ ಸುಳ್ಳು ವಿಷಯವನ್ನು ಹೊಂದಿರುವ ಜಾಹೀರಾತುಗಳನ್ನು ಪ್ರದರ್ಶಿಸುತ್ತಿವೆ” ಎಂದು ಸಚಿವಾಲಯ ಒತ್ತಿಹೇಳಿದೆ.

ಕಳೆದ ಡಿಸೆಂಬರ್‌ನಿಂದ ಒಕ್ಕೂಟ ಸರ್ಕಾರವು ಯೂಟ್ಯೂಬ್‌ನಲ್ಲಿನ 102 ಚಾನಲ್‌ಗಳು ಮತ್ತು ಹಲವಾರು ಇತರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

“ಭಾರತ ಸರ್ಕಾರವು ಅಧಿಕೃತ, ವಿಶ್ವಾಸಾರ್ಹ ಮತ್ತು ಸುರಕ್ಷಿತ ಆನ್‌ಲೈನ್ ಸುದ್ದಿ ಮಾಧ್ಯಮ ಪರಿಸರವನ್ನು ಖಾತ್ರಿಪಡಿಸಿಕೊಳ್ಳಲು ಬದ್ಧವಾಗಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ತಡೆಯುತ್ತದೆ” ಎಂದು ಒಕ್ಕೂಟ ಸರ್ಕಾರ ಆದೇಶದಲ್ಲಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...